ವಿಷಯಕ್ಕೆ ಹೋಗಿ

DSC-2 ಭಾರತದ ಸಾಂಸ್ಕೃತಿಕ ಪರಂಪರೆ::ಪೌರಾಣಿಕ ಐತಿಹ್ಯಗಳು: ಮಹಾಭಾರತ ಮತ್ತು ರಾಮಾಯಣ, ಪಂಚತಂತ್ರ

ಐತಿಹ್ಯ ಗಳು:

ಇಂಗ್ಲೀಷಿನ Legend ಎಂಬ ಪದಕ್ಕೆ ಸಮನಾಗಿ ಇಂದು ನಾವು ‘ಐತಿಹ್ಯ’ ಎಂಬುದನ್ನು ಪ್ರಯೋಗಿಸುತ್ತಿದ್ದೇವೆ. ಜಾನಪದ ಶಾಸ್ತ್ರವಾಗಿ ಬೆಳೆಯುವುದಕ್ಕಿಂತ ಹಿಂದಿನಿಂದಲೇ ‘ಐತಿಹ್ಯ’ ಎಂಬ ಶಬ್ದಪ್ರಯೋಗ ನಮ್ಮಲ್ಲಿ ತಕ್ಕಷ್ಟು ರೂಢವಾಗಿದೆ. ಸಾಮಾನ್ಯರು ಇತಿಹಾಸವೆಂದು ನಂಬಿಕೊಂಡು ಬಂದ ಘಟನೆ ಅಥವಾ ಕಥನವೆಂಬ ಅರ್ಥದಲ್ಲಿ ಅದು ಪ್ರಯೋಗಗೊಳ್ಳುತ್ತಿದ್ದುದನ್ನು ನಾವು ಆಗೀಗ ಕಾಣುತ್ತೇವೆ. ಜಾನಪದ ಶಾಸ್ತ್ರವಾಗಿ ಬೆಳೆಯುತ್ತ ಬಂದದ್ದರಿಂದ ಅದೊಂದು ನಿಶ್ಚಿತ ಪರಿಕಲ್ಪನೆಯಾಯಿತೆಂದು ಹೇಳಬೇಕಾಗುತ್ತದೆ.

ಐತಿಹ್ಯದ ಮೂಲವಾದ `Legend’ ಎಂಬ ಪದ ಮಧ್ಯಕಾಲೀನ ಲ್ಯಾಟಿನ್ನಿನ ಲೆಜಂಡಾ (Legenda) ಎಂಬ ರೂಪದಿಂದ ನಿಷ್ಪನ್ನವಾದುದು.

ಇದರರ್ಥ ಪಠಿಸಬಹುದಾದದ್ದು, ಎಂದು”.ಇದಕ್ಕೆ ಯುರೋಪಿನಲ್ಲಿ ಸಾಧುಸಂತರ ಕಥೆಗಳು ಎಂಬಂಥ ಅರ್ಥಗಳು ಮೊದಲಲ್ಲಿ ಪ್ರಚಲಿತವಿದ್ದುದಾಗಿ ತಿಳಿದು ಬರುತ್ತದೆ.“ಲೆಜೆಂಡಾ” ಅಥವಾ “ಐತಿಹ್ಯ” ವೆಂಬುದು ಈ ಅರ್ಥಗಳಿಂದ ಸಾಕಷ್ಟು ದೂರ ಸರಿದಿದೆಯೆಂದು ಬೇರೆ ಹೇಳಬೇಕಾಗಿಲ್ಲ. ಐತಿಹ್ಯವೆಂದರೆ ಈಗ ವ್ಯಕ್ತಿ, ಸ್ಥಳ ಅಥವಾ ಘಟನೆಯೊಂದರ ಸುತ್ತ ಸಾಂಪ್ರದಾಯಿಕವಾಗಿ ಮತ್ತು ಯಾವುಯಾವುವೋ ಮೂಲ ಸಂಗತಿಗಳ ಮೇಲೆ ಆಧರಿತವಾಗಿ ಬಂದ ಕಥನ ಎಂದು ಸಾಮಾನ್ಯವಾದ ಅರ್ಥ ಪಡೆದುಕೊಂಡಿದೆ.

“ಐತಿಹ್ಯ” ಕೆಲವು ವೇಳೆ ಸತ್ಯ ಘಟನೆಯೊಂದರಿಂದಲೇ ಹುಟ್ಟಿಕೊಂಡಿರಬಹುದು; ಎಂದರೆ, ಅದು ನಿಜವಾದ ಚರಿತ್ರೆಯನ್ನೊಳಗೊಂಡಿರಬಹುದು. ಆದರೆ ಯಾವತ್ತೂ ಅದರಲ್ಲಿ ಚರಿತ್ರೆಯೇ ಇರುತ್ತದೆಂದು ಅಪೇಕ್ಷೆ ಪಡುವುದು ಮಾತ್ರ ತಪ್ಪು. ಹೆಚ್ಚಿನ ಸಂದರ್ಭಗಳಲ್ಲಿ ಐತಿಹ್ಯದಲ್ಲಿ ಚರಿತ್ರೆ ಎಳ್ಳಷ್ಟೂ ಇರದೇ ಇರಲೂ ಬಹುದು. ಆದರೆ ಐತಿಹ್ಯ ಚರಿತ್ರೆಯ ವೇಷವನ್ನು ಮಾತ್ರ ತಪ್ಪದೇ ಧರಿಸುತ್ತದೆ.  ಅಷ್ಟೇ ಅಲ್ಲ, ಅದು ಅದರ ಪ್ರಧಾನ ಲಕ್ಷಣಗಳಲ್ಲಿ ಒಂದು.

ಅನೇಕ ವೇಳೆ ಐತಿಹ್ಯಕ್ಕೂ, ಪುರಾಣಕ್ಕೂ ಹೋಲಿಕೆಯಿರುತ್ತದೆ. ಹಲವಾರು ಸಂದರ್ಭಗಳಲ್ಲಿ ಐತಿಹ್ಯ ಮತ್ತು ಪುರಾಣಗಳ ನಡುವಿನ ಅಂತರ ತಿಳಿಯುವುದು ಕಷ್ಟದ್ದಾಗುತ್ತದೆಂದು ಜಾನಪದ ವಿದ್ವಾಂಸರು ಅಭಿಪ್ರಾಯಪಟ್ಟಿದ್ದಾರೆ. ಹೆಚ್ಚಿನ ಸಂದರ್ಭಗಳಲ್ಲಿ ಸಾಮಾನ್ಯ ಜನತೆ ಕೂಡ ಪುರಾಣವನ್ನು ಅದು ಚರಿತ್ರೆಯಲ್ಲ ಎಂದು ತಿಳಿದಿರುತ್ತದೆ. ಆದರೆ ಐತಿಹ್ಯದ ಬಗೆಗೆ ಜನ ಸಾಮಾನ್ಯರಲ್ಲಿ ಈ ಧೋರಣೆ ಕಂಡು ಬರುವುದಿಲ್ಲ. ಆದ್ದರಿಂದ ಪುರಾಣ ಮತ್ತು ಐತಿಹ್ಯಗಳಲ್ಲಿ ಇದೊಂದು ಪ್ರಮುಖ ವ್ಯತ್ಯಾಸವೆನ್ನಬಹುದು. ಮೇಲಾಗಿ ಪುರಾಣಗಳ ದೀರ್ಘತೆ ಐತಿಹ್ಯಗಳಲ್ಲಿರುವುದಿಲ್ಲ.

ಅನೇಕ ವೇಳೆ ನಂಬಿಕೆಗಳು ಐತಿಹ್ಯಗಳ ಸೃಷ್ಟಿಗೆ ಕಾರಣವಾಗಬಹುದು. ಎಲ್ಲಮ್ಮ ಸಿದ್ಧರನ್ನು ನಿಗ್ರಹಿಸಿದಳು, ಎಂದು ಹೇಳಲಾಗುವ ಐತಿಹ್ಯದ ಹುಟ್ಟಿಗೆ ಇಂಥ ನಂಬಿಕೆಯೊಂದು ಕಾರಣವಾಗಿದ್ದಂತೆ ತೋರುತ್ತದೆ. ಈ ವಿಷಯದ ಹೆಚ್ಚಿನ ಚರ್ಚೆಯನ್ನು ಮುಂದೆ ಕಾಣಬಹುದು. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ನಂಬಿಕೆ ತೀರ ಚಿಕ್ಕದಾದ ಘಟಕ. ಐತಿಹ್ಯ ನಂಬಿಕೆಯಷ್ಟು ಚಿಕ್ಕದಾಗಿರುವುದಿಲ್ಲ. ಅದೇ ರೀತಿ ಪುರಾಣದ ದೀರ್ಘತೆಯೂ ಐತಿಹ್ಯಕ್ಕಿರುವುದಿಲ್ಲವೆಂಬುದು ಸ್ಪಷ್ಟ.

ಇನ್ನು ಸಾಹಿತ್ಯಕ್ಕೂ ಐತಿಹ್ಯಕ್ಕೂ ತೀರ ಘನಿಷ್ಟವಾದ ಸಂಬಂಧವಿದೆ. ನಮ್ಮಲ್ಲಿರುವ ಶರಣರ-ದಾಸರ ಚರಿತ್ರೆಗಳಲ್ಲಿನ ಹೆಚ್ಚಿನ ಅಂಶ ಐತಿಹ್ಯವಾಗಿದೆ. ಇತಿಹಾಸ ಕಾವ್ಯಗಳೆಂದು ತಿಳಿಯಲಾಗುವ ಕುಮಾರರಾಮನ ಸಾಂಗತ್ಯಗಳು, ಕೆಳದಿ ನೃಪವಿಜಯ, ಚಿಕ್ಕದೇವರಾಯ ವಂಶಾವಳಿ ಮುಂತಾದ ಕೃತಿಗಳಲ್ಲಿ ಐತಿಹ್ಯದ ಅಂಶ ಗಮನಾರ್ಹ ಪ್ರಮಾಣದಲ್ಲಿ ಸೇರಿಕೊಂಡಿರುವುದನ್ನು ನಾವು ಕಾಣಬಹುದು.

ಐತಿಹ್ಯ ಹೆಚ್ಚಿನ ಸಂದರ್ಭಗಳಲ್ಲಿ ಒಂದು ಚಿಕ್ಕ ಕಥಾನಕವಾಗಿರುತ್ತದೆ. ನಂಬಿಕೆಗಳು, ಧಾರ್ಮಿಕ ಅಂಶಗಳು. ಆಚರಣೆಗಳು, ವ್ಯಕ್ತಿಗಳು, ಸ್ಥಳೀಯ ನೈಸರ್ಗಿಕ ವೈಚಿತ್ಯ್ರಗಳು, ಚಾರಿತ್ರಿಕ ಘಟನೆಗಳು ಮುಂತಾದವು ಐತಿಹ್ಯ ಸೃಷ್ಟಿಗೆ ಮೂಲ ಪರಿಕರಗಳನ್ನು ಒದಗಿಸಬಹುದು.

ಮಹಾಭಾರತ

ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು. ಇದು ಹಿಂದೂ ಧರ್ಮದ ಒಂದು ಮುಖ್ಯ ಪಠ್ಯವೂ ಹೌದು. ವಿಶ್ವ ಸಾಹಿತ್ಯದ ಸಾಧನೆಗಳಲ್ಲಿ ಒಂದೆಂದು ಪರಿಗಣಿತವಾಗಿರುವ ಮಹಾಭಾರತ ಭಾರತೀಯ ಜನರ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ.

ಸಂಪೂರ್ಣ ಮಹಾಭಾರತ ಒಂದು ಲಕ್ಷಕ್ಕೂ ಹೆಚ್ಚು ಶ್ಲೋಕಗಳನ್ನು ಒಳಗೊಂಡಿದ್ದು ಗ್ರೀಕ್ ಮಹಾಕಾವ್ಯಗಳಾದ ಇಲಿಯಡ್ ಮತ್ತು ಒಡಿಸ್ಸಿ - ಎರಡನ್ನೂ ಸೇರಿಸಿದರೂ ಮಹಾಭಾರತದ ಏಳನೇ ಒಂದು ಭಾಗದಷ್ಟು ಮಾತ್ರ ಆಗುತ್ತದೆ.

