ವಿಷಯಕ್ಕೆ ಹೋಗಿ

ಭಾರತದ ಚಿನ್ಹೆಗಳು


ಭಾರತದ ಚಿನ್ಹೆಗಳು

 
=> ಭಾರತದ ರಾಷ್ಟ್ರ ಧ್ವಜದ ಉದ್ದ & ಅಗಲದ ಅನುಪಾತ 3:2
=> ಭಾರತದ ರಾಷ್ಟ್ರಧ್ವಜದ ಬಣ್ಣ ಕೆಸರಿ,ಬಿಳಿ,ಹಸಿರು ಹೊಂದಿದೆ
=> ಭಾರತದ ರಾಷ್ಟ್ರಧ್ವಜದ ಮಧ್ಯಭಾಗದಲ್ಲಿ 24 ಕಡ್ಡಿಗಳನ್ನು ಹೊಂದಿರುವ ಅಶೋಕನು ಹೊರಡಿಸಿದ ಸಾರನಾಥ ಸೂಪ್ತದಿಂದ ಪಡೆದಿರುವ ಧರ್ಮ ಚಕ್ರವಿದೆ.ಇದು ನಿಲಿ ಬಣ್ಣದಿಂದ ಕೂಡಿದೆ.
=> ಭಾರತದ ಸಂವಿಧಾನ ರಚನಾ ಸಭೆಯು 22 ಜುಲೈ 1947 ರಲ್ಲಿ ರಾಷ್ಟ್ರಧ್ವಜವನ್ನು ಅಳವಡಿಸಿಕೊಂಡಿತು.
=> ಭಾರತದ ಧ್ವಜಸಂಹಿತೆ(flag code) 26 ಜನೆವರಿ 2002 ರಂದು ಜಾರಿಗೆ ಬಂದಿತು.
=> ಭಾರತದ ಪ್ರತಿಯೊಬ್ಬ ರಾಷ್ಟ್ರಧ್ವಜ ಹಾರಿಸುವುದು ಮೂಲಭೂತ ಹಕ್ಕು ಎಂದು ಕಲಂ 19(i) ವಿವರಿಸುವುದು.
=> ಭಾರತದ ತ್ರಿವರ್ಣ ಧ್ವಜವನ್ನು ಮೊಟ್ಟಮೊದಲಿಗೆ ತಯಾರಿಸಿದವರು ಮೇಡಂ ಭೀಕಾಜಿ ಕಾಮಾ.
=> ಭಾರತದ ಧ್ವಜವನ್ನು ಮೊದಲಿಗೆ ಲಾಹೋರದ ರಾವಿ ನದಿಯ ದಂಡೆ ಮೇಲೆ 1928 ರ ಕಾಂಗ್ರೆಸ್ಸ ಅಧಿವೇಶನದಲ್ಲಿ ಜವಾಹರಲಾಲ ನೆಹರೂ ಹಾರಿಸಿದರು.
=> ಕೆಂಪು ಕೋಟೆಯ ಮೇಲೆ ಪ್ರತಿ ವರ್ಷ ರಾಷ್ಟ್ರೀಯ ಧ್ವಜ ಹಾರಿಸುವವರು ಪ್ರಧಾನಮಂತ್ರಿಗಳು
=> ತ್ರಿವರ್ಣ ಧ್ವಜದ ವಿನ್ಯಾಸಗೊಳಿಸಿದವರು ಪಿಂಗಳಿ ವೆಂಕಯ್ಯ.
=> ರಾಷ್ಟ್ರ ಧ್ವಜ ಕರ್ನಾಟಕದಲ್ಲಿ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ.
=> ಭಾರತದ ರಾಷ್ಟ್ರೀಯ ಚಿನ್ಹೆಯನ್ನು ಉತ್ತರ ಪ್ರದೇಶದಲ್ಲಿ ಅಶೋಕನು ಹೊರಡಿಸಿರುವ ಸಾರನಾಥ ಸೂಪ್ತದಿಂದ ಪಡೆಯಲಾಗಿದೆ.
=> ಇದರಲ್ಲಿ ನಾಲ್ಕು ಸಿಂಹಗಳು, ನೆಗೆಯುತ್ತಿರುವ ಕುದುರೆ, ಗೂಳಿ & ಆನೆಗಳಿವೆ. ಮಧ್ಯದಲ್ಲಿ ಧರ್ಮಚಕ್ರವಿದೆ.
=> ಭಾರತ ಸರ್ಕಾರವು ಇದನ್ನು 26 ಜನೆವರಿ 1950 ರಂದು ಅಳವಡಿಸಿಕೊಂಡಿತು.
