ವಿಷಯಕ್ಕೆ ಹೋಗಿ

ಭಾರತ ರತ್ನ ಸಿ.ಎನ್‌.ಆರ್. ರಾವ್ ಅವರಿಗೆ ‘ಇನಿ’ ಅಂತರರಾಷ್ಟ್ರೀಯ ಪ್ರಶಸ್ತಿ

👉 ಪ್ರಚಲಿತ

ಭಾರತ ರತ್ನ ಸಿ.ಎನ್‌.ಆರ್. ರಾವ್ ಅವರಿಗೆ ‘ಇನಿ’ ಅಂತರರಾಷ್ಟ್ರೀಯ ಪ್ರಶಸ್ತಿ
=====================
ಬೆಂಗಳೂರು: ನವೀಕರಿಸಬಹುದಾದ ಇಂಧನ ಮೂಲ ಗಳು ಮತ್ತು ಇಂಧನ ಶೇಖರಣೆಗೆ ಸಂಬಂಧಿಸಿದ ಕ್ಷೇತ್ರ ದಲ್ಲಿ ಮಹತ್ವದ ಸಂಶೋಧನೆಗಾಗಿ ಖ್ಯಾತ ವಿಜ್ಞಾನಿ ಸಿ.ಎನ್‌.ಆರ್‌.ರಾವ್‌ ಅವರು ಅಂತರರಾಷ್ಟ್ರೀಯ ‘ಇನಿ’ ( Eni) ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಈ ಪ್ರಶಸ್ತಿ ಇಂಧನ ಕೇಂದ್ರದ ಮುಂಚೂಣಿ ಮತ್ತು ಅತ್ಯುನ್ನತ ಪ್ರಶಸ್ತಿಯಾಗಿದ್ದು, ಇಂಧನ ಸಂಶೋ ಧನೆಯ ನೋಬೆಲ್‌ ಪ್ರಶಸ್ತಿ ಎಂದೇ ಪರಿಗಣಿಸಲಾಗುತ್ತದೆ.
=======
ಪ್ರೊ.ರಾವ್‌ ಅವರು ಜಲಜನಕ ಆಧಾರಿತ ಇಂಧನದ ಮೇಲೆ ಅಧ್ಯ ಯನ ನಡೆಸಿದ್ದಾರೆ. ಈ ಇಂಧನ ಮೂಲ ಮಾತ್ರ ಇಡೀ ಮನುಕುಲಕ್ಕೆ ಉಪಯೋಗವಾಗಬಲ್ಲ ಏಕೈಕ ಮೂ ಲವಾಗಿ ಹೊರ ಹೊಮ್ಮಿದೆ. ಜಲಜನಕದ ಶೇಖರಣೆ, ದ್ಯುತಿರಸಾಯನ ವಿಜ್ಞಾನ ಮತ್ತು ವಿದ್ಯುದ್ರಸಾಯನ ಕ್ರಿಯೆ ಯಿಂದಲೂ ಜಲಜನಕ ಉತ್ಪಾದನೆ, ಸೌರಶಕ್ತಿಯಿಂದ ಜಲಜನಕ ಉತ್ಪಾದನೆ ಇವರ ಪ್ರಮುಖ ಸಾಧನೆಗಳಾಗಿವೆ.