ಇತಿಹಾಸ ಹಾಗೂ ಹಿನ್ನೆಲೆ

ಮಹಾಭಾರತ 'ಜಯ' ಎಂಬ ಗ್ರಂಥದಿಂದ ನಿಷ್ಪನ್ನವಾಗಿದ್ದೆಂದು ಕೆಲವರ ಪ್ರತೀತಿ. ಇದರಲ್ಲಿ ಉಲ್ಲೇಖಿಸಿರುವ ಘಟನೆಗಳ ನಿಜವಾದ ಕಾಲ ಸರಿಯಾಗಿ ತಿಳಿದಿಲ್ಲ. ಮಹಾಭಾರತದಲ್ಲಿ ಕಂಡುಬರುವ ಘಟನೆಗಳು ನಿಜವಾದ ಘಟನೆಗಳನ್ನು ಆಧರಿಸಿ ಬರೆದದ್ದೋ ಅಲ್ಲವೋ ಎಂಬುದು ಕೆಲವರಲ್ಲಿ ಚರ್ಚಾಸ್ಪದ ವಿಷಯ. ಕೆಲವು ಚರಿತ್ರಜ್ಞರ ಪ್ರಕಾರ ಈ ಘಟನೆಗಳು ನಡೆದ ಸಂದರ್ಭ ಸುಮಾರು ಕ್ರಿ.ಪೂ. ೧೪೦೦. ಇನ್ನು ಮಹಾಭಾರತದ ಘಟನೆಗಳನ್ನು ಅವಲೋಕಿಸಿದ ಹಲವು ವಿದುಷರ ಪ್ರಕಾರ ಅದರಲ್ಲಿ ಉಲ್ಲೇಖ ಮಾಡಲಾಗಿರುವ ಅಂತರಿಕ್ಷ ಚಟುವಟಿಕೆಗಳು (ಗ್ರಹಣ ಇತ್ಯಾದಿ) ಸುಮಾರು ಕ್ರಿ.ಪೂ. ೩೧೦೦ಕ್ಕೆ ಹೋಲುತ್ತದೆಂದು ಹೇಳಲಾಗುತ್ತದೆ. ಆದ್ದರಿಂದ ಇವು ಘಟಿತ ಘಟನೆಗಳೋ ಅಲ್ಲವೋ, ಹೌದಾಗಿದ್ದರೆ ಯಾವ ಕಾಲದಲ್ಲಿ ನಡೆದದ್ದು ಎಂಬ ಎಲ್ಲಾ ವಿಷಯಗಳ ಬಗೆಗೆ ಹಲವು ಭಿನ್ನಾಭಿಪ್ರಾಯಗಳಿವೆ.

ಕಥಾವಸ್ತು

ಮಹಾಭಾರತದ ಮುಖ್ಯವಾಗಿ ಚಂದ್ರ ವಂಶದ ರಾಜರುಗಳ ಕಥೆ. ಹಸ್ತಿನಾಪುರದ ಸಿಂಹಾಸನಕ್ಕಾಗಿ ಕುರು ವಂಶದ ಸದಸ್ಯರ ನಡುವೆ ನಡೆಯುವ ಹೋರಾಟವನ್ನು ಕುರಿತದ್ದು ಎಂದು ಹಲವರ ಅಭಿಮತವಾದರೂ ಈ ಹೋರಾಟದ ಕಥೆ ಕುರುಕ್ಷೇತ್ರ ಕಥೆ ಎನಿಸಿಕೊಳ್ಫುತ್ತದೆ. ಹಸ್ತಿನಾಪುರದ ಸಿಂಹಾಸನಕ್ಕಾಗಿ ಪಾಂಡವರು ಮತ್ತು ಕೌರವರ ನಡುವೆ ನಡೆಯುವ ಈ ಹೋರಾಟ ಕುರುಕ್ಷೇತ್ರದಲ್ಲಿ ನಡೆಯುವ ಹದಿನೆಂಟು ದಿನದ ಕುರುಕ್ಷೇತ್ರ ಯುದ್ದದಲ್ಲಿ ನಿರ್ಧಾರವಾಗುತ್ತದೆ. ಮಹಾಭಾರತದ ಕಥೆ ಶಂತನು ಮಹಾರಾಜನ ಕಥೆಯಿಂದ್ ಆರಂಭವಾಗಿ, ಕೃಷ್ಣನ ಅವಸಾನ, ಪಾಂಡವರ ಸ್ವರ್ಗಾರೋಹಣದೊಂದಿಗೆ ಕೊನೆಗೊಳ್ಳುತ್ತದೆ. ಮಹಾಭಾರತದ ಉದ್ದಕ್ಕೂ ಬರುವ ಪಾತ್ರಗಳು ಭಾರತೀಯ ಸಂಸ್ಕೃತಿಯಲ್ಲಿ ಅಚ್ಚೊತ್ತಿರುವ ಪಾತ್ರಗಳು.

ಮುಖ್ಯ ಕಥೆಯಲ್ಲದೆ, ಮಹಾಭಾರತದಲ್ಲಿ ಅನೇಕ ಉಪಕಥೆಗಳುಂಟು. ಹಾಗೆಯೇ ಭಗವದ್ಗೀತೆಯಂಥ ಸ್ವತಂತ್ರವಾಗಿ ನಿಲ್ಲಬಲ್ಲಂಥ ಗ್ರಂಥಗಳೂ ಮಹಾಭಾರತದ ಭಾಗಗಳಾಗಿ ಭೀಷ್ಮ ಪರ್ವದಲ್ಲಿ ಕಂಡುಬರುತ್ತವೆ. ವ್ಯವಸ್ಥೆಯ ದೃಷ್ಟಿಯಿಂದ, ಮಹಾಭಾರತದಲ್ಲಿ ಹದಿನೆಂಟು ಪರ್ವಗಳಿವೆ.

ಮುಖ್ಯ ಪಾತ್ರಗಳು

ಪರ್ವಗಳು

ತತ್ವಶಾಸ್ತ್ರ

ಮಹಾಭಾರತ ವಿಶಾಲವಾದ ತತ್ವಶಾಸ್ತ್ರವನ್ನು ಒಳಗೊಂಡ ಗ್ರಂಥ. ಕೆಲವರು ಇದನ್ನು "ಐದನೆಯ ವೇದ" ಎಂದೇ ಕರೆದಿದ್ದಾರೆ. ಮಹಾಭಾರತದ ತಾತ್ವಿಕ ಬೇರುಗಳು ಇರುವುದು ವೈದಿಕ ತತ್ವಶಾಸ್ತ್ರದಲ್ಲಿ. ಮಹಾಭಾರತದ ಒಂದು ಶ್ಲೋಕ ಹೇಳುವಂತೆ, ಅದರ ಮುಖ್ಯ ಗುರಿ ನಾಲ್ಕು ಪುರುಷಾರ್ಥಗಳನ್ನು ತಿಳಿಸಿಕೊಡುವುದು: ಅರ್ಥ, ಕಾಮ, ಧರ್ಮ, ಮತ್ತು ಮೋಕ್ಷ.

ಮಹಾಭಾರತದ ಅನೇಕ ಭಾಗಗಳು, ಉಪಕಥೆಗಳು ಮತ್ತು ಉಪಗ್ರಂಥಗಳು ಪ್ರಾಚೀನ ಭಾರತದ ವಿವಿಧ ತತ್ವಶಾಸ್ತ್ರಗಳನ್ನು ವರ್ಣಿಸುತ್ತವೆ. ವೇದಾಂತ, ಸಾಂಖ್ಯ, ಯೋಗ, ಪಂಚರಾತ್ರ, ಯೋಗ ಮೊದಲಾದ ತಾತ್ವಿಕ ಸಂಪ್ರದಾಯಗಳನ್ನು ಒಳಗೊಂಡ ಮಹಾಭಾರತ ಭಾರತೀಯ ತತ್ವಶಾಸ್ತ್ರದ ಮುಖ್ಯ ಆಕರಗಳಲ್ಲಿ ಒಂದೂ ಹೌದು. ವಿವಿಧ ತಾತ್ವಿಕ ನೆಲೆಗಟ್ಟುಗಳ ಮಧ್ಯೆ ಅವುಗಳ ಬಗೆಗಿನ ಸಹಿಷ್ಣುತೆಯೂ ಮಹಾಭಾರತದ ತತ್ವಶಾಸ್ತ್ರದಲ್ಲಿ ಕಂಡುಬರುತ್ತದೆ. ಮಹಾಭಾರತದಲ್ಲಿ ವೈಶಂಪಾಯನ ಜನಮೇಜಯನಿಗೆ ಹೇಳುತ್ತಾನೆ:

"ಓ ವಿವೇಕಿ! ಇವೆಲ್ಲವೂ ಜ್ಞಾನವನ್ನೇ ಪ್ರತಿನಿಧಿಸುತ್ತವೆ ಎಂದು ತಿಳಿ: ಸಾಂಖ್ಯ, ಯೋಗ, ಪಂಚರಾತ್ರ, ಆರಣ್ಯಕ. ಅವುಗಳ ದಾರಿಗಳು ಬೇರೆ, ಆದರೆ ಮೂಲದಲ್ಲಿ ಎಲ್ಲವೂ ಒಂದೇ!"

ಮಹಾಭಾರತದಲ್ಲಿ ಅಧ್ಯಾತ್ಮಿಕ ತತ್ವಶಾಸ್ತ್ರವಲ್ಲದೇ ಸಮಾಜಶಾಸ್ತ್ರ, ಅರ್ಥಶಾಸ್ತ್ರ, ರಾಜನೀತಿ, ಯುದ್ಧನೀತಿ, ಖಗೋಳಶಾಸ್ತ್ರ ಮೊದಲಾದ ವಿಷಯಗಳ ಬಗ್ಗೆಯೂ ಬಹಳಷ್ಟು ಮಾಹಿತಿಯುಂಟು.

ಕನ್ನಡ ಸಾಹಿತ್ಯದಲ್ಲಿ ಮಹಾಭಾರತ

ಮಹಾಭಾರತದಿಂದ ಸ್ಫೂರ್ತಿ ಪಡೆದ ಕನ್ನಡ ಸಾಹಿತ್ಯ ವಿಪುಲವಾಗಿದೆ. ಕನ್ನಡದಲ್ಲಿ ಮಹಾಭಾರತದ ಮೊದಲ ಬರವಣಿಗೆಯ ಕರ್ತೃ ಆದಿಕವಿ ಪಂಪ - ಪಂಪನ ವಿಕ್ರಮಾರ್ಜುನ ವಿಜಯ ಕನ್ನಡದ ಮೇರುಕೃತಿಗಳಲ್ಲಿ ಒಂದೆಂದು ಪರಿಗಣಿತವಾಗಿದೆ. ಗದ್ಯ ಮತ್ತು ಪದ್ಯಮಿಶ್ರಿತವಾದ "ಚಂಪೂ" ಶೈಲಿಯಲ್ಲಿ ಬರೆಯಲ್ಪಟ್ಟಿರುವ ಪಂಪ ಭಾರತ ತನ್ನ ಆಳವಾದ ಮಾನವೀಯ ಮೌಲ್ಯಗಳಿಗೆ ಹೆಸರಾಗಿದೆ. ಸುಮಾರು ಇದೇ ಕಾಲದ ರನ್ನನ "ಗದಾಯುದ್ಧಂ" ಮಹಾಭಾರತ ಯುದ್ಧದ ಭೀಮ-ದುರ್ಯೋಧನರ ಗದಾಯುದ್ಧವನ್ನು ಕುರಿತದ್ದಾದರೂ ಇಡಿಯ ಮಹಾಭಾರತ ಕಥೆಯನ್ನು ಸಿಂಹಾವಲೋಕನ ಕ್ರಮದಲ್ಲಿ ಪರಿಶೀಲಿಸುತ್ತದೆ.

ಕನ್ನಡದಲ್ಲಿ ಬಹಳ ಖ್ಯಾತಿ ಪಡೆದ ಮಹಾಭಾರತ, ಕುಮಾರವ್ಯಾಸ ವಿರಚಿತ "ಕರ್ಣಾಟ ಭಾರತ ಕಥಾಮಂಜರಿ"ಯು ಕುಮಾರವ್ಯಾಸ ಭಾರತ ಅಥವಾ "ಗದುಗಿನ ಭಾರತ" ಎಂದು ಕರೆಯಲ್ಪಡುತ್ತದೆ. ಈ ಕೃತಿ ಭಾಮಿನಿ ಷಟ್ಪದಿಯಲ್ಲಿ ಬರೆಯಲ್ಪಟ್ಟಿದ್ದು ತನ್ನ ಪಾತ್ರವೈವಿಧ್ಯತೆ ಹಾಗೂ ಶ್ರೀಮಂತ ರೂಪಕಗಳಿಗೆ ಹೆಸರಾಗಿದೆ. ಕುಮಾರವ್ಯಾಸ ಕೃಷ್ಣನ ಭಕ್ತ - ಕೃಷ್ಣಾವಸಾನದ ನಂತರ ಕುಮಾರವ್ಯಾಸ ತನ್ನ ಕಾವ್ಯವನ್ನು ಮುಗಿಸಿರುವುದರಿಂದ ಸಂಸ್ಕೃತ ಮಹಾಭಾರತದ ಮೊದಲ ಹತ್ತು ಪರ್ವಗಳನ್ನು ಮಾತ್ರ ಕುಮಾರವ್ಯಾಸ ಭಾರತ ಒಳಗೊಂಡಿದೆ. ಮಹಾಭಾರತದ ಉಳಿದ ಭಾಗ ವಾರ್ಧಕ ಷಟ್ಪದಿಯಲ್ಲಿ, ಲಕ್ಷ್ಮೀಶ ಕವಿ ವಿರಚಿತ "ಜೈಮಿನಿ ಭಾರತ"ದಲ್ಲಿ ಮೂಡಿ ಬ೦ದಿದೆ.