=> ಇದರ ಕೆಳಗೆ ಮಂಡಕೊಪನಿಷತ್ತಿನಿಂದ ಪಡೆದಿರುವ ಸತ್ಯಮೇವ ಜಯತೇ ಯನ್ನು ದೇವನಾಗರಿ ಲಿಪಿಯಲ್ಲಿ ಬರೆಯಲಾಗಿದೆ.
=> ರಾಷ್ಟ್ರೀಯ ಚಿನ್ಹೆಯು ಭಾರತದ ಸರ್ಕಾರದ ಹಕ್ಕನ್ನು ಸೂಚಿಸುವುದು.
=> ಭಾರತದ ಪುಷ್ಪ - ಕಮಲದ ಹೂವು
=> ಪುರಾಣಗಳಲ್ಲಿ ಕಮಲದ ಹೂ ತ್ಯಾಗದ ಸಂಕೇತವಾಗಿದೆ.
=> ಕಮಲದ ವೈಜ್ಞಾನಿಕ ಹೆಸರು - ನೀಲುಂಬಾ ನುಸಿಫೇರಾ(Nelumbo nucifera)
=> ಸಸ್ಯ ಸಂಪತ್ತಿನಲ್ಲಿ ಭಾರತ ಜಗತ್ತಿನಲ್ಲಿ 10 ನೇ ಸ್ಥಾನದಲ್ಲಿದೆ.
=> ಭಾರತದ ರಾಷ್ಟ್ರಗೀತೆ 'ಜನಗಣಮನ"
=> ಮೂಲತ ಇದು ಬಂಗಾಳಿ ಭಾಷೆಯಲ್ಲಿದ್ದು ಇದನ್ನು ರಚಿಸಿದವರು ರವೀಂದ್ರನಾಥ ಟ್ಯಾಗೋರ್
=> ಸಂವಿಧಾನ ರಚನಾ ಸಭೆಯು ಹಿಂದಿ ಭಾಷಾಂತರದ ರಾಷ್ಟ್ರಗೀತೆಯನ್ನು 24 ಜನೆವರಿ 1950 ರಂದು ರಾಷ್ಟ್ರಗೀತೆಯಾಗಿ ಅಳವಡಿಸಿಕೊಂಡಿತು.
=> ಈ ಗೀತೆಯನ್ನು ಮೊದಲಿಗೆ 1911 ರ ಕಲ್ಕತ್ತಾ ಕಾಂಗ್ರೆಸ್ ಅಧಿವೇಶನದಲ್ಲಿ ಹಾಡಲಾಯಿತು.
=> ಜನಮಣ ಗೀತೆಯು ಮೂಲತಃ ಐದು ಪಂಕ್ತಿಗಳಿಂದ ಕೂಡಿದೆ ಅದರ ಮೊದಲನೇ ಪಂಕ್ತಿಯನ್ನು ಮಾತ್ರ ರಾಷ್ಟ್ರಗೀತೆಯಾಗಿ ಅಳವಡಿಸಕ್ಕೊಳ್ಳಲಾಗಿದೆ.
=> ಭಾರತದ ರಾಷ್ಟ್ರಗೀತೆಯಲ್ಲಿ ಒಟ್ಟು 13 ಸಾಲುಗಳಿವೆ.
=> ರಾಷ್ಟ್ರಗೀತೆಯನ್ನು 48 ಸೆಕೆಂಡುಗಳಿಗೆ ಕಡಿಮೆ ಇಲ್ಲದಂತೆ ಹಾಗೂ 52 ಸೆಕೆಂಡುಗಳು ಮೀರದಂತೆ ಹಾಡುವ ನಿಯಮವಿದೆ.
=> ರವೀಂದ್ರನಾಥ ಟ್ಯಾಗೋರ್ ರವರ 'ಅಮರ್ ಸೋನಾರ್ ಬಾಂಗ್ಲಾ' ಗೀತೆಯನ್ನು ಬಾಂಗ್ಲಾದೇಶ ತನ್ನ ರಾಷ್ಟ್ರಗೀತೆಯಾಗಿ ಅಳವಡಿಸಿಕೊಂಡಿದೆ( ಈ ಗೀತೆಯನ್ನು 1905 ರಲ್ಲಿ ಬಂಗಾಳ ವಿಭಜನೆ ವಿರೋಧಿಸಿ ರಚಿಸಿದ್ದರು)
=> 1905 ರ ಬಂಗಾಳ ವಿಭಜನೆ ವಿರೋಧಿಸಿ ಇವರು ಹಿಂದೂ ಮುಸ್ಲಿಂರಿಗೆ "ರಕ್ಷಾಬಂಧನ" ಆಚರಿಸುವಂತೆ ಕರೆ ನೀಡಿದ್ದರು.
=> ಸಂಸ್ಕ್ರತದಲ್ಲಿರುವ ವಂದೇ ಮಾತರಂ ಈ ಗೀತೆಯನ್ನು ಭಾರತದ ಸಂವಿಧಾನ ರಚನಾ ಸಭೇಯನ್ನು ಜನೆವರಿ 24 1950 ರಂದು ಅಳವಡಿಸಿಕೊಂಡಿತು.