========
ವಿಶೇಷವಾಗಿ ಲೋಹದ ಆಕ್ಸೈಡ್‌, ಕಾರ್ಬನ್‌ ನ್ಯಾನೊ ಟ್ಯೂಬ್‌ಗಳು, ಗ್ರಾಫೇನ್, ಬೊರಾನ್–ನೈಟ್ರೋಜನ್‌–ಕಾರ್ಬನ್‌ ಹೈಬ್ರಿಡ್‌ ವಸ್ತುಗಳು, ಮಾಲಿಬ್ಡಿನಮ್ ಸಲ್ಫೈಡ್‌ ಇವುಗಳನ್ನು ಇಂಧನ ಕ್ಷೇತ್ರದಲ್ಲಿ ಅನ್ವಯಗೊಳಿಸಿದ್ದು ಮಾತ್ರವಲ್ಲದೆ, ಹಸಿರು ಜಲಜನಕ ಉತ್ಪಾದನೆಗೆ ಇವರು ಕೊಡುಗೆ ನೀಡಿದ್ದಾರೆ. ಪ್ರಶಸ್ತಿಯ ಆಯ್ಕೆಗೆ ಈ ಅಂಶಗಳನ್ನು ಪ್ರಧಾನವಾಗಿ ಪರಿಗಣಿಸಲಾಗಿದೆ ಎಂದು ಭಾರತ ಸರ್ಕಾರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ತಿಳಿಸಿದೆ.
==========
‘ಈ ಪ್ರಶಸ್ತಿ ಪಡೆದ ಏಷ್ಯಾದ ಮತ್ತು ಭಾರತದ ಮೊದಲ ವಿಜ್ಞಾನಿ ಎಂಬ ಹಿರಿಮೆಗೆ ರಾವ್‌ ಪಾತ್ರರಾಗಿದ್ದಾರೆ. ವಿಶೇಷವಾಗಿ ಮುದ್ರಿತ ಚಿನ್ನದ ಪದಕ ಮತ್ತು ನಗದು ಒಳಗೊಂಡ ಈ ಪ್ರಶಸ್ತಿಯನ್ನು ಇಟಲಿಯ ಅಧ್ಯಕ್ಷ ಸರ್ಗಿಯೊ ಮಾಟ್ಟರೆಲ್ಲಾ ಅಕ್ಟೋಬರ್‌ 14 ರಂದು ಪ್ರೊ.ರಾವ್ ಅವರಿಗೆ ಪ್ರದಾನ ಮಾಡಲಿದ್ದಾರೆ’ ಎಂದು ಜವಾ ಹರ್ ಲಾಲ್ ನೆಹರೂ ವೈಜ್ಞಾನಿಕ ಸಂಶೋಧನಾ ಕೇಂದ್ರದ ಪ್ರಕಟಣೆ ತಿಳಿಸಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ನೊಳಂಬರ ಇತಿಹಾಸ

ನೊಳಂಬ ಕರ್ನಾಟಕದ ಈಗಿನ ಚಿತ್ರದುರ್ಗ ಜಿಲ್ಲೆ ಮತ್ತು ಅದರ ಸುತ್ತ ಮುತ್ತಣ ಪ್ರದೇಶವನ್ನೊಳಗೊಂಡಿದ್ದ ನೊಳಂಬಳಿಗೆ ಸಾಸಿರ ಎಂಬ ಪ್ರಾಂತ್ಯದ ಅಧಿಪತಿಗಳಾಗಿ 8ನೆಯ ಶತಮಾನದಲ್ಲಿ ಆಳ್ವಿಕೆಯನ್ನಾರಂಭಿಸಿ, ಮುಂದಿನ ಎರಡು