ಆಧುನಿಕ ಕನ್ನಡದಲ್ಲಿ ಪ್ರಸಿದ್ಧವಾದ ಮಹಾಭಾರತದ ಆವೃತ್ತಿ ಎ ಅರ್ ಕೃಷ್ಣಶಾಸ್ತ್ರಿಗಳು ಬರೆದ "ವಚನ ಭಾರತ." ಈ ಕೃತಿ ಸರಳವಾದ ಆಧುನಿಕ ಕನ್ನಡದಲ್ಲಿ ಬರೆಯಲ್ಪಟ್ಟಿದೆ. ಆಧುನಿಕ ಕನ್ನಡದಲ್ಲಿ ಮಹಾಭಾರತದ ಇನ್ನೊಂದು ಕೃತಿ "ಪರ್ವ" (ಎಸ್ ಎಲ್ ಭೈರಪ್ಪ).

ೇಲಿನವು ಮುಖ್ಯ ಮಹಾಭಾರತ ಕಥೆಯನ್ನು ಆಧರಿಸಿ ಬರೆದ ಕೃತಿಗಳಾದರೆ, ಮಹಾಭಾರತದ ವಿವಿಧ ಪಾತ್ರಗಳು ಮತ್ತು ಸನ್ನಿವೇಶಗಳನ್ನು ಆಧರಿಸಿ ಬರೆದ ಕೃತಿಗಳು ಅನೇಕ. ಆಧುನಿಕ ಕನ್ನಡದಲ್ಲಿ ಕುವೆಂಪು ರವರ "ಬೆರಳ್ ಗೆ ಕೊರಳ್" ಮಹಾಭಾರತದ ಏಕಲವ್ಯನ ಪಾತ್ರವನ್ನು ಆಧರಿಸಿ ಬರೆದ ನಾಟಕ. ಹಾಗೆಯೇ ಬಿ ಎಂ ಶ್ರೀ ರವರ "ಗದಾಯುದ್ಧಂ" ರನ್ನನ ಕಾವ್ಯದ ನಾಟಕ ರೂಪಾಂತರ. ಗಿರೀಶ್ ಕಾರ್ನಾಡ್ ರ "ಯಯಾತಿ" ಮಹಾಭಾರತದ ಉಪಕಥೆಯೊಂದನ್ನು ಆಧರಿಸಿ ಬರೆದ ನಾಟಕ. ಇತ್ತೀಚೆಗೆ ರಾಮಚಂದ್ರ ಭಾವೆಯವರು ಅಂಧಪರ್ವ, ಅಶ್ವಮೇಧ ಕಾದಂಬರಿಗಳನ್ನು ಬರೆದಿದ್ದಾರೆ. ಅವು ಕ್ರಮವಾಗಿ ಸುಧಾ ಮತ್ತು ತರಂಗಗಳಲ್ಲಿ ಪ್ರಕಟವಾಗಿವೆ. ಅಂಧಪರ್ವ ಕಾದಂಬರಿಯಾಗಿ ಹೊರಬಂದಿದೆ. ಅಲ್ಲದೆ ಮಹಾಭಾರತ ಪಾತ್ರಪ್ರಪಂಚ ಎಂಬ ಸಂಕಲನವೂ ಇದೆ.

ಕೆಲವು ಉಕ್ತಿಗಳು

ರಾಮಾಯಣ

ರಾಮಾಯಣ ಹಿಂದೂಗಳ ಪವಿತ್ರಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹತ್ಕಾವ್ಯವು ವಾಲ್ಮೀಕಿ ಋಷಿಯಿಂದ ರಚಿಸಲ್ಪಟ್ಟಿದೆ. ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಆಯಣ=ರಾಮಾಯಣ) "ರಾಮನ ಕಥೆ" ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೭ ಕಾಂಡಗಳಿಂದ ಕೂಡಿದೆ. ರಾಮಾಯಣದ ಕಥೆಯ ಮುಖ್ಯವಾಗಿ ಅಯೋಧ್ಯೆಯ ರಾಜಪುತ್ರ ರಾಮ, ಆತನ ಮಡದಿ ಸೀತೆ ಹಾಗೂ ಸೀತೆಯ ಅಪಹರಣ ಮಾಡಿದ ರಾವಣನ ಸಂಹಾರ ಕುರಿತಾಗಿದೆ. ವಾಲ್ಮೀಕಿಯಿಂದ ರಚಿತವಾದ ಈ ಕಾವ್ಯ ರಾಮನ ಮಕ್ಕಳಾದ ಲವ-ಕುಶರಿಂದ ಪ್ರಚಲಿತವಾಯಿತು.

ಇತ್ತೀಚಿನ ಸಂಶೋಧನೆಗಳಂತೆ ರಾಮಾಯಣದ ರಚನಾ ಕಾಲ ಕ್ರಿ.ಪೂ ೫ನೇ ಶತಮಾನದಿಂದ ಕ್ರಿ.ಪೂ ೧ನೇ ಶತಮಾನವೆಂದು ನಿರ್ಧರಿಸಲಾಗಿದೆ. ಈ ಕಾಲವು ಮಹಾಭಾರತದ ಮೊದಲ ಆವೃತ್ತಿಗಳಿಗೆ ಹತ್ತಿರವಾದ ಕಾಲ ಎಂದು ಹೇಳಲಾಗುತ್ತದೆ. ಆದರೆ ಬೇರೆ ಪೌರಾಣಿಕಗಳಂತೆ ಈ ಕಾವ್ಯವೂ ಅನೇಕ ಮಾರ್ಪಾಡುಗಳಿಗೆ ಒಳಗಾಗಿರುವುದರಿಂದ ಇದರ ನಿಖರವಾದ ಕಾಲ ಊಹಿಸುವುದು ಕಷ್ಟವಾಗಿದೆ.

ರಾಮಾಯಣವು ನಂತರದ ಸಂಸ್ಕೃತ ಕಾವ್ಯದ ಮೇಲೆ ಶ್ಲೋಕದ ಹೊಸ ಛಂದಸ್ಸಿನಿಂದಾಗಿ ಬಹುಮುಖ್ಯ ಪ್ರಭಾವ ಬೀರಿದೆ. ಇದು ಪುರಾತನ ಹಿಂದೂ ಋಷಿಗಳ ಬೋಧನೆಗಳನ್ನು ಕಥಾಮಾಧ್ಯಮದ ಮೂಲಕ, ಹಾಗೂ ತಾತ್ವಿಕ ಮತ್ತು ಭಕ್ತಿಸಂಬಂಧಿತ ಚರ್ಚಾಭಾಗಗಳ ಮೂಲಕ ಒಳಗೊಂಡಿದೆ. ರಾಮ, ಸೀತೆ, ಲಕ್ಷ್ಮಣ, ಭರತ, ಹನುಮಂತ ಮತ್ತು ಕಥೆಯ ಖಳನಾಯಕನಾದ ರಾವಣ ಈ ಎಲ್ಲ ಪಾತ್ರಗಳು ಭಾರತದ ಸಾಂಸ್ಕೃತಿಕ ಪ್ರಜ್ಞೆಯ ಭಾಗವಾಗಿವೆ.

ಪ್ರಾಚೀನ ಭಾರತದ ಪ್ರಮುಖ ಸಾಹಿತ್ಯಕ ಕೃತಿಗಳಲ್ಲೊಂದಾದ ರಾಮಾಯಣವು ಭಾರತ ಉಪಖಂಡದ ಕಲೆ ಮತ್ತು ಸಂಸ್ಕೃತಿಯ ಮೇಲೆ ಆಳವಾದ ಪ್ರಭಾವ ಬೀರಿದೆ. ರಾಮನ ಕಥೆಯು ಅನೇಕ ಭಾಷೆಗಳಲ್ಲಿ ನಂತರದ ಬಹಳಷ್ಟು ಸಾಹಿತ್ಯಕ್ಕೆ ಸ್ಫೂರ್ತಿಯಾಯಿತು. ಪ್ರಭಾವಗೊಂಡ ಪ್ರಮುಖರೆಂದರೆ, ೧೬ನೇ ಶತಮಾನದ ಹಿಂದಿ ಕವಿ ತುಳಸೀದಾಸರು, ೧೩ನೇ ಶತಮಾನದ ತಮಿಳು ಕವಿ ಕಂಬ, ೨೦ನೇ ಶತಮಾನದ ಕನ್ನಡದ ರಾಷ್ಟ್ರಕವಿ ಕುವೆಂಪು(ರಾಮಾಯಣ ದರ್ಶನಂ).

ರಾಮಾಯಣ ಕೇವಲ ಹಿಂದೂ ಧಾರ್ಮಿಕ ಕೃತಿಯಾಗಿ ಉಳಿದಿಲ್ಲ. ಎಂಟನೆ ಶತಮಾನದಿಂದ ಅನೇಕ ಭಾರತೀಯ ವಸಾಹತುಗಳು ದಕ್ಷಿಣಪೂರ್ವ ಏಷ್ಯಾದಲ್ಲಿ ಏರ್ಪಟ್ಟಾಗ ರಾಮಾಯಣದ ಕಥೆ ವಿವಿಧ ರೂಪಾಂತರಗಳ ಮೂಲಕ ಆ ದೇಶಗಳಿಗೂ ಹರಡಿತು. ಈ ಪ್ರದೇಶದಲ್ಲಿ ಖ್ಮೇರ್, ಮಜಪಾಹಿತ್, ಶೈಲೇಂದ್ರ, ಚಂಪಾ, ಶ್ರೀವಿಜಯ ಮೊದಲಾದ ಕೆಲವು ಮುಖ್ಯ ಭಾರತೀಯ ಸಾಮ್ರಾಜ್ಯಗಳು ಸ್ಥಾಪಿಸಲ್ಪಟ್ಟವು. ಇವುಗಳ ಮೂಲಕ ರಾಮಾಯಣ ಇಂಡೊನೇಷ್ಯಾ (ಜಾವಾ, ಸುಮಾತ್ರಾ ಮತ್ತು ಬೋರ್ನಿಯೊ), ಥೈಲೆಂಡ್, ಕಾಂಬೋಡಿಯ, ಮಲೇಷಿಯ, ವಿಯೆಟ್ನಾಮ್ ಮತ್ತು ಲಾಓಸ್ ಗಳಲ್ಲಿ ಸಾಹಿತ್ಯ, ಶಿಲ್ಪಕಲೆ ಮತ್ತು ನಾಟಕ ಮಾಧ್ಯಮಗಳಲ್ಲಿ ವ್ಯಕ್ತವಾಯಿತು.

ರಾಮಾಯಣದ ರಚನೆ

ರಾಮಾಯಣಗಳಲ್ಲೆಲ್ಲ ಹಳೆಯದೂ ಹೆಚ್ಚು ಜನರು ಓದುವಂಥದೂ ಆದ ವಾಲ್ಮೀಕಿಯ 'ರಾಮಾಯಣ'ವು ಅನೇಕ ಸಂಸ್ಕೃತಿಗಳಲ್ಲಿ ಬಳಕೆಯಲ್ಲಿರುವ ಅನೇಕ ರಾಮಾಯಣದ ಆವೃತ್ತಿಗಳಿಗೆ ಆಧಾರವಾಗಿದೆ. ಈ ಕೃತಿಯು ಅನೇಕ ಪೂರ್ಣ ಮತ್ತು ಅಪೂರ್ಣ ಹಸ್ತಪ್ರತಿಗಳಲ್ಲಿ ಉಳಿದುಕೊಂಡು ಬಂದಿದೆ. ಅವುಗಳಲ್ಲಿ ಅತ್ಯಂತ ಹಳೆಯದು ೧೧ನೆಯ ಶತಮಾನದ್ದು. ವಾಲ್ಮೀಕಿ ರಾಮಾಯಣದ ಪ್ರಸ್ತುತ ಪ್ರತಿಯು ಉತ್ತರ ಭಾರತದ ಹಾಗೂ ದಕ್ಷಿಣ ಭಾರತದ ಎರಡು ಪ್ರಾದೇಶಿಕ ಆವೃತ್ತಿಗಳ ರೂಪದಲ್ಲಿ ನಮಗೆ ಲಭ್ಯವಾಗಿದೆ . ವಾಲ್ಮೀಕಿ ರಾಮಾಯಣವನ್ನು ರಾಮನ ಜನ್ಮದಿಂದ ಹಿಡಿದು ಅವನ ಅವತಾರ ಸಮಾಪ್ತಿಯವರೆಗಿನ ಜೀವನವನ್ನು ಸಾಮಾನ್ಯವಾಗಿ ಏಳು ಕಾಂಡಗಳಾಗಿ ವಿಭಜಿಸಲಾಗುತ್ತದೆ .