=> ಈ ಗೀತೆಯನ್ನು ಬಂಕೀಮಚಂದ್ರ ಚಟರ್ಜಿ ಚಟ್ಟೋಪಧ್ಯಾಯರು 1882 ರಲ್ಲಿ ರಚಿಸಿದ 'ಆನಂದಮಠ' ಕಾದಂಬರಿಯಿಂದ ಆಯ್ದುಕ್ಕೊಳ್ಳಲಾಗಿದೆ.
=> ಈ ಗೀತೆಯನ್ನು ಮೊಟ್ಟಮೊದಲಿಗೆ 1896 ರ ಕಲ್ಕತ್ತಾ ಕಾಂಗ್ರೆಸ್ಸ ಅಧಿವೇಶನದಲ್ಲಿ ಹಾಡಲಾಯಿತು.
=> ಭಾರತಕ್ಕೆ ಸ್ವಾತಂತ್ರ ದೊರೆಯವರೆಗೂ ಈ ಗೀತೆಯನ್ನು ರಾಷ್ಟ್ರಗೀತೆಯಾಗಿ ಹಾಡಲಾಗುತ್ತಿತ್ತು.
=> ಈ ಗೀತೆಯನ್ನು 1920 ರಲ್ಲಿ ಇಂಗ್ಲೀಷ ಭಾಷೆಗೆ ಭಾಷಾಂತರಿಸಿದವರು ಶ್ರೀಅರವಿಂದೋ ಘೋಷ್.
=> ರಾಷ್ಟ್ರೀಯ ಪಂಚಾಂಗವು ಶಕ ವರ್ಷವನ್ನು ಆಧರಿಸಿದ ಗ್ರೇಗೋರಿಯನ್ನ ಪಂಚಾಂಗವನ್ನು ಹೋಲುತ್ತದೆ.
=> ಇದನ್ನು ಮಾರ್ಚ 22, 1957 ರಂದು ಅವಡಿಸಿಕ್ಕೊಳಲಾಗಿದೆ.
=> ಸಾಮಾನ್ಯ ವರ್ಷದ ಮೊದಲ ದಿನಾಂಕ - ಮಾರ್ಚ 21
=> ಅಧಿಕ ವರ್ಷದ ಮೊದಲ ದಿನಾಂಕ - ಮಾರ್ಚ 22
=> ಕ್ರಿ.ಶ 78 ಶಾಲಿವಾನ ಶಕೆ ವರ್ಷವನ್ನು ಕುಶಾನರ ಅರಸ ಕನಿಷ್ಕನು ಅಧಿಕಾರಕ್ಕೆ ಬಂದಿರುವದರ ನೆನಪಿಗಾಗಿ ಜಾರಿಗೆ ತಂದನು.
=> 2015 ರ ವರ್ಷವನ್ನು ಭಾರತೀಯ ಕ್ಯಾಲೆಂಡರನಂತೆ 1937 ನೇ ವರ್ಷ ಎನ್ನಲಾಗುವುದು.
=> ಭಾರತದ ರಾಷ್ಟ್ರೀಯ ಪಂಚಾಂಗದ ಪ್ರಕಾರ ಮೊದಲನೇ ತಿಂಗಳು - ಚೈತ್ರ
=> ಕೊನೆಯ ತಿಂಗಳು - ಫಾಲ್ಗುಣ
=> ರಾಷ್ಟ್ರೀಯ ಪಂಚಾಂಗದ ತಿಂಗಳುಗಳು : ಚೈತ್ರ ವೈಶಾಖ ಜೇಷ್ಟ ಆಶಾಢ ಶ್ರಾವಣ ಭಾದ್ರಪದ ಅಶ್ವಿನ್ ಕಾರ್ತಿಕ ಮೃಗಶಿರ ಪುಷ್ಯ ಮಾಘ ಫಾಲ್ಗುಣ
=> ಭಾರತದ ರಾಷ್ಟ್ರೀಯ ಕ್ರೀಡೆ - ಹಾಕಿ
=> ಹಾಕಿ ಕ್ರೀಡೆಯಲ್ಲಿ ಒಂದು ತಂಡದಲ್ಲಿ ಒಟ್ಟು 11 ಆಟಗಾರರಿರುತ್ತಾರೆ.
=> ಭಾರತ ಹಾಕಿ ತಂಡ ಒಟ್ಟು 08 ಸಲ ಓಲಂಪಿಕ್ಸನಲ್ಲಿ ಚಿನ್ನದ ಪದಕ ಗೆದ್ದಿದೆ.