ಶತಮಾನಗಳಲ್ಲಿ ಪ್ರಾಬಲ್ಯಗಳಿಸಿ, ಈಗಿನ ಚಿತ್ರದುರ್ಗ, ತುಮಕೂರು, ಕೋಲಾರ, ಬೆಂಗಳೂರು, ಜಿಲ್ಲೆಗಳನ್ನೂ ನೆರೆಯ ಅನಂತಪುರ, ಚಿತ್ತೂರು, ಧರ್ಮಪುರಿ ಜಿಲ್ಲೆಗಳನ್ನೂ ಒಳಗೊಂಡಿದ್ದ ನೊಳಂಬವಾಡಿ 32000 ಪ್ರಾಂತ್ಯದ ಪ್ರಭುಗಳಾಗಿ 11ನೆಯ ಶತಮಾನದ ಮಧ್ಯದವರೆಗೆ ಆಳ್ವಿಕೆ ನಡೆಸಿದ ಸಾಮಂತ ರಾಜರ ಮನೆತನ. ತಲಕಾಡಿನ ಗಂಗರೂ ರಾಷ್ಟ್ರಕೂಟರೂ ಕಲ್ಯಾಣ ಚಾಳುಕ್ಯರೂನೊಳಂಬರಿಗೆ ಸ್ವಲ್ಪಕಾಲ ಅಧೀನರಾಗಿದ್ದರು. ಕದಂಬ, ಗಂಗ ಮತ್ತು ಕಲ್ಯಾಣ ಚಾಳುಕ್ಯರೊಂದಿಗೆ ಇವರು ವಿವಾಹ ಸಂಬಂಧ ಬೆಳೆಸಿದ್ದರು. ಬಾಣರು, ವೈದುಂಬರು, ಚೋಳರು ಮುಂತಾದವರಿಗೂ ಇವರಿಗೂ ರಾಜಕೀಯ ಸಂಬಂಧವಿತ್ತು. ನದಿಯ ಲಾಂಛನ ಹೊಂದಿದ್ದ ಇವರ ರಾಜಧಾನಿ ಪೆಂಜೀರು ಅಥವಾ ಹೆಂಜೇರು. ಆಂಧ್ರ ಪದೇಶದ ಅನಂತಪುರ ಜಿಲ್ಲೆಯ ಹೇಮಾವತಿಯೇ ಇದೆಂದು ಗುರುತಿಸಲಾಗಿದೆ. ನೊಳಂಬ ಎಂಬ ಹೆಸರು ಹೇಗೆ ಬಂತೆಂಬುದು ಸ್ಪಷ್ಟವಾಗಿಲ್ಲ. ಈಶ್ವರ ವಂಶಜನಾದ ಕಂಚೀಪತಿ ಎಂದು ಶಾಸನವೊಂದರಲ್ಲಿ ವರ್ಣಿತನಾಗಿರುವ ತ್ರಿಣಯನ ಪಲ್ಲವ ಎಂಬುವನು ನೊಳಂಬರ ಮೂಲಪುರುಷ. ಇವನ ವಂಶದಲಿ ಹುಟ್ಟಿದವನು ಮಂಗಳ ನೊಳಂಬಾಧಿ ರಾಜ (ಸು. 730-ಸು. 775). ಹೇಮಾವತಿ ಶಾಸನದ ಪ್ರಕಾರ ಇವನು ಕಿರಾತ ನೃಪತಿಯನ್ನು ಜಯಿಸಿದ; ಕರ್ಣಾಟರಿಂ...

ಕರ್ನಾಟಕದ ಪ್ರದರ್ಶನ ಕಲೆಗಳು OEC HISTORY