ವಾಲ್ಮೀಕಿ ರಾಮಾಯಣದ ಮೊದಲ ಮತ್ತು ಕಡೆಯ ಕಾಂಡಗಳನ್ನು ವಾಲ್ಮೀಕಿಯೇ ಬರೆದಿರುವದರ ಬಗ್ಗೆ ಸಂದೇಹಗಳಿವೆ . ಈ ಎರಡು ಅಧ್ಯಾಯಗಳು ಮತ್ತು ಉಳಿದ ಭಾಗದ ನಡುವೆ ಶೈಲಿಯಲ್ಲಿ ವ್ಯತ್ಯಾಸ ಮತ್ತು ಕಥೆಯಲ್ಲಿ ಅನೇಕ ವಿರೋಧಾಭಾಸಗಳಿದ್ದರೂ ಈ ಎರಡು ಅಧ್ಯಾಯಗಳು ಕೃತಿಯ ಬೇರ್ಪಡಿಸಲಾಗದ ಅಂಗ ಎಂದು ಅನೇಕ ತಜ್ಞರ ಅಭಿಪ್ರಾಯವಾಗಿದೆ. ರಾಮಾಯಣದಲ್ಲಿ ಕಂಡುಬರುವ ರಾಮನ ಜನ್ಮ, ಅವನ ದೈವೀ ಅಂಶ ಮತ್ತು ರಾವಣನನ್ನು ಕುರಿತಾದ ದಂತಕಥೆಗಳಂಥ ಅನೇಕ ಪೌರಾಣಿಕ ಅಂಶಗಳ ಬಹುಭಾಗ ಈ ಎರಡು ಅಧ್ಯಾಯಗಳಲ್ಲೇ ಕಂಡುಬರುತ್ತದೆ .

ರಾಮಾಯಣದ ಮುಖ್ಯ ಪಾತ್ರಗಳು

ಸಾರಾಂಶ

ರಾಮಾಯಣದ ನಾಯಕನಾದ ರಾಮ ಹಿಂದೂಗಳಿಂದ ಪೂಜಿಸಲ್ಪಡುವ ಜನಪ್ರಿಯ ದೇವರುಗಳಲ್ಲಿ ಒಬ್ಬ. ರಾಮ ನಡೆದ ದಾರಿಯೆಂದು ಹೇಳಲಾದ ಸ್ಥಳಗಳಿಗೆ ತೀರ್ಥಯಾತ್ರಿಗಳು ಭೇಟಿ ಕೊಡುವುದುಂಟು. ರಾಮಾಯಣ ಕೇವಲ ಸಾಹಿತ್ಯ ಕೃತಿಯಾಗಿರದೆ ಹಿಂದೂ ಧರ್ಮದ ಒಂದು ಭಾಗವೇ ಆಗಿದೆ. ಹಿಂದೂ ಧರ್ಮದಲ್ಲಿ ಅದಕ್ಕೆ ಸಲ್ಲುವ ಗೌರವ ಎಷ್ಟೆಂದರೆ ರಾಮಾಯಣ ಅಥವಾ ಅದರ ಕೆಲವು ಭಾಗಗಳನ್ನು ನಿಷ್ಠೆಯಿಂದ ಓದಿ ಅಥವಾ ಕೇಳಿದಲ್ಲಿ ಪಾಪಗಳಿಂದ ಮುಕ್ತಿ ದೊರಕುತ್ತದೆ ಎಂಬ ನಂಬಿಕೆಯೂ ಇದೆ. ಹಿಂದೂ ಧಾರ್ಮಿಕ ನಂಬಿಕೆಯ ಪ್ರಕಾರ, ರಾಮ, ಹಿಂದೂ ತ್ರಿಮೂರ್ತಿಗಳಲ್ಲಿ ಒಬ್ಬನಾದ ವಿಷ್ಣುವಿನ ಅವತಾರ. ರಾಮನ ಅವತಾರದ ಉದ್ದೇಶ ಭೂಮಿಯ ಮೇಲೆ ಧರ್ಮವನ್ನು ಸ್ಥಾಪಿಸುವುದು.

ರಾಮನ ಯೌವನ

ವಿಶ್ವದ ಸೃಷ್ಟಿಕರ್ತನಾದ ಬ್ರಹ್ಮನು ರಾಕ್ಷಸರರ ರಾಜ ರಾವಣನ ಘೋರ ತಪಸ್ಸಿಗೆ ಮೆಚ್ಚಿ ಅವನನ್ನು ದೇವತೆಗಳು, ರಾಕ್ಷಸರು, ಅಥವಾ ಯಕ್ಷಕಿನ್ನರರು ಕೊಲ್ಲಲಾಗದೆಂಬ ವರವನ್ನು ಕೊಟ್ಟಿದ್ದನು .ಅದನ್ನು ಅವನು ಹಿಂತೆಗೆದುಕೊಳ್ಳುವದು ಸಾಧ್ಯವಿರಲಿಲ್ಲ. ಅಂಥ ವರವನ್ನು ಪಡೆದು ರಾವಣನು ತನ್ನ ಸಹಚರ ರಾಕ್ಷಸರೊಡಗೂಡಿ ಭೂಸಂಹಾರಕ್ಕೆ ತೊಡಗಿ , ಶಿಷ್ಟಜನರಿಗೆ ಅದರಲ್ಲೂ ಬ್ರಾಹ್ಮಣರಿಗೆ ಅವರ ಜಪತಪಗಳಿಗೆ ಉಪದ್ರವ ಕೊಡಲಾರಂಭಿಸಿದನು . ಇದನ್ನು ನೋಡಿ ಎಲ್ಲ ದೇವತೆಗಳು ಭೂಮಿಯನ್ನೂ ತಮ್ಮನ್ನು ಈ ದುಷ್ಟನಿಂದ ಕಾಪಾಡು ಎಂದು ಬ್ರಹ್ಮನ ಮೊರೆ ಹೊಕ್ಕರು . ಬ್ರಹ್ಮನು ವಿಷ್ಣುವಿನ ಬಳಿಸಾರಿ ದೇವತೆಗಳ ಚಿಂತೆಯನ್ನು ಅರುಹಿ , ರಾವಣನು ಮನುಷ್ಯರಿಂದ ಅಥವಾ ಪ್ರಾಣಿಗಳಿಂದ ಮರಣಹೊಂದದ ವರವನ್ನು ಪಡೆದಿಲ್ಲದಿರುವದರಿಂದ ವಿಷ್ಣುವೇ ಮಾನವನಾಗಿ ಅವತಾರವೆತ್ತಿ ರಾವಣನನ್ನು ಸಂಹರಿಸಬೇಕೆಂದು ಕೇಳಿಕೊಂಡನು.

ಈ ಮಧ್ಯೆ ಕೋಸಲವನ್ನು ಆಳುತ್ತಿದ್ದ ಅಯೋಧ್ಯೆಯ ರಾಜ ದಶರಥನಿಗೆ ಮಕ್ಕಳಿಲ್ಲದ್ದರಿಂದ ತನ್ನ ಉತ್ತರಾಧಿಕಾರಿಯ ಬಗ್ಗೆ ಚಿಂತೆಯಲ್ಲಿದ್ದನು . ಮಂತ್ರಿಗಳು ಹಾಗೂ ಪುರೋಹಿತರ ಸಲಹೆಯ ಮೇರೆಗೆ ಪುತ್ರಸಂತಾನಕ್ಕಾಆಗಿ ಪುತ್ರಕಾಮೇಷ್ಟಿ ಯಜ್ಞವನ್ನು ಮಾಡಿದನು. ವಿಷ್ಣು ದಶರಥನ ಜ್ಯೇಷ್ಠ ಪುತ್ರನಾಗಿ ಜನಿಸಲು ನಿರ್ಧರಿಸಿ ದೈವೀ ಪುರುಷನೊಬ್ಬನನ್ನು ಯಜ್ಞಕುಂಡದಲ್ಲಿ ಹುಟ್ಟುವಂತೆ ಮಾಡಿದನು. ಈ ದೈವೀ ಪುರುಷ ದಶರಥನಿಗೆ ಅಮೃತವಿದ್ದ ಚಿನ್ನದ ಕಲಶವೊಂದನ್ನು ನೀಡಿ ತನ್ನ ರಾಣಿಯರಿಗೆ ಅದನ್ನು ನೀಡುವಂತೆ ಹೇಳಿದನು. ದಶರಥನು ಅದನ್ನು ತನ್ನ ಮೂವರು ರಾ‍ಣಿಯರಾದ ಕೌಸಲ್ಯೆ, ಸುಮಿತ್ರೆ ಮತ್ತು ಕೈಕೇಯಿ ಇವರ ನಡುವೆ ಹಂಚಿದನು. ಕಾಲಕ್ರಮೇಣ ಅವರು ಗರ್ಭಿಣಿಯರಾಗಿ ನಾಲ್ಕು ಮಕ್ಕಳಿಗೆ ಜನ್ಮವಿತ್ತರು. ರಾಣಿ ಕೌಸಲ್ಯೆಗೆ ಹಿರಿಯ ಮಗನಾಗಿ ರಾಮನೂ , ಕೈಕೇಯಿಗೆ ಭರತನೂ ಮತ್ತು ಲಕ್ಷ್ಮಣ ಮತ್ತು ಶತ್ರುಘ್ನರು ಸುಮಿತ್ರೆಗೂ ಜನಿಸಿದರು.

ಈ ಬಾಲಕರು ವಸಿಷ್ಠರಿಂದ ಶಾಸ್ತ್ರಗಳನ್ನೂ ಬಿಲ್ಲುವಿದ್ಯೆಯನ್ನೂ ಕಲಿಯುತ್ತ ಬೆಳೆದರು. ಒಂದು ದಿನ ವಿಶ್ವಾಮಿತ್ರರು ರಾಜ್ಯಕ್ಕೆ ಬಂದು ದಶರಥನಲ್ಲಿ ತಮ್ಮ ಯಜ್ಞಯಾಗಾದಿಗಳಿಗೆ ಭಂಗತರುತ್ತಿರುವ ರಾಕ್ಷಸರಿಂದ ತಮ್ಮನ್ನು ಕಾಪಾಡಲು ರಾಮನನ್ನು ಕಳಿಸಬೇಕೆಂದು ಕೋರಿದರು. ಒಲ್ಲದ ಮನ್ಸಸ್ಸಿನಿಂದ ವಿಶ್ವಾಮಿತ್ರರೊಡನೆ ರಾಮಲಕ್ಷ್ಮಣರನ್ನು ಕಳಿಸಿಕೊಡಲು ಅವನು ಒಪ್ಪಿದನು. ಈ ಸೋದರರು ತಮ್ಮ ಕರ್ತವ್ಯವನ್ನು ಪೂರೈಸಲು ವಿಶ್ವಾಮಿತ್ರನು ಸಂತೋಷಪಟ್ಟು ಅವರಿಗೆ ಅನೇಕ ದಿವ್ಯಾಸ್ತ್ರಗಳನ್ನು ಅನುಗ್ರಹಿಸಿದನು.

ವಿಶ್ವಾಮಿತ್ರರೊಡನೆಯ ಪ್ರಯಾಣದ ಕೊನೆಯಲ್ಲಿ ರಾಮನು ಮಿಥಿಲಾ ರಾಜ್ಯಕ್ಕೆ ಬಂದನು. ಅಲ್ಲಿ ಜನಕ ಮಹಾರಾಜನು ತನ್ನ ಮಗಳು ಅಪ್ರತಿಮ ಸುಂದರಿ ಸೀತೆಯನ್ನು ತನ್ನ ಆಸ್ಥಾನದಲ್ಲಿದ್ದ ಶಿವನ ಬಹಳ ಬಲಿಷ್ಠವಾದ ಧನುಸ್ಸನ್ನು ಹೆದೆಯೀರಿಸಿದವನಿಗೆ ತನ್ನ ಮಗಳನ್ನು ಮದುವೆ ಮಾಡಿಕೊಡಲಿರುವದನ್ನು ಅರಿತನು. ಅನೇಕ ವಿವಾಹೇಚ್ಛುಗಳು ಪ್ರಯತ್ನಿಸಿ ಸೋತಿದ್ದ ಈ ಕಾರ್ಯವನ್ನು ಸಾಧಿಸಲು ರಾಮನು ನಿಶ್ಚಯಿಸಿದನು. ಅವನು ಜನಕನ ಆಸ್ಥಾನಕ್ಕೆ ಬಂದಾಗ ಜನಕನು ಅವನ ಲಾವಣ್ಯಕ್ಕೆ ಮಾರುಹೋದನು. ಐದು ಸಾವಿರ ಜನರು ಆ ಬಿಲ್ಲನ್ನು ಎಂಟು ಗಾಲಿಗಳ ರಥದಲ್ಲಿ ಆಸ್ಥಾನಕ್ಕೆ ಎಳೆದು ತಂದರು. ರಾಮನು ಬಹಳ ಸುಲಭವಾಗಿ ಅದನ್ನು ಮುರಿಯುವಷ್ಟು ಬಗ್ಗಿಸಿದನು. ಜನಕನು ಸಂತಸದಿಂದ ತನ್ನ ಲಾವಣ್ಯವತಿ ಮಗಳನ್ನು ರಾಮನಿಗೆ ಮದುವೆ ಮಾಡಿಕೊಟ್ಟನು. ಭವ್ಯವದ ಮದುವೆ ಸಮಾರಂಭದ ನಂತರ ನವಜೋಡಿಯು ಅಯೋಧ್ಯೆಗೆ ಪ್ರಯಾಣ ಬೆಳೆಸಿತು.