=> ಕರ್ನಾಟಕದ ಕೊಡಗು ಜಿಲ್ಲೆಗೆ ಹಾಕಿಯ ತವರೂರು ಎನ್ನುತ್ತಾರೆ.
=> ಭಾರತದ ಹಾಕಿಯ ಮಾಂತ್ರಿಕ - ಧ್ಯಾನಚಂದ್
=> ಧ್ಯಾನಚಂದರವರ ಹುಟ್ಟು ಹಬ್ಬದ ದಿನವಾದ ಅಗಷ್ಟ್ -29 ನ್ನು ಪ್ರತಿವರ್ಷ ಭಾರತದಲ್ಲಿ ರಾಷ್ಟ್ರೀಯ ಕ್ರೀಡಾ ದಿನವಾಗಿ ಆಚರಿಸುವರು.
=> ಕರ್ನಾಟಕದ ರಾಷ್ಟ್ರೀಯ ಕ್ರೀಡೆ ಸಹ ಹಾಕಿ ಆಗಿದೆ.
=> ಇಂದಿರಾಗಾಂಧಿ ಗೋಲ್ಡ್ ಕಪ್ ಭಾರತದ ಪ್ರಮುಖ ಹಾಕಿ ಕ್ರೀಡೆಯ ಟ್ರೋಫಿಯಾಗಿದೆ.
=> ಅಂತರರಾಷ್ಟ್ರೀಯ ಹಾಕಿ ಪಂದ್ಯವೊಂದರ ಅವಧಿ - 70 ನಿಮಿಷಗಳು.
=> ಭಾರತದ ರಾಷ್ಟ್ರೀಯ ನದಿ - ಗಂಗಾನದಿ
=> ನವೆಂಬರ್ 04, 2008 ರಂದು ಗಂಗಾನದಿಯನ್ನು ಭಾರತದ ರಾಷ್ಟ್ರೀಯ ನದಿಯನ್ನು ಪ್ರಧಾನಮಂತ್ರಿಗಳು ಘೋಷಿಸಿದರು.
=> ಭಾರತದಲ್ಲಿ ಹರಿಯುವ ನದಿಗಳಲ್ಲಿ ಗಂಗಾ ನದಿ ಅತಿ ಉದ್ದವಾಗಿದೆ(2510 km)
=> ಗಂಗಾ ನದಿ ಪ್ರಾಧಿಕಾರ ಸಂಸ್ಥೆ ಇರುವುದು ಬಿಹಾರದ ಪಾಟ್ನಾದಲ್ಲಿ.
=> ಭಾರತ ಸರ್ಕಾರವು ಅಕ್ಟೋಬರ್ 05,2009 ರಂದು ಗಂಗಾ ನದಿಯ ಡಾಲ್ಫಿನ್ ಭಾರತದ ರಾಷ್ಟ್ರೀಯ ಜಲಪ್ರಾಣಿ ಎಂದು ಘೋಷಿಸಿದೆ.
=> ಡಾಲ್ಫಿನದ ವೈಜ್ಞಾನಿಕ ಹೆಸರು - ಪ್ಲಾಂಟಾನಿಷ್ಟಾ ಗ್ಯಾಂಗ್ಯಾಟಿಕಾ.((Platanista gangetica)
=> ಭಾರತದ ರಾಷ್ಟ್ರೀಯ ಪಕ್ಷಿ - ನವಿಲು
=> ಭಾರತದ ವನ್ಯಜೀವಿ ರಕ್ಷಣಾ ಕಾಯ್ದೆ - 1972 ರ ಅಡಿಯಲ್ಲಿ ನವಿಲು ಸಂರಕ್ಷಿಸಲಾಗುವುದು.
=> ನವಿಲಿನ ವೈಜ್ಞಾನಿಕ ಹೆಸರು - ಪಾವೋ ಕ್ರಿಸ್ಟಾಟಸ್ (pavo cristatus)
=> ಮಂಡ್ಯ ಜಿಲ್ಲೆ ಆದಿಚುಂಚನಗಿರಿ ಹಾಗೂ ಹಾವೇರಿ ಜಿಲ್ಲೆಯ ಬಂಕಾಪೂರದಲ್ಲಿ ನವಿಲು ವನ್ಯಧಾಮಗಳಿವೆ.
=> ಭಾರತದ ರಾಷ್ಟ್ರೀಯ ಮರ - ಬನಯಾನ್ ಅಥವಾ ಅರಳಿ ಮರ.
=> ಅರಳಿ ಮರದ ವೈಜ್ಞಾನಿಕ ಹೆಸರು - ಫೈಕಾಸ್ ಬೆಂಗಾಲೆನಿಸ್ (ficus benghalensis)
=> ಅರಳಿ ಮರದ ಬೇರುಗಳು ತಂತುರೂಪಗಳಾಗಿವೆ.