ಕರ್ನಾಟಕದ ಜಾನಪದ ಕಲೆಗಳು ಗ್ರಾಮೀಣ ಬದುಕಿನ ಅನಕ್ಷರಸ್ಥರಲ್ಲಿನ ಜಾನಪದ ಕಲೆಗಳು, ಹಾಡು, ಗಾದೆ ನಗರ ಬದುಕಿನ ಜನಕ್ಕೆ ವಿಶಿಷ್ಟ ಸಂವೇದನೆಯನ್ನುಂಟು ಮಾಡಿವೆ. ಗ್ರಾಮಗಳ ದೈನಿಕ ಬದುಕು ಆರಂಭವಾಗುವುದೇ ಇಂಥ ಜನಪದ ಹಾಡು-ಹಬ್ಬ ಆಚರಣೆಗಳಿಂದ. ಇವೊತ್ತಿನ ವಿಜ್ಞಾನಯುಗ ಪರಂಪರಾಗತ ಕಲೆಗಳನ್ನು ಮರೆಸುವಂತೆ ನಾಗಾಲೋಟಕ್ಕೆ ಓಡುತ್ತಿದೆ. ಹೀಗಿದ್ದೂ ನಗರ ಬದುಕಿನ ಈ ಜನಕ್ಕೆ `ಜನಪದ' ಮನರಂಜನೆಯನ್ನೀಯುವ ಮಟ್ಟಕ್ಕೆ ಸೀಮಿತವಾಗಿದೆಯೇನೋ ಅನ್ನುವ ಸಂಶಯ ಮೂಡಿದೆ. ಇದು ವಾಸ್ತವವೂ ಕೂಡ. ಈ ಜಾನಪದ ಪ್ರಕಾರವನ್ನು ಸಂಸ್ಕೃತಿಯ ಒಂದು ಭಾಗವೆಂದು ಭಾವಿಸಬೇಕಾಗಿರುವುದರಿಂದ ಇದರ ಉಳಿವು ನಮ್ಮ ಕೈಲಿದೆ. ಕಲಾವಿದರಿಗೆ ಪ್ರಶಸ್ತಿ, ಪುರಸ್ಕಾರ ನೀಡಿ ಗ್ರಾಮೀಣ ಪ್ರತಿಭೆಗಳನ್ನು ಹುಡುಕಿ ಈ ಪ್ರಕಾರದ ಜೀವಂತಿಕೆಗೆ ಶ್ರಮಿಸಬೇಕಾದ ಅಗತ್ಯವಿದೆ. ಅನೇಕ ಗ್ರಾಮೀಣ ಕಲೆ ಮತ್ತು ಆಚರಣೆಗಳು ಸಮಾಜದ ಮುಖ್ಯವಾಹಿನಿಗೆ ಬಾರದೆ ಎಲೆಮರೆಯ ಕಾಯಾಗಿ ಮರೆಯಲ್ಲಿಯೇ ಅಳಿದು ಹೋಗುತ್ತಿವೆ. ಅದರ ಸೊಗಡನ್ನು ಉಳಿಸುವ ಮತ್ತು ಮುಂದಿನ ತಲೆಮಾರಿಗೆ ಇದರ ಸವಿಯನ್ನು ಉಳಿಸಿ ಉಣಬಡಿಸುವ ಗುರುತರವಾದ ಜವಾಬ್ದಾರಿಯು ಪ್ರಜ್ಞಾವಂತ ನಾಗರಿಕರ ಜವಾಬ್ದಾರಿಯಾಗಿದೆ. ವೀರಗಾಸೆ ವೀರಗಾಸೆಯು ಸಾಮೂಹಿಕ ನೃತ್ಯವನ್ನೊಳಗೊಂಡ ಕರ್ನಾಟಕದ ಒಂದು ಜನಪದ ಕಲೆ. ಶೈವ ಸಂಪ್ರದಾಯದ ಧಾರ್ಮಿಕ ವೀರನೃತ್ಯ. ನೃತ್ಯದ ನಡುವೆ ಕನಿಷ್ಠ ಎರಡು ಜನ ಕಲಾವಿದರುಗಳು ಸೇರಿ ಒಡಪು ಹೇಳುವ ಕಾರ್ಯಕ್ರಮ ನಡೆಸಿಕೊಟ್ಟರೆ, ಗರಿಷ್ಠ ಮೂವತ್...