ರಾಮನ ವನವಾಸ

ರಾಜ ದಶರಥನು ತನ್ನ ಹಿರಿಯ ಮಗ ಹಾಗೂ ಪದ್ಧತಿಯಂತೆ ಉತ್ತರಾಧಿಕಾರಿಯಾದ ರಾಮನನ್ನು ಯುವರಾಜನನ್ನಾಗಿ ಮಾಡಲು ನಿರ್ಧರಿಸಿದನು. ಅವನ ಪ್ರಜೆಗಳು ಈ ಘೋಷಣೆಯನ್ನು ಸಂತಸದಿಂದ ಸ್ವಾಗತಿಸಿದರು. ಇಡೀ ನಗರವು ಈ ಸಂಬಂಧದ ಉತ್ಸವವನ್ನೂ ವಿಜೃಂಭಣೆಯಿಂದ ಆಚರಿಸಲು ಸಿದ್ಧತೆಗಳಲ್ಲಿ ತೊಡಗಿತು. ದಶರಥನು ಈ ಆಚರಣೆಗಳ ಸಂಬಂಧ ಚರ್ಚಿಸಲು ತನ್ನ ಪತ್ನಿ ಕೈಕೇಯಿ ಇದ್ದಲ್ಲಿಗೆ ಹೋದನು. ಆದರೆ ದುಷ್ಟದಾಸಿಯಾದ ಮಂಥರೆಯಿಂದ ದುರ್ಬೋಧನೆಗೊಳಗಾಗಿ 'ಯುವರಾಜನಾಗುತ್ತಿರುವದು ಪ್ರವಾಸದಲ್ಲಿರುವ ತನ್ನ ಮಗ ಭರತನಲ್ಲ, ಆದರೆ ಕೌಸಲ್ಯೆಯ ಮಗ ರಾಮ' ಎಂದು ಅಸೂಯೆಪಟ್ಟು ದುಃಖಿಸಿದಳು. ದಶರಥನು ಬಂದಾಗ ಅವಳು ಅಂತಃಪುರದಲ್ಲಿ ಕಣ್ಣೀರುಗರೆಯುತ್ತಿದ್ದಳು. ಚಿಂತಿತನಾದ ದಶರಥನ ಪ್ರಶ್ನೆಗಳಿಗೆ ಉತ್ತರವಾಗಿ ಕೈಕೇಯಿ, ಅನೇಕ ವರ್ಷಗಳ ಹಿಂದೆ ದಶರಥ ತನಗಿತ್ತಿದ್ದ ಎರಡು ವರಗಳನ್ನು ನೆನಪಿಸಿದಳು. ಈ ವರಗಳನ್ನು ಪೂರೈಸಿದರೆ ಪ್ರಸನ್ನಳಾಗುವುದಾಗಿ ಹೇಳಿದಳು. ಇದಕ್ಕೆ ಪೂರಕವಾಗಿ ಅವಳು, ಮೊದಲನೆಯದಾಗಿ, ತನ್ನ ಮಗ ಭರತನನ್ನು ಯುವರಾಜನಾಗಿ ನೇಮಿಸಬೇಕೆಂದೂ, ಎರಡನೆಯದಾಗಿ, ರಾಮನನ್ನು ಹದಿನಾಲ್ಕು ವರ್ಷಕಾಲ ಘೋರವಾದ ದಂಡಕಾರಣ್ಯಕ್ಕೆ ವನವಾಸಕ್ಕೆ ಕಳಿಸಬೇಕೆಂದೂ ಕೇಳಿದಳು. ದುಃಖಿತನಾದ ದಶರಥ, ಆದಾಗ್ಯೂ ತನ್ನ ವಚನವನ್ನು ಪರಿಪಾಲಿಸಿಕೊಳ್ಳಲು ನಿರ್ಧರಿಸಿದನು. ಆದರ್ಶ ಪುತ್ರನಾದ ರಾಮ, ಸಿಂಹಾಸನದ ಮೇಲೆ ತನಗಿದ್ದಹಕ್ಕನ್ನು ಬಿಟ್ಟುಕೊಟ್ಟು ವನವಾಸಕ್ಕೆ ಹೊರಡಲು ಸಿದ್ಧನಾದನು. ಅವನ ನಿಷ್ಠಾವಂತ ಪತ್ನಿ ಸೀತೆ ಮತ್ತು ತಮ್ಮ ಲಕ್ಷ್ಮಣ, ರಾಮನ ಜೊತೆ ಹೊರಡಲು ನಿರ್ಧರಿಸಿದರು. ದಶರಥ ದುಃಖದಲ್ಲಿದ್ದಂತೆ ರಾಮ, ಅಯೋಧ್ಯೆಯ ಪರಿತಪ್ತ ಜನರಿಂದ ಹಿಂಬಾಲಿಸಲ್ಪಟ್ಟು ವನವಾಸಕ್ಕೆ ತೆರಳಿದನು. ಸ್ವಲ್ಪ ಕಾಲಾನಂತರ ದಶರಥ ದುಃಖದಿಂದ ಮರಣವನ್ನಪ್ಪಿದನು.

ಸೀತಾಪಹರಣ

ರಾಮ, ಸೀತೆ ಮತ್ತು ಲಕ್ಷ್ಮಣ ಅಯೋಧ್ಯೆ ಮತ್ತು ಅಲ್ಲಿನ ಜನರನ್ನು ಬಿಟ್ಟು ಗಂಗಾ ನದಿಯನ್ನು ದಾಟಿ ಕಾಡಿನೊಳಕ್ಕೆ ಹೋದರು. ಚಿತ್ರಕೂಟ ಎಂಬ ಸುಂದರ ಸ್ಥಳವನ್ನು ಹುಡುಕಿ ಅಲ್ಲಿ ತಮ್ಮ ಕುಟೀರವನ್ನು ಸ್ಥಾಪಿಸಿದರು. ಅತ್ಯಂತ ಸುಂದರವಾಗಿದ್ದ ಈ ಸ್ಥಳದಲ್ಲಿ ಎಲ್ಲ ರೀತಿಯ ಫಲಪುಷ್ಪಗಳಿದ್ದು ಸಂಪೂರ್ಣ ಪ್ರೇಮದಿಂದ ಕೂಡಿದ್ದ ಕುಟೀರ ಭೂಮಿಯ ಮೇಲಿದ್ದ ಸ್ವರ್ಗವೇ ಆಯಿತು. ಕಾಡಿನಲ್ಲಿ ರಾಮ ಗರುಡರಾಜನಾದ ಜಟಾಯುವಿನೊಂದಿಗೆ ಮಿತ್ರತ್ವವನ್ನು ಸ್ಥಾಪಿಸಿದ.

ಇಷ್ಟರಲ್ಲಿ ಅಯೋಧ್ಯೆಗೆ ಮರಳಿ ಬಂದ ಭರತ, ನಡೆದ ವಿಷಯವನ್ನು ಕೇಳಿ, ರಾಮನನ್ನು ವನವಾಸಕ್ಕೆ ಕಳಿಸುವಲ್ಲಿ ತನ್ನ ತಾಯಿ ಕೈಕೇಯಿ ವಹಿಸಿದ ಪಾತ್ರದ ಬಗ್ಗೆ ಕೋಪಗೊಂಡನು. ರಾಮನನ್ನು ಹಿಂದಕ್ಕೆ ತರುವ ಉದ್ದೇಶದಿಂದ ಕಾಡಿಗೆ ಬಂದು ರಾಮನನ್ನು ಹಿಂದಕ್ಕೆ ಬರುವಂತೆ ಬೇಡಿಕೊಂಡನು. ತಂದೆಯ ವಚನದಿಂದ ಬದ್ಧನಾದ ರಾಮ ಇದಕ್ಕೆ ನಿರಾಕರಿಸಿದಾಗ ರಾಮನ ಪಾದುಕೆಗಳನ್ನು ಅಯೋಧ್ಯೆಗೆ ಒಯ್ದು ಸಿಂಹಾಸನದ ಮೇಲೆ ಸ್ಥಾಪಿಸಿ ರಾಮನ ಹೆಸರಿನಲ್ಲಿ ನಂದಿಗ್ರಾಮದಿಂದ ಭರತ ರಾಜ್ಯವನ್ನು ಆಳುತ್ತಿದ್ದನು. ಹದಿನಾಲ್ಕು ವರ್ಷಗಳಲ್ಲಿ ರಾಮ ಮರಳಿ ಬರದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರವನ್ನೂ ಭರತ ತೆಗೆದುಕೊಂಡನು.

ಒಂದು ದಿನ, ರಾವಣನ ತಂಗಿಯಾದ ಶೂರ್ಪನಖಿ ಎಂಬ ರಾಕ್ಷಸಿ ಚಿತ್ರಕೂಟದಲ್ಲಿ ರಾಮನನ್ನು ಕಂಡು ಅವನನ್ನು ಪ್ರೇಮಿಸಿದಳು. ಸುಂದರ ಹುಡುಗಿಯ ವೇಷ ಧರಿಸಿ ರಾಮನನ್ನು ಆಕರ್ಷಿಸಲು ಪ್ರಯತ್ನಿಸಿದಳು. ತನ್ನ ಪತ್ನಿಯತ್ತ ನಿಷ್ಠಾವಂತನಾದ ರಾಮ ಪ್ರತಿಕ್ರಿಯೆ ತೋರಿಸಲಿಲ್ಲ. ಶೂರ್ಪನಖಿಯ ವರ್ತನೆಯಿಂದ ಕುಪಿತನಾದ ಲಕ್ಷ್ಮಣ ಅವಳ ಮೂಗು ಮತ್ತು ಕಿವಿಗಳನ್ನು ಕತ್ತರಿಸಿಬಿಟ್ಟನು. ರಾವಣನತ್ತ ಮರಳಿ ಶೂರ್ಪನಖಿ ಇದರ ಬಗ್ಗೆ ದೂರಿತ್ತಳು. ಅವಳಿಂದ ಸೀತೆಯ ಸೌಂದರ್ಯದ ಬಗ್ಗೆ ಕೇಳಿದ ರಾವಣ, ರಾಮನನ್ನು ಕೊಂದು ಸೀತೆಯನ್ನು ಹೊತ್ತೊಯ್ಯುವ ನಿರ್ಧಾರವನ್ನು ಮಾಡಿದನು. ರಾವಣನ ಸಹಾಯಕ್ಕೆ ಬಂದ ಮಾರೀಚ ರಾಮ ಮತ್ತು ಲಕ್ಷ್ಮಣರು ಸೀತೆಯನ್ನು ಕುಟೀರದಲ್ಲಿ ಬಿಟ್ಟು ದೂರ ಬರುವಂತೆ ಮಾಡಿದನು. ಹೊರಡುವ ಮುನ್ನ, ಲಕ್ಷ್ಮಣ ಮಣ್ಣಿನಲ್ಲಿ ಒಂದು ಗೆರೆಯನ್ನು ಎಳೆದು ಅದರ ಒಳಗೆ ಇರುವವರೆಗೂ ಸೀತೆ ಸುರಕ್ಷಿತಳಾಗಿ ಇರುವಳೆಂದು ತಿಳಿಸಿ ಹೋದನು. ಮುದುಕನ ವೇಷ ಧರಿಸಿ ಬಂದ ರಾವಣ ಅನ್ನದಾನ ಮಾಡುವಂತೆ ಸೀತೆಯನ್ನು ಕೇಳಿಕೊಂಡನು. ಗೆರೆಯನ್ನು ದಾಟಲು ಹೆದರಿದರೂ, ಅವನಿಗೆ ದಾನ ಮಾಡಲು ಸೀತೆ ಮುಂದೆ ಬಂದಾಗ ರಾವಣ ಅವಳನ್ನು ಹೊತ್ತುಕೊಂಡು ತನ್ನ ಪುಷ್ಪಕ ವಿಮಾನದಲ್ಲಿ ಹಾರಿದನು. ಇದನ್ನು ಕಂಡ ಜಟಾಯು ಸೀತೆಯ ರಕ್ಷಣೆಗೆ ಬಂದಾಗ ರಾವಣ ಜಟಾಯುವಿನ ರೆಕ್ಕೆಗಳನ್ನು ಕತ್ತರಿಸಿ ಹೋದನು.