=> ಗೌತನ ಬುದ್ದನಿಗೆ ಜ್ಞಾನೋದಯವಾದದ್ದು ಬಿಹಾರದ ಗಯಾದ ನಿರಂಜನ ನದಿಯ ದಡದಲ್ಲಿರುವ ಅರಳಿ ಮರದ ಕೆಳಗೆ.
=> ಗೌತಮ ಬುದ್ದನ ಆಧ್ಯಾತ್ಮಿಕ ಗುರು - ಅಲಾರ ಕಮಾ
=> ಭಾರತದ ಅತ್ಯಂತ ದೊಡ್ಡ ಅರಳಿ ಇರುವುದು - ಕಲ್ಕತ್ತದಲ್ಲಿ.
=> ಪ್ರಪಂಚದ ಅತಿ ದೊಡ್ಡ ವೃಕ್ಷ - ದೈತ್ಯ ಸಿಕೋಯ್ ಮರ.
=> ಮರಗಳ ಆಯುಷ್ಯವನ್ನು ನಿರ್ಧರಿಸುವುದು ಅವುಗಳು ಕಾಂಡದಲ್ಲಿರುವ ಸೆಲ್ಯುಲಸನಿಂದ ಮಾಡಲ್ಪಟ್ಟಿರುವ ವೃತ್ತಗಳ ಸಂಖ್ಯೆಯ ಆಧಾರದ ಮೇಲೆ.
=> ಭಾರತದ ರಾಷ್ಟ್ರೀಯ ಹಣ್ಣು - ಮಾವಿನ ಹಣ್ಣು
=> ಮಾವಿನ ವೈಜ್ಞಾನಿಕ ಹೆಸರು - ಮ್ಯಾಂಜಿಫೇರಾ ಇಂಡಿಕಾ (mangifera indica)
=> ಮಾವಿ ಹಣ್ಣಿನಲ್ಲಿರುವ ಜೀವಸತ್ವಗಳು - A,C,D
=> ಭಾರತವು ಮಾವಿನ ಉತ್ಪಾದನೆಯಲ್ಲಿ ಜಗತ್ತಿನಲ್ಲಿ ಪ್ರಥಮ ಸ್ಥಾನದಲ್ಲಿದೆ.
=> ಭಾರತ ಸರ್ಕಾರವು ಅಕ್ಟೋಬರ್ 23, 2010 ರಂದು ಆನೆಯನ್ನು ಭಾರತದ ವಂಶಪಾರಂಪರ್ಯ ಪ್ರಾಣಿ ಎಂದು ಘೋಷಿಸಿದೆ.
=> ಆನೆಯ ವೈಜ್ಞಾನಿಕ ಹೆಸರು - ಎಲಿಫಾಸ್ ಮ್ಯಾಕ್ಷಿಮಸ್ (elephas maximus)
=> ಭೂವಾಸಿಗಳಲ್ಲಿ ದೊಡ್ಡದಾದ ಪ್ರಾಣಿ - ಆಪ್ರಿಕಾದ ಆನೆ.
=> ಭಾರತದ ಆನೆಗಳ ಯೋಜನೆ ಜಾರಿಗೆ ತಂದ ವರ್ಷ - 1992.
=> ಭಾರತದಲ್ಲಿ ಅತಿ ಹೆಚ್ಚು ಆನೆಗಳನ್ನು ಹೊಂದಿರುವ ರಾಜ್ಯ - ಕರ್ನಾಟಕ.
=> ಕರ್ನಾಟಕದ ರಾಜ್ಯ ಪ್ರಾಣಿ - ಆನೆ.
=> 1972 ರಿಂದ ಭಾರತದ ರಾಷ್ಟ್ರೀಯ ಪ್ರಾಣಿ ಹುಲಿ ಎಂದು ಘೋಷಿಸಲಾಯಿತು.
=> ಭಾರತದ ಮೊದಲ ರಾಷ್ಟ್ರೀಯ ಪ್ರಾಣಿ ಸಿಂಹವಾಗಿತ್ತು.
=> ಹುಲಿಯ ವೈಜ್ಞಾನಿಕ ಹೆಸರು - ಪ್ಯಾಂಥೇರಾ ಟ್ರೈಗಿಸ್. (Panthera tigris)
=> ಭಾರತದ ಮೊದಲ ಹುಲಿ ಅಭಯಾರಣ್ಯ - ಉತ್ತರಖಂಡದ ಕಾರ್ಬೆಟ್
=> ಭಾರತದಲ್ಲಿ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯ - ಕರ್ನಾಟಕ.