ಭಾರತದ ಪ್ರಮುಖ ಭೌಗೋಳಿಕ ಲಕ್ಷಣಗಳು ಮತ್ತು ಅವುಗಳ ಪ್ರಭಾವ

ಭಾರತದ ಪ್ರಮುಖ ಭೌಗೋಳಿಕ ಲಕ್ಷಣಗಳು ಮತ್ತು ಅವುಗಳ ಪ್ರಭಾವ ಭೂಗೋಳವು ಇತಿಹಾಸದೊಡನೆ ನಿಕಟ ಸಂಬಂಧ ಹೊಂದಿದೆ. ಯಾವುದೇ ಪ್ರದೇಶದ ಮಾನವನ ಜೀವನಕ್ರಮ ಮತ್ತು ಇತಿಹಾಸ ಅಲ್ಲಿನ ಭೌಗೋಳಿಕ ಲಕ್ಷಣಗಳನ್ನು ಅವಲಂಬಿಸಿರುತ್ತದೆ. ಪ್ರಕೃತಿ ಲಕ್ಷಣಗಳಲ್ಲಿ ಬದಲಾವಣೆಯಾಗುತ್ತಲೇ ಇರುತ್ತದೆ. ಅದಕ್ಕೆ ತಕ್ಕಂತೆ ಮಾನವನ ಇತಿಹಾಸದ ಬೆಳವಣಿಗೆಯೂ ಮಾರ್ಪಡುತ್ತದೆ. ಏಕೆಂದರೆ ಪ್ರಕೃತಿಯ ಮೇಲ್ಬಾಗದ ಅವಯವಗಳಾದ ಗಾಳಿ, ನದಿ, ಪರ್ವತ, ಸಮುದ್ರ, ಭೂಗುಣ, ಖನಿಜ ಸಂಪತ್ತು ಇತ್ಯಾದಿಗಳ ಕೈವಾಡ ಆಯಾ ದೇಶದ ಇತಿಹಾಸವನ್ನು ನಿರ್ಧರಿಸುತ್ತದೆ. ಆದ್ದರಿಂದ ಒಂದು ದೇಶದ ಅಥವಾ ಜನಾಂಗದ ಇತಿಹಾಸ ಅರಿಯಲು ಭೂಗೋಳದ ತಿಳಿವಳಿಕೆ ಅತ್ಯವಶ್ಯ. ವಿದೇಶಿ ಪ್ರವಾಸಿಗರ ವರದಿಗಳು ಭೌಗೋಳಿಕ ಪರಿಜ್ಞಾನವಿಲ್ಲದ ಇತಿಹಾಸದ ಅಧ್ಯಯನ ಕೂಡ ವ್ಯರ್ಥ, ಉದಾಹರಣೆಗೆ ಅಶೋಕನ ಸಾಮ್ರಾಜ್ಯ ತುಂಬ ವಿಶಾಲವಾಗಿತ್ತು: ಅತಿ ದೊಡ್ಡದು ಎನ್ನುವಾಗ ಭೌಗೋಳಿಕ ಮೇರೆಗಳ ಚಿತ್ರ ಅತ್ಯವಶ್ಯ. ಅವನ ರಾಜ್ಯ ಪಶ್ಚಿಮದಲ್ಲಿ ಆಫ್ಘಾನಿಸ್ತಾನ, ಉತ್ತರದಲ್ಲಿ ನೇಪಾಳ, ಪೂರ್ವದಲ್ಲಿ ಕಾಮರೂಪ ಹಾಗೂ ದಕ್ಷಿಣದಲ್ಲಿ ನಲ್ಲೂರಿನವರೆಗೂ ವಿಸ್ತರಿಸಿದ್ದಿತು ಎಂದು ವಿವರಿಸಲು ಹಾಗೂ ಸುಲಭ ಗ್ರಹಿಕೆಗೂ ಭೌಗೋಳಿಕ ಅರಿವು ಅವಶ್ಯ. ಹಾಗೆಯೇ ಕಾಲಗಣನೆ (Chronology) ಕೂಡ. ಅದು ಯಾವ ಕಾಲದಲ್ಲಿ ಈ ಘಟನ ಸಂಭವಿಸಿತು: ಅಶೋಕ ಅಥವಾ ಮಹಾತ್ಮಾ ಗಾಂಧಿ ಜೀವಿಸಿದ್ದರು ಎಂಬುದನ್ನು ತಿಳಿಸುತ್ತದೆ, ರಿಚರ್ಡ್ ಹಕ್ಕೂಯತ್ ಹೇಳುವಂತೆ: ಭೂಗೋಳ...