ಹಿಂದಕ್ಕೆ ಮರಳಿದ ರಾಮ-ಲಕ್ಷ್ಮಣರು ಸೀತೆಯನ್ನು ಕಾಣದೆ ಹುಡುಕುತ್ತಿದ್ದಾಗ ಜಟಾಯುವಿನಿಂದ ಸೀತಾಪಹರನದ ವಿಷಯವನ್ನು ತಿಳಿದರು.

ವಾನರ ಸಾಮ್ರಾಜ್ಯ

ತಮ್ಮ ಹುಡುಕಾಟವನ್ನು ಮುಂದುವರೆಸಿ ರಾಮ ಲಕ್ಷ್ಮಣರು ಕಿಷ್ಕಿಂದೆಯ ವಾನರ ರಾಜನಾದ ಸುಗ್ರೀವ ಹಾಗೂ ಹನುಮಂತನನ್ನು ಭೇಟಿಯಾಗುತ್ತಾರೆ. ಹನುಮಂತ ಸುಗ್ರೀವನ ಸೈನ್ಯಕ್ಕೆ ಸೇನಾಧಿಪತಿ. ಸೀತೆ ರಾವಣನ ರಥದಿಂದ ಎಸೆದ ಆಭರಣಗಳು ವಾನರರಿಗೆ ದೊರೆತಿರುತ್ತದೆ. ತನ್ನ ಅಣ್ಣ ವಾಲಿಯಿಂದ ಸಾಮ್ರಾಜ್ಯದಿಂದ ಹೊರಗಟ್ಟಲ್ಪಟ್ಟ ಸುಗ್ರೀವ ರಾಮನ ಸಹಾಯ ಪಡೆಯುತ್ತಾನೆ. ಪರಸ್ಪರ ಕಾಳಗದಲ್ಲಿ ರಾಮನ ಸಹಾಯ ಪಡೆದ ಸುಗ್ರೀವನಿಂದ ವಾಲಿ ಮಡಿಯುತ್ತಾನೆ.

ಸಹಾಯ ಮಾಡಿದ ರಾಮನೊಂದಿಗೆ ಸುಗ್ರೀವ ತನ್ನ ಸೈನ್ಯವನ್ನು ಕೂಡಿ ಲಂಕೆಯೆಡೆಗೆ ಹೊರಡುತ್ತಾನೆ.

ರಾಮ, ಸುಗ್ರೀವರು ಸೀತೆಯನ್ನು ಹುಡುಕಲು ತಮ್ಮ ವಾನರಸೇನೆಯನ್ನು ನಾನಾದಿಕ್ಕಿಗೆ ಕಳಿಸಿದರು .ಅವರು ರಾವಣನಿಂದ ಹತನಾದ ಜಟಾಯುವಿನ ಸೋದರ, ಸಂಪಾತಿಯನ್ನು ಭೇಟಿಯಾಗುವವರೆಗೆ ಅವರ ಪ್ರಯತ್ನಗಳಿಗೆ ವಿಶೇಷ ಫಲ ದೊರೆಯಲಿಲ್ಲ . ಸಂಪಾತಿಯು ಅಂಗವೈಕಲ್ಯದಿಂದಾಗಿ ಹಾರಲು ಅಸಮರ್ಥನಾಗಿದ್ದನು . ಅವನು ಸೂರ್ಯನ ಅತಿ ಸಮೀಪಕ್ಕೆ ಹಾರಿದ್ದರಿಂದ ಅವನ ರೆಕ್ಕೆಗಳು ಸುಟ್ಟುಹೋಗಿದ್ದವು . ಬಲಶಾಲಿಯಾದ ಜಟಾಯುವು ಅವನನ್ನು ಸಾವಿನಿಂದ ರಕ್ಷಿಸಿದ್ದನು. ಇಬ್ಬರಲ್ಲಿ ಜಟಾಯು ದೇಹಬಲದಿಂದ ಗಟ್ಟಿಗನಾದರೂ ಸಂಪಾತಿಗೆ ಕಣ್ಣಿನ ಹೆಚ್ಚಿನ ದೃಷ್ಟಿಯಿದ್ದು ನೂರಾರು ಯೋಜನಗಳಷ್ಟು ದೂರ ನೋಡಬಲ್ಲವನಾಗಿದ್ದನು . ರಾವಣನು ತನ್ನ ಸೋದರನನ್ನು ಕೊಂದದ್ದನ್ನು ಕೇಳಿ ಅವನು ವಾನರರಿಗೆ ಸಹಾಯ ಮಾಡಲು ಒಪ್ಪಿದನು . ಅನತಿಕಾಲದಲ್ಲೇ ಅವನು ಸೀತೆಯನ್ನು ದಕ್ಷಿಣದಿಕ್ಕಿನಲ್ಲಿರುವದಾಗಿ ಪತ್ತೆಹಚ್ಚಿದನು. ಅವಳು ದಕ್ಷಿಣದಲ್ಲಿ ಸಮುದ್ರದಾಚೆಗಿನ ಲಂಕಾದ್ವೀಪದಲ್ಲಿನ ಅಶೋಕವನವೊಂದರಲ್ಲಿ ಸೆರೆಯಾಗಿರುವದನ್ನು ನೋಡಿ ಹೇಳಿದನು .

ಲಂಕೆಯಲ್ಲಿ ಹನುಮಂತ

ಸುಗ್ರೀವನು ತನ್ನ ವಾನರಸೈನ್ಯವನ್ನು ಅಂಗದನ ನೇತೃತ್ವದಲ್ಲಿ ದಕ್ಷಿಣಕ್ಕೆ ಕಳಿಸಿದನು. ಹನುಮಂತನು ಅಂಗದನ ಸೇನಾಪತಿಯಾಗಿ ತೆರಳಿದನು. ಅವರು ದಕ್ಷಿಣದಲ್ಲಿ ಬಹುದೂರ ಹೋದಮೇಲೆ ತಮ್ಮ ಮತ್ತು ಲಂಕಾದ್ವೀಪದ ನಡುವೆ ಮಹಾಸಾಗರವನ್ನು ಕಂಡರು. ಆ ಸಮುದ್ರವನ್ನು ದಾಟುವ ಬಗೆ ಹೇಗೆಂದು ತಿಳಿಯದಾದರು .ತನ್ನ ಸೈನಿಕರಿಗೆ ಅಲ್ಲಿಯೇ ಇರಹೇಳಿ ಹನುಮಂತನು ತನ್ನದೇಹವನ್ನು ಹಿಗ್ಗಿಸಿ ಮಹಾರೂಪ ತಾಳಿ ಅಪಾರ ಜಲರಾಶಿಯನ್ನು ಜಿಗಿದು ದಾಟಿ ತ್ರಿಕೂಟಪರ್ವತದ ಮೇಲೆ ಇಳಿದು ಲಂಕಾಪಟ್ಟಣದತ್ತನೋಡಿದನು. ನಗರಕ್ಕೆ ಭಾರೀ ಪಹರೆ ಇದ್ದದ್ದರಿಂದ ಬೆಕ್ಕಿನ ರೂಪತಾಳಿ ನಗರವನ್ನು ನುಸುಳಿ ನಗರವನ್ನು ವೀಕ್ಷಿಸಿದನು. ರಾವಣನು ತನ್ನ ಅಂತಃಪುರದಲ್ಲಿ ಸುಂದರಸ್ತ್ರೀಯರಿಂದ ಸುತ್ತುವರಿಯಲ್ಪಟ್ಟಿದ್ದನು. ಆದರೆ ಅಲ್ಲಿ ಸೀತೆ ಇರಲಿಲ್ಲ. ತನ್ನ ಅನ್ವೇಷಣೆಯನ್ನು ಮುಂದುವರಿಸಿ ಕೊನೆಗೆ ಆಶೋಕವನದಲ್ಲಿ ಮರದ ಕೆಳಗೆ ರಾಕ್ಷಸಿಯರಿಂದ ಸುತ್ತುವರೆಯಲ್ಪಟ್ಟು ದುಃಖದಿಂದ ಕಳೆಗುಂದಿದ ಸೌಂದರ್ಯವುಳ್ಳ ಸೀತೆಯನ್ನು ನೋಡಿದನು.

ಸಣ್ಣ ಕಪಿಯೊಂದರ ವೇಷ ತಾಳಿ ಹನುಮಂತನು ಮರದಿಂದ ಕೆಳಗೆ ಜಿಗಿದು ಅವಳಿಗೆ ರಾಮನ ಉಂಗುರವನ್ನು ಕೊಟ್ಟು ಅವಳಿಂದ ಒಂದು ಉಂಗುರವನ್ನು ತೆಗೆದುಕೊಂಡನು. ಅವಳನ್ನು ತನ್ನೊಡನೆ ಕೊಂಡೊಯ್ಯಲು ಸಿದ್ಧವಾಗಲು, ರಾಮನೇ ತನ್ನನ್ನು ರಕ್ಷಿಸಲು ಬರಬೇಕೆಂದು ಹೇಳಿ ತನ್ನನ್ನು ಹುಡುಕಿದ್ದಕ್ಕೆ ಸಾಕ್ಷಿಯಾಗಿ ಒಂದು ಬೆಲೆಯುಳ್ಳ ವಜ್ರವನ್ನು ರಾಮನಿಗೆ ಕೊಡುವದಕ್ಕಾಗಿ ಹನುಮಂತನಿಗೆ ಕೊಟ್ಟಳು. ಅವರು ಮಾತನಾಡುತ್ತಿರುವಾಗ ಅಲ್ಲಿ ಬಂದ ರಾವಣನು ಅವಳ ಮನವೊಲಿಸಲು ವ್ಯರ್ಥ ಪ್ರಯತ್ನ ಮಾಡಿ ಅವಳು ಇನ್ನೆರಡು ತಿಂಗಳಲ್ಲಿ ತನ್ನ ವಶವಾಗದಿದ್ದರೆ ತನ್ನ ಬೆಳಗಿನ ಉಪಾಹಾರಕ್ಕಾಗಿ ಅವಳ ಅಂಗಾಂಗಗಳನ್ನು ತುಂಡರಿಸುವದಾಗಿ ಬೆದರಿಸಿದನು.

ಸಿಟ್ಟಿಗೆದ್ದ ಹನುಮಂತನು ಮಾವಿನ ತೋಟವನ್ನು ಹಾಳುಮಾಡಿದನು. ಅವನನ್ನು ರಾಕ್ಷಸರು ಬಂಧಿಸಿ ರಾವಣನ ಮುಂದೆ ಕೊಂಡೊಯ್ದರು. ಹನುಮಂತನು ತಾನು ರಾಮನ ದೂತನೆಂದು ಹೇಳಿ , ಸೀತೆಯನ್ನು ರಾಮನಿಗೆ ಒಪ್ಪಿಸು ಇಲ್ಲವೆ ರಾಮನ ಕ್ರೋಧಕ್ಕೆ ಬಲಿಯಾಗು ಎಂದು ಹೇಳಿದನು. ಅವನ ಮಾತುಗಳನ್ನು ಕೇಳಿ ಸಿಟ್ಟಿಗೆದ್ದ ರಾವಣನು ಅವನನ್ನು ಕೊಲ್ಲಲು ಆಜ್ಞೆ ಮಾಡಿದನು.

ಆಗ ರಾವಣನ ನ್ಯಾಯಪರ ತಮ್ಮನಾದ ವಿಭೀಷಣನು ಮಧ್ಯಪ್ರವೇಶಿಸಿ ರಾವಣನಿಗೆ ಶಾಸ್ತ್ರಗಳಲ್ಲಿ ಹೇಳಿದ ಪ್ರಕಾರ ದೂತನನ್ನು ಕೊಲ್ಲುವದು ಅನುಚಿತ ಎಂದು ಹೇಳಿ ಅವನ ಅಪರಾಧಕ್ಕೆ ತಕ್ಕ ಶಿಕ್ಷೆ ವಿಧಿಸಲು ಸಲಹೆ ಮಾಡಿದನು. ರಾವಣನು ಒಪ್ಪಿ ತನ್ನ ರಾಕ್ಷಸ ಸೇವಕರಿಗೆ ಹನುಮಂತನ ಬಾಲಕೆ ಬೆಂಕಿಹಚ್ಚಲು ಆಜ್ಞೆ ಮಾಡಿದನು. ಬಾಲಕ್ಕೆ ಬೆಂಕಿ ಹತ್ತಿದ ನಂತರ ಹನುಮಂತನು ತನ್ನ ಶರೀರವನ್ನು ಸಣ್ಣದಾಗಿ ಮಾಡಿಕೊಂಡು ಕಟ್ಟುಗಳಿಂದ ಪಾರಾಗಿ ಮನೆಗಳ ಮೇಲೆಲ್ಲ ಜಿಗಿಯುತ್ತ ಹೋಗಿ ಲಂಕೆಯಲ್ಲೆಲ್ಲ ಬೆಂಕಿಯನ್ನು ಹರಡಿದನು. ಅವನು ರಾಮ, ಸುಗ್ರೀವರಿದ್ದಲ್ಲಿಗೆ ಮರಳಿ ಬಂದು ಸೀತೆಯು ಬಂಧನದಲ್ಲಿರುವದನ್ನು ತಿಳಿಸಿ ಯುದ್ಧಸಿದ್ಧತೆಗೆ ತೊಡಗಿದನು.