=> ವಿಸ್ತೀರ್ಣದಲ್ಲಿ ಭಾರತದ ದೊಡ್ಡದಾದ ಹುಲಿ ಅಭಯರಾಣ್ಯ - ಆಂದ್ರಪ್ರದೇಶದ ನಾಗಾರ್ಜುನ ಸಾಗರ
=> ಭಾರತದಲ್ಲಿ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ಅಭಯಾರಣ್ಯ - ಪಶ್ಚಿಮ ಬಂಗಾಳದ ಸುಂದರಬನ್ಸ್
=> ಭಾರತದಲ್ಲಿ ಹುಲಿ ಯೋಜನೆ ಜಾರಿಗೆ ಬಂದ ವರ್ಷ - 1972
=> ದೆಹಲಿಯಲ್ಲಿರುವ ಇಂಡಿಯಾ ಗೇಟ್ ಇದನ್ನು ಎರಡನೇ ಮಹಾಯುದ್ದದಲ್ಲಿ ಮರಣ ಹೊಂದಿರುವ ಭಾರತೀಯ ಸೈನಿಕರ ನೆನಪಿಗಾಗಿ ಕಟ್ಟಿಸಲಾಗಿದೆ.
=> ಮೌರ್ಯ ವಂಶದ ಚಂದ್ರಗುಪ್ತ ಮೌರ್ಯ.

ಕೃಪೆ: ಸ್ಪರ್ಧಾ ಮಿತ್ರ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಭಾರತದ ರಾಷ್ಟ್ರೀಯ ಹಬ್ಬಗಳು

ಭಾರತದ ರಾಷ್ಟ್ರೀಯ ಹಬ್ಬಗಳು.Indian National Festivals ಭಾರತದ ರಾಷ್ಟ್ರೀಯ ಹಬ್ಬಗಳು ನಮ್ಮ ಭಾರತ ದೇಶವು ಜಾತ್ಯತೀತ ದೇಶವಾಗಿದೆ, ಇಲ್ಲಿ ಎಲ್ಲಾ ಜಾತಿ ಧರ್ಮದ ಜನರು ಎಲ್ಲಾ ಟೀಜ್ ಹಬ್ಬವನ್ನು ಬಹಳ ಆಡಂಬರದಿಂದ ಆಚರಿಸುತ್ತಾರೆ. ರಾಖಿ, ದೀಪಾವಳಿ, ದಸರಾ, ಈದ್, ಕ್ರಿಸ್‌ಮಸ್ ಮತ್ತು ಅನೇಕ ಜನರು ಒಟ್ಟಾಗಿ ಹಬ್ಬವನ್ನು ಆಚರಿಸುತ್ತಾರೆ. ಭಾರತದ ದೇಶದಲ್ಲಿ ಹಬ್ಬಗಳಿಗೆ ಕೊರತೆಯಿಲ್ಲ, ಧರ್ಮದ ಪ್ರಕಾರ ವಿಭಿನ್ನ ಹಬ್ಬಗಳಿವೆ. ಆದರೆ ಅಂತಹ ಕೆಲವು ಹಬ್ಬಗಳಿವೆ, ಅವು ಯಾವುದೇ ಜಾತಿಯವರಲ್ಲ, ಆದರೆ ನಮ್ಮ ರಾಷ್ಟ್ರವನ್ನು ನಾವು ರಾಷ್ಟ್ರೀಯ ಹಬ್ಬ ಎಂದು ಕರೆಯುತ್ತೇವೆ. ಭಾರತದ ರಾಷ್ಟ್ರೀಯ ಹಬ್ಬ. (Indian national festivals in Kannada ). 1947 ರಿಂದ ದೇಶದ ಸ್ವಾತಂತ್ರ್ಯದ ನಂತರ, ಈ ರಾಷ್ಟ್ರೀಯ ಹಬ್ಬಗಳು ನಮ್ಮ ಜೀವನದ ಭಾಗವಾದವು, ಅಂದಿನಿಂದ ನಾವು ಅವರನ್ನು ಬಹಳ ಉತ್ಸಾಹದಿಂದ ಆಚರಿಸುತ್ತೇವೆ. ಈ ಹಬ್ಬವು ನಮ್ಮ ರಾಷ್ಟ್ರೀಯ ಏಕತೆಯನ್ನು ತೋರಿಸುತ್ತದೆ. ಭಾರತದ ಪ್ರಮುಖ ರಾಷ್ಟ್ರೀಯ ಹಬ್ಬಗಳು – 1. ಸ್ವಾತಂತ್ರ್ಯ ದಿನ15 ಆಗಸ್ಟ್ 2. ಗಣರಾಜ್ಯೋತ್ಸವ 26 ಜನವರಿ 3. ಗಾಂಧಿ ಜಯಂತಿ 2 ಅಕ್ಟೋಬರ್ ಇದು ರಾಷ್ಟ್ರೀಯ ಹಬ್ಬ, ಇದು ರಾಷ್ಟ್ರೀಯ ರಜಾದಿನವೂ ಆಗಿದೆ. ಇದಲ್ಲದೆ, ಶಿಕ್ಷಕರ ದಿನ, ಮಕ್ಕಳ ದಿನವೂ ರಾಷ್ಟ್ರೀಯ ರಜಾದಿನವಾಗಿದೆ, ಇವುಗಳನ್ನು ನಮ್ಮ ದೇಶದ ಮಹಾನ್ ಸ್ವಾತಂತ್ರ್ಯ ಹೋರಾಟದ ನೆನಪಿಗಾಗಿ ಆಚರಿಸಲಾಗುತ್ತದೆ. ಇದಲ

ಭಾರತೀಯ ಸಂಸ್ಕೃತಿಯ ಲಕ್ಷಣಗಳು (Characteristics of Indian Culture)

1.1 ಭಾರತೀಯ ಸಂಸ್ಕೃತಿಯ ಲಕ್ಷಣಗಳು (Characteristics of Indian Culture) ಭಾರತದ ಸಾಂಸ್ಕೃತಿಕ ಪರಂಪರೆಯು ವಿಶಾಲವಾದ ವ್ಯಾಪ್ತಿಯನ್ನು ಹೊಂದಿದೆ. ಮಾನವನ ಉಗಮದೊಂದಿಗೆ ಉಗಮವಾಗಿ ಬೆಳೆದು ಸಾಗಿ ಬಂದ ಪರಂಪರೆಯು ಅವನ ಜೀವನ ಮೌಲ್ಯಗಳು, ವಸತಿ ರಕ್ಷಣೆ, ಆಹಾರ, ವಿಹಾರ, ಉಡುಗೆ-ತೊಡುಗೆ, ಮನರಂಜನೆ, ವ್ಯಾಪಾರ, ವಾಣಿಜ್ಯ, ಸಂಗೀತ, ಕಲೆ, ವಾಸ್ತುಶಿಲ್ಪ, ಚಿತ್ರಕಲೆ, ಶಿಕ್ಷಣ, ಧರ್ಮಗಳು, ರೂಢಿ-ಸಂಪ್ರದಾಯಗಳು, ಭಾಷೆ, ನಟನೆ, ನಂಬಿಕೆ, ನೃತ್ಯ, ಆಚರಣೆ, ಹವ್ಯಾಸ, ಸಾಹಿತ್ಯ, ವಿಧಿ-ವಿಧಾನಗಳನ್ನು ಒಳಗೊಂಡಿದೆ. ಈ ಅಂಶಗಳಲ್ಲಿ ಕೆಲವು ಕಾಲಕ್ಕೆ ತಕ್ಕಂತೆ ಮತ್ತು ಪ್ರಾದೇಶಿಕವಾಗಿ ಭಿನ್ನತೆ ಹಾಗೂ ಬದಲಾವಣೆಗೊಂಡಿದ್ದರೂ ನಿರಂತರವಾಗಿ ಸಾಗಿ ಬಂದಿವೆ. ಅವುಗಳ ಗುಣ ಲಕ್ಷಣಗಳು ಈ ಕೆಳಗಿನಂತಿವೆ: 1. ಸಾಂಪ್ರದಾಯಕ ಜೀವನ ವಿಧಾನ: ಭಾರತೀಯರ ಜೀವನ ವಿಧಾನ ಪಾರಂಪರಗತವಾಗಿ ಪೂರ್ವಜರಿಂದ ಸಾಗಿ ಬಂದಿದೆ. ಪಾರಂಪರಗತವಾಗಿ ಭಾರತೀಯರದು ಕೃಷಿ ಪ್ರಧಾನವಾದ ಜೀವನ ವಿಧಾನವಾಗಿದ್ದು, ಭೂಮಿಯನ್ನು 'ಭೂದೇವಿ' ಎಂದು ಆರಾಧಿಸುತ್ತಾರೆ. ಭೂಮಿಯನ್ನು ಹಸನಗೊಳಿಸಿ, ಹದ ಮಾಡಿ, ಉತ್ತಿ-ಬಿತ್ತುವ ಪೂರ್ವದಲ್ಲಿ ಭೂದೇವಿಗೆ ಪೂಜೆ ಸಲ್ಲಿಸುವ ಮೂಲಕ ಕೃಷಿ ಕಾಯಕವನ್ನು ಪ್ರಾರಂಭಿಸುತ್ತಾರೆ. ಕಾಲಕಾಲಕ್ಕೆ ಮಳೆಯಾಗಿ, ಸಮೃದ್ಧವಾದ ಬೆಳೆಯನ್ನು ಕೊಡುವ ಮೂಲಕ ನಿನ್ನ ಮಕ್ಕಳನ್ನು ಸಲಹು ತಾಯಿ ಎಂದು ಬೇಡಿಕೊಳ್ಳುತ್ತಾರೆ. ಕೃಷಿ ಸಲಕರಣಗಳಲ್ಲಿ, ಬಿತ್ತುವ ಬೀಜಗಳಲ್