ಲಂಕೆಯಲ್ಲಿ ಯುದ್ಧ

ಸಮುದ್ರಕ್ಕೆ ಸೇತುವೆಯನ್ನು ಕಟ್ಟದ ಹೊರತು ಹನುಮಂತನ ಹೊರತು ಬೇರಾರೂ ಅದನ್ನು ದಾಟಲಾರರು ಎಂದು ರಾಮನು ನಿರ್ಣಯಿಸಿದನು. ವ್ಯರ್ಥವಾಗಿ ಮೂರು ದಿನ ಕಾದರೂ ತನ್ನನ್ನು ಅಲಕ್ಷಿಸಿದ್ದಕ್ಕಾಗಿ ಸಿಟ್ಟಿಗೆದ್ದ ರಾಮನು ತನ್ನ ಬಾಣಗಳನ್ನು ಸಮುದ್ರಕ್ಕೆ ಗುರಿಯಿಡಲು ವರುಣನು ಪ್ರತ್ಯಕ್ಷವಾದನು . ಸಮುದ್ರದೇವತೆಯಾದ ಅವನು 'ಸೇತುವೆಯನ್ನು ಕಟ್ಟುವದಾದರೆ ನೆಲದ ಮೇಲೇ ಕಟ್ಟಿದಷ್ಟು ದೃಢವಾಗಿರುವಂತೆ ಸೇತುವೆಗೆ ಅಲೆಗಳು ಅನುಕೂಲವಾಗಿರುವಂತೆ ಏರ್ಪಡಿಸುವದಾಗಿ' ಮಾತು ಕೊಟ್ಟನು.

ರಾಮನು ಸೈನ್ಯದೊಂದಿಗೆ ಬರುವ ವಾರ್ತೆಯಿಂದ ಲಂಕೆಯಲ್ಲಿ ಭೀತಿಯ ವಾತಾವರಣ ಉಂಟಾಯಿತು. ರಾವಣನ ತಮ್ಮನಾದ ವಿಭೀಷಣನು, ರಾಮನೊಂದಿಗೆ ಸಂಧಿ ಮಾಡಿಕೊಳ್ಳಲು ರಾವಣನಿಗೆ ಸಲಹೆಯಿತ್ತಾಗ ರಾವಣನು ಅತೀವ ಸಿಟ್ಟಿಗೆದ್ದದ್ದರಿಂದ, ರಾಮನನ್ನು ಸೇರಿಕೊಂಡನು. ನಂತರ ನಡೆದ ಘನಘೋರ ಯುದ್ಧದಲ್ಲಿ ದೇವತೆಗಳೂ ಭಾಗವಹಿಸಿದರು. ವಿಷ್ಣು ಮತ್ತು ಇಂದ್ರ, ರಾಮನ ಪಕ್ಷವನ್ನೂ ಅಸುರರು ರಾವಣನ ಪಕ್ಷವನ್ನೂ ವಹಿಸಿದರು.

ಎರಡೂ ಪಕ್ಷಗಳಿಗೆ ಮಿಶ್ರಫಲಗಳೊಡನೆ ಯುದ್ಧ ಸ್ವಲ್ಪ ಕಾಲ ನಡೆದ ನಂತರ ರಾಮ-ರಾವಣರ ನಡುವೆ ನೇರ ಹೋರಾಟದ ಮೂಲಕ ಯುದ್ಧದ ಫಲಿತಾಂಶವನ್ನು ಘೋಷಿಸುವುದೆಂದು ತೀರ್ಮಾನಿಸಲಾಯಿತು. ಈ ಕಾಳಗದ ತೀವ್ರತೆಯಿಂದ ದೇವ-ದೇವತೆಗಳೂ ಭೀತರಾದರು. ರಾಮನ ಪ್ರತಿಯೊಂದು ಬಾಣವೂ ರಾವಣನ ಒಂದು ತಲೆ ಕತ್ತರಿಸಿದರೂ ಅದು ಮತ್ತೆ ಬೆಳೆಯುತ್ತಿತ್ತು. ಏನು ಮಾಡಬೇಕೆಂದು ತೋಚದೆ ಇದ್ದ ರಾಮನಿಗೆ ರಾವಣನ ದೇಹದತ್ತ ಗುರಿಯಿಡುವಂತೆ ವಿಭೀಷಣ ತಿಳಿಸಿಕೊಟ್ಟ.

ಈ ಉಪಾಯ ಫಲಿಸಿ ರಾವಣ ಉರುಳಿ ಬಿದ್ದಂತೆ, ಆಕಾಶದಿಂದ ಪುಷ್ಪಗಳು ರಾಮನ ಮೇಲೆ ಮಳೆಗರೆದವು. ಅವನ ಕಿವಿಗಳಲ್ಲಿ ದೈವೀ ಸಂಗೀತ ಅನುರಣಿಸಿತು. ರಾವಣನ ಪತ್ನಿ ಮಂಡೋದರಿಯ ವಿಲಾಪವನ್ನು ಕೇಳಿದ ರಾಮ ರಾವಣನಿಗೆ ಶಾಸ್ತ್ರೋಕ್ತ ಅಂತ್ಯಸಂಸ್ಕಾರವನ್ನು ಮಾಡಿ ಲಂಕೆಯನ್ನು ಪ್ರವೇಶಿಸಿದನು.

ಸಂತೋಷದಿಂದ ಬೀಗುತ್ತಿದ್ದ ಸೀತೆ ರಾಮನ ಜೊತೆಗೂಡಿದಳು. ಆದರೆ ಅವಳ ಸಂತೋಷ ತಾತ್ಕಾಲಿಕವಾಗಿತ್ತು. ತಲೆ ತಗ್ಗಿಸಿ ಅವಳನ್ನು ಬರಮಾಡಿಕೊಂಡ ರಾಮ, ರಾವಣನ ಮನೆಯಲ್ಲಿ ಅವಳು ಇದ್ದದ್ದರಿಂದ ತನ್ನ ಪತ್ನಿಯಾಗಲು ಅವಳು ತಕ್ಕವಳಾಗಿ ಉಳಿದಿಲ್ಲವೆಂದು ಹೇಳಿದ. ತನ್ನ ಪಾತಿವ್ರತ್ಯದ ಬಗ್ಗೆ ಅವನಿಗೆ ಭರವಸೆಯಿತ್ತಳು ಸೀತೆ. ಆದರು ರಾಮನ ಅನುಮಾನ ಮುಂದುವರೆದಿದ್ದರಿಂದ ಸೀತೆ ಆತ್ಮಹತ್ಯೆ ಮಾಡುವ ನಿರ್ಧಾರ ಮಾಡಿ ತನ್ನ ಚಿತೆಯನ್ನು ನಿರ್ಮಿಸಬೇಕೆಂದು ಹೇಳಿದಳು. ಎಲ್ಲ ಪ್ರೇಕ್ಷಕರ ಅಂತಃಕರಣವೂ ಸೀತೆಯ ಕಡೆಗಿದ್ದಿತು. ಸೀತೆ ಚಿತೆಯನ್ನೇರಿ ಕೆಲ ಕ್ಷಣಗಳಲ್ಲಿಯೇ ಅಗ್ನಿ ಆಕೆಯನ್ನು ತನ್ನ ಬಾಹುಗಳಲ್ಲಿ ಎತ್ತಿ ತಂದು ಬಿಟ್ಟನು. ಅಗ್ನಿಪರೀಕ್ಷೆಯಲ್ಲಿ ತನ್ನ ನಿರಪರಾಧವನ್ನು ತೋರಿಸಿದ ಸೀತೆಯನ್ನು ರಾಮ ಸ್ವಾಗತಿಸಿದನು. ರಾಮನ ನಡತೆಯನ್ನು ಸೀತೆ ಕ್ಷಮಿಸಿದಳು.

ಯುದ್ಧವನ್ನು ಗೆದ್ದು, ರಾವಣನನ್ನು ಸೋಲಿಸಿ, ಸೀತೆಯನ್ನು ಮರಳಿ ಪಡೆದು, ರಾಮ ವಿಜೃಂಭಣೆಯಿಂದ ಅಯೋಧ್ಯೆಗೆ ಮರಳಿ ಭರತ ಮತ್ತು ಅಯೋಧ್ಯೆಯ ಜನರ ಅಪಾರ ಸಂತೋಷಕ್ಕೆ ರಾಜ್ಯಭಾರವನ್ನು ವಹಿಸಿಕೊಂಡನು.

ಸೀತಾ ಪರಿತ್ಯಾಗ

ಶ್ರೀರಾಮನ ಆಳ್ವಿಕೆಯಲ್ಲಿ ಅಯೋಧ್ಯೆಯಲ್ಲಿ ಸುಖ,ಸಮೃದ್ಧಿಗಳು ನೆಲಸಿದ್ದವು. ಪ್ರಜೆಗಳು ಆನಂದದಿಂದಿದ್ದರು. ಆದರೆ ಈ ನೆಮ್ಮದಿ ಶಾಶ್ವತವಾಗಿ ಉಳಿಯಲಿಲ್ಲ. ರಾವಣನ ಸೆರೆಯಲ್ಲಿ ಬಹಳ ಕಾಲವಿದ್ದ ಸೀತೆಯ ಪಾವಿತ್ರ್ಯದ ಬಗೆಗೆ ಜನರು ಅನುಮಾನದಿಂದ ಮಾತಾಡತೊಡಗಿದರು. ಈ ವಿಷಯ ಗೂಢಚಾರರಿಂದ ರಾಮನಿಗೂ ತಿಳಿದು ಬಂದಿತು. ರಾಜ್ಯದಲ್ಲಿ ಉಂಟಾದ ಬರಗಾಲಕ್ಕೂ ಸೀತೆಯಿಂದಾಗಿರುವ ತಪ್ಪೇ ಕಾರಣವೆಂದು ಜನ ಗುಸುಗುಸು ಮಾಡತೊಡಗಿದರು. ತನ್ನ ಪ್ರಜೆಗಳನ್ನು ಸಂತೋಷಡಿಸಲು ರಾಮ ಸೀತೆಯನ್ನು ತ್ಯಜಿಸಲು ನಿರ್ಧರಿಸಿದನು. ಸೀತೆಯು ವನವಾಸ ಕಾಲದಲ್ಲಿ ರಾಮನೊಡನೆ ಸಂತೋಷದಿಂದ ಕಾಲಕಳೆದ ಅರಣ್ಯಕ್ಕೆ ಮತ್ತೊಮ್ಮೆ ಹೋಗಬೇಕಾಯಿತು.

ಸೀತೆ ಸ್ವಲ್ಪಮಾತ್ರವೂ ಗೊಣಗದೆ ಕಾಡಿಗೆ ಹೊರಟಳು. ದು:ಖತಪ್ತಳಾದ ಸೀತೆಗೆ ವಾಲ್ಮೀಕಿ ಮುನಿಯು ತನ್ನ ಆಶ್ರಮದಲ್ಲಿ ಆಶ್ರಯ ನೀಡಿದನು. ಸೀತೆ ವಾಲ್ಮೀಕಿ ಮುನಿಯ ಆಶ್ರಮದಲ್ಲಿ ಲವ ಮತ್ತು ಕುಶ ಎಂಬ ಅವಳಿಜವಳಿ ಗಂಡು ಮಕ್ಕಳಿಗೆ ಜನ್ಮ ನೀಡುತ್ತಾಳೆ. ಸೀತೆಯು ವಾಲ್ಮೀಕಿ ಮುನಿಯ ಸಹಾಯದಿಂದ ಮಕ್ಕಳನ್ನು ಬೆಳೆಸಿ ದೊಡ್ಡವರನ್ನಾಗಿ ಮಾಡುತ್ತಾಳೆ. ವಾಲ್ಮೀಕಿ ಲವ,ಕುಶರಿಗೆ ಗುರುವಾಗಿ ಸಕಲ ವಿದ್ಯೆಗಳನ್ನು ಹೇಳಿಕೊಡುತ್ತಾನೆ.