DSC-2 ಭಾರತದ ಸಾಂಸ್ಕೃತಿಕ ಪರಂಪರೆ::ಪೌರಾಣಿಕ ಐತಿಹ್ಯಗಳು: ಮಹಾಭಾರತ ಮತ್ತು ರಾಮಾಯಣ, ಪಂಚತಂತ್ರ

ಐತಿಹ್ಯ ಗಳು: ಇಂಗ್ಲೀಷಿನ Legend ಎಂಬ ಪದಕ್ಕೆ ಸಮನಾಗಿ ಇಂದು ನಾವು ‘ಐತಿಹ್ಯ’ ಎಂಬುದನ್ನು ಪ್ರಯೋಗಿಸುತ್ತಿದ್ದೇವೆ. ಜಾನಪದ ಶಾಸ್ತ್ರವಾಗಿ ಬೆಳೆಯುವುದಕ್ಕಿಂತ ಹಿಂದಿನಿಂದಲೇ ‘ಐತಿಹ್ಯ’ ಎಂಬ ಶಬ್ದಪ್ರಯೋಗ ನಮ್ಮಲ್ಲಿ ತಕ್ಕಷ್ಟು ರೂಢವಾಗಿದೆ. ಸಾಮಾನ್ಯರು ಇತಿಹಾಸವೆಂದು ನಂಬಿಕೊಂಡು ಬಂದ ಘಟನೆ ಅಥವಾ ಕಥನವೆಂಬ ಅರ್ಥದಲ್ಲಿ ಅದು ಪ್ರಯೋಗಗೊಳ್ಳುತ್ತಿದ್ದುದನ್ನು ನಾವು ಆಗೀಗ ಕಾಣುತ್ತೇವೆ. ಜಾನಪದ ಶಾಸ್ತ್ರವಾಗಿ ಬೆಳೆಯುತ್ತ ಬಂದದ್ದರಿಂದ ಅದೊಂದು ನಿಶ್ಚಿತ ಪರಿಕಲ್ಪನೆಯಾಯಿತೆಂದು ಹೇಳಬೇಕಾಗುತ್ತದೆ. ಐತಿಹ್ಯದ ಮೂಲವಾದ `Legend’ ಎಂಬ ಪದ ಮಧ್ಯಕಾಲೀನ ಲ್ಯಾಟಿನ್ನಿನ ಲೆಜಂಡಾ (Legenda) ಎಂಬ ರೂಪದಿಂದ ನಿಷ್ಪನ್ನವಾದುದು. ಇದರರ್ಥ ಪಠಿಸಬಹುದಾದದ್ದು, ಎಂದು”.ಇದಕ್ಕೆ ಯುರೋಪಿನಲ್ಲಿ ಸಾಧುಸಂತರ ಕಥೆಗಳು ಎಂಬಂಥ ಅರ್ಥಗಳು ಮೊದಲಲ್ಲಿ ಪ್ರಚಲಿತವಿದ್ದುದಾಗಿ ತಿಳಿದು ಬರುತ್ತದೆ.“ಲೆಜೆಂಡಾ” ಅಥವಾ “ಐತಿಹ್ಯ” ವೆಂಬುದು ಈ ಅರ್ಥಗಳಿಂದ ಸಾಕಷ್ಟು ದೂರ ಸರಿದಿದೆಯೆಂದು ಬೇರೆ ಹೇಳಬೇಕಾಗಿಲ್ಲ. ಐತಿಹ್ಯವೆಂದರೆ ಈಗ ವ್ಯಕ್ತಿ, ಸ್ಥಳ ಅಥವಾ ಘಟನೆಯೊಂದರ ಸುತ್ತ ಸಾಂಪ್ರದಾಯಿಕವಾಗಿ ಮತ್ತು ಯಾವುಯಾವುವೋ ಮೂಲ ಸಂಗತಿಗಳ ಮೇಲೆ ಆಧರಿತವಾಗಿ ಬಂದ ಕಥನ ಎಂದು ಸಾಮಾನ್ಯವಾದ ಅರ್ಥ ಪಡೆದುಕೊಂಡಿದೆ. “ಐತಿಹ್ಯ” ಕೆಲವು ವೇಳೆ ಸತ್ಯ ಘಟನೆಯೊಂದರಿಂದಲೇ ಹುಟ್ಟಿಕೊಂಡಿರಬಹುದು; ಎಂದರೆ, ಅದು ನಿಜವಾದ ಚರಿತ್ರೆಯನ್ನೊಳಗೊಂಡಿರಬಹುದು. ಆದರೆ ಯಾವತ್ತೂ ಅದರಲ್ಲಿ ಚರಿತ್ರೆಯೇ ಇರುತ