ಲವ, ಕುಶರು ಇಬ್ಬರು ಬೆಳೆದು ಇಪ್ಪತ್ತು ವರ್ಷದ ಯುವಕರಾಗಿದ್ದರು. ಅದೇ ಸಮಯದಲ್ಲಿ ರಾಮನನ್ನು ಒಂದು ಚಿಂತೆ ಕಾಡುತ್ತಿತ್ತು. ಬ್ರಾಹ್ಮಣನ ಮಗನಾಗಿದ್ದ ರಾವಣನನ್ನು ಕೊಂದಿರುವುದರಿಂದ ತನಗೆ ಬಂದಿರಬಹುದಾದ ಬ್ರಹ್ಮಹತ್ಯೆ ಎಂಬ ಪಾಪವನ್ನು ಕಳೆದುಕೊಳ್ಳಲು ನಿಶ್ಚಯಿಸಿದನು. ಅದಕ್ಕಾಗಿ ಅಶ್ವಮೇಧ ಯಾಗ ಮಾಡಬೇಕೆಂದು ನಿರ್ಧರಿಸಿದನು. ಈ ಯಾಗಕ್ಕೆ ತನ್ನ ದೇಶದ ಎಲ್ಲಾ ಪ್ರಜೆಗಳನ್ನೂ, ಋಷಿ ಮುನಿಗಳಿಗೂ ಆಹ್ವಾನವಿರುತ್ತದೆ. ವಾಲ್ಮೀಕಿ ಮುನಿಗಳು ಲವ, ಕುಶರೊಡನೆ ಈ ಯಾಗಕ್ಕೆ ಹೋಗಿರುತ್ತಾರೆ. ಯಾಗದ ದಿನ ಲವಕುಶರಿಬ್ಬರು ರಾಮನ ಎದುರು ವಾಲ್ಮೀಕಿ ಋಷಿಗಳಿಂದ ರಾಮಾಯಣವನ್ನು ಹಾಡುತ್ತಾರೆ. ರಾಮನಿಗೆ ಆ ಗಾಯನದ ಮೂಲಕ ತನ್ನದೇ ಕಥೆಯನ್ನು ಕೇಳಿ ಸೋಜಿಗವಾಗುತ್ತದೆ. ವಾಲ್ಮೀಕಿಯಿಂದ ರಾಮನಿಗೆ ಲವ, ಕುಶರು ತನ್ನ ಮಕ್ಕಳೆಂದು ತಿಳಿಯುತ್ತದೆ. ಸೀತೆಯು ವಾಲ್ಮೀಕಿ ಮುನಿಗಳ ಆಶ್ರಮದಲ್ಲಿರುವ ವಿಷಯ ತಿಳಿದು, ಅವಳನ್ನು ತಾನಿರುವಲ್ಲಿಗೆ ಬರುವಂತೆ ಹೇಳಿಕಳಿಸುತ್ತಾನೆ. ವಾಲ್ಮೀಕಿ ಮುನಿಯು ಸೀತೆಯನ್ನು ಆಶ್ರಮದಿಂದ ಕರೆದುಕೊಂಡು ಬರುತ್ತಾನೆ. ಆಗ ರಾಮ ಸೀತೆಯು ಮತ್ತೊಂದು ಪರೀಕ್ಷೆಯ ಮೂಲಕ ತನ್ನ ಮೇಲಿರುವ ಮೇಲಿರುವ ಕಳಂಕದಿಂದ ದೂರಾಗಬೇಕೆಂದು ಹೇಳುತ್ತಾನೆ. ರಾಮನ ಮಾತುಗಳನ್ನು ಕೇಳಿ ಸೀತೆಯನ್ನು ದು:ಖ ಆವರಿಸುತ್ತದೆ.

ಆಗ ಸೀತೆಯು ತನ್ನ ತಾಯಿಯಾದ ಭೂದೇವಿಯಲ್ಲಿ ಹೀಗೆ ಕೇಳಿಕೊಳ್ಳುತ್ತಾಳೆ - ತಾನು ಪತಿವ್ರತೆಯೇ ಆಗಿದ್ದಲ್ಲಿ, ಭೂಮಿ ಬಾಯಿ ಬಿರಿದು ನನ್ನನ್ನು ನಿನ್ನ ಬಳಿ ಕರೆದುಕೊಂಡು ಹೋಗು ಎಂದು ಕೇಳಿಕೊಳ್ಳುತ್ತಾಳೆ. ಎಲ್ಲರೂ ನೋಡುತ್ತಿರುವಂತೆಯೇ ಭೂಮಿ ದೊಡ್ಡ ಸದ್ದಿನೊಂದಿಗೆ ಬಾಯಿ ಬಿಡುತ್ತದೆ. ಅಲ್ಲಿ ಸೀತೆಗಾಗಿ ಸಿಂಹಾಸನವೊಂದು ಪ್ರತ್ಯಕ್ಷವಾಗುತ್ತದೆ. ಸೀತೆಯ ತಾಯಿಯಾದ ಭೂದೇವಿಯನ್ನು ತನ್ನ ಮಗಳನ್ನು ಅಪ್ಪಿಕೊಂಡು ಭೂಮಿ ಒಳಗೆ ಕರೆದುಕೊಂಡು ಹೋಗುತ್ತಿದ್ದಂತೆ ಭೂಮಿ ಮುಚ್ಚಿಕೊಳ್ಳುತ್ತದೆ. ಈ ದೃಶ್ಯವನ್ನು ಕಂಡು ರಾಮ ಸೀತೆಯನ್ನು ಅನುಮಾನಿಸಿದ್ದಕ್ಕಾಗಿ ಪಶ್ಚಾತ್ತಾಪ ಪಡುತ್ತಾನೆ. ಆಗ ಮುನಿಗಳು ರಾವಣನ ಸಂಹಾರದ ನಿಮಿತ್ತಕ್ಕಾಗಿ ಸೀತೆಯ ಅವತಾರವಾಗಿತ್ತು. ತನ್ನ ಕಾರ್ಯ ಮುಗಿದಿದ್ದರಿಂದ ಅವಳು ಹೋಗಿದ್ದಾಳೆ. ನೀನು ದುಃಖಿಸಬೇಡ ಎಂದು ರಾಮನನ್ನು ಸಮಾಧಾನಿಸುತ್ತಾರೆ.

ರಾಮಾಯಣದ ನೀತಿಪಾಠ

ವಾಲ್ಮೀಕಿಯು ತನ್ನ ರಾಮಾಯಣದಲ್ಲಿ ರಾಮನ ಮೂಲಕ ಮಾನವನ ಬಾಳುವೆಯ ರೀತಿಯ ಕುರಿತು ತನ್ನ ನೀತಿಯನ್ನು ವ್ಯಕ್ತಪಡಿಸುತ್ತಾನೆ . ಜೀವನವು ಕ್ಷಣಭಂಗುರವಾಗಿದ್ದು ಭೋಗಲಾಲಸೆಯ ನೀತಿಯು ಅರ್ಥಹೀನವಾದದ್ದು . ಆದರೆ ಹಾಗೆಂದು ಯಾವದೇ ವ್ಯಕ್ತಿಯು ಪುರಾತನ ಶಾಸ್ತ್ರಗಳಲ್ಲಿ ಹೇಳಿದ ಹಕ್ಕುಬಾಧ್ಯತೆಗಳಿಗೆ ವಿಮುಖನಾಗಬಾರದು. ವೇದದಲ್ಲಿ ಉಕ್ತವಾದದ್ದೇ ಧರ್ಮ, ವ್ಯಕ್ತಿಯು ಧರ್ಮವನ್ನು ಧರ್ಮಕ್ಕಾಗಿ ಪಾಲಿಸಬೇಕೇ ಹೊರತು ಅದರಿಂದ ಉಂಟಾಗುವ ಲಾಭ, ನಷ್ಟಗಳಿಗಾಗಿ ಅಲ್ಲ ಎಂಬುದು ಅವನ ಅಭಿಪ್ರಾಯ. ಇಂಥ ಧರ್ಮಪಾಲನೆಯಿಂದ ಇಹಲೋಕದಲ್ಲೂ ಪರಲೋಕದಲ್ಲೂ ವ್ಯಕ್ತಿಯ ಕಲ್ಯಾಣವಾಗುವದು ಅಷ್ಟೇ ಅಲ್ಲದೆ , ಯಾವುದೇ ಮಾತು ಕೊಡುವ ಮೊದಲೇ ಪರಿಣಾಮಗಳನ್ನು ಕುರಿತು ಯೋಚಿಸಬೇಕು ಮತ್ತು ಒಮ್ಮೆ ಮಾತು ಕೊಟ್ಟ ಮೇಲೆ ಎಷ್ಟೇ ಕಷ್ಟವಾಗಲಿ ಅದನ್ನು ಉಳಿಸಿಕೊಳ್ಳಬೇಕು ಎಂಬುದರ ಬಗ್ಗೆ ರಾಮಾಯಣವು ಒತ್ತು ಕೊಡುತ್ತದೆ.

ನಾರದ ಮುನಿಯು ಇಡೀ ರಾಮಾಯಣವನ್ನು ಸ್ವಲ್ಪದರಲ್ಲಿ ವಾಲ್ಮೀಕಿಗೆ ಹೇಳಿದ ಸಂಕ್ಷೇಪ ರಾಮಾಯಣವು ವಾಲ್ಮೀಕಿರಾಮಾಯಣದ ಮೊದಲ ಸರ್ಗವಾಗಿದೆ. ನಾರದನು ಆದರ್ಶಮನುಷ್ಯನ ೧೬ ಗುಣಗಳನ್ನು ಪಟ್ಟಿ ಮಾಡಿ ರಾಮನು ಈ ಎಲ್ಲ ೧೬ ಗುಣಗಳನ್ನು ಹೊಂದಿದ ಸಂಪೂರ್ಣ ಮಾನವ ಎಂದು ಹೇಳುತ್ತಾನೆ ರಾಮನೇ ಸ್ವತಃ ತಾನು ಮನುಷ್ಯಮಾತ್ರನೆಂದು ಹೇಳಿದರೂ, ಒಮ್ಮೆ ಕೂಡ ತಾನು ದೈವಾಂಶವುಳ್ಳವನೆಂದು ಹೇಳದಿದ್ದರೂ, ಹಿಂದುಗಳು ಅವನನ್ನು ಆದರ್ಶವ್ಯಕ್ತಿಯೆಂದೂ ವಿಷ್ಣು ದೇವರ ಪ್ರಮುಖ ಅವತಾರಗಳಲ್ಲೊಬ್ಬ ಎಂದೂ ಪರಿಗಣಿಸುತ್ತಾರೆ.

ವಾಲ್ಮೀಕಿಯು ಅವನನ್ನು ತನ್ನ ಕಥೆಯಲ್ಲಿ ಒಬ್ಬ ಅತಿಮಾನವ ಎಂದು ಚಿತ್ರಿಸದೆ, ಎಲ್ಲ ಗುಣದೋಷಗಳಿಂದ ಕೂಡಿ, ನೈತಿಕ ಸಂದಿಗ್ಧಗಳನ್ನೆದುರಿಸಿ ಅವುಗಳನ್ನು ಧರ್ಮ (ಸರಿಯಾದ ಮಾರ್ಗ)ವನ್ನು ಅನುಸರಿಸುವುದರಿಂದ ಗೆದ್ದ ಒಬ್ಬ ಸಹಜಮಾನವನನ್ನಾಗಿ ಚಿತ್ರಿಸಿದ್ದಾನೆ. ವಾಲ್ಮೀಕಿ ರಾಮಾಯಣದಲ್ಲಿ ಕಥಾನಾಯಕನ ಪರಿಶುದ್ಧ ಚಾರಿತ್ರ್ಯದ ಬಗ್ಗೆ ಸಂಶಯವನ್ನುಂಟುಮಾಡುವ ಅನೇಕ ಸಂದರ್ಭಗಳಿವೆ. ತನ್ನ ರಾಜ್ಯವನ್ನು ಮರಳಿ ಪಡೆಯಲು ಸುಗ್ರೀವನಿಗೆ ಸಹಾಯಮಾಡಲು ವಾಲಿಯನ್ನು ಮರದ ಮರೆಯಿಂದ ರಾಮನು ಕೊಲ್ಲುವದು ಯುದ್ಧದ ನಿಯಮಗಳಿಗೆ ವಿರೋಧವಾಗಿತ್ತು. ಸೀತೆಯು ರಾವಣನ ಸೆರೆಯಿಂದ ಬಿಡುಗಡೆ ಹೊಂದಿದಾಗ ಅಗ್ನಿಯನ್ನು ಪ್ರವೇಶಿಸಿ ತನ್ನ ಪರಿಶುದ್ಧತೆಯನ್ನು ಸಿದ್ಧ ಮಾಡುವಂತೆ ರಾಮನು ಅವಳನ್ನು ಬಲವಂತಪಡಿಸುತ್ತಾನೆ. ನಂತರ ಶೂದ್ರ ಶಂಬೂಕನನ್ನು ಸಮಾಜದ ಕೆಳವರ್ಗದಲ್ಲಿದ್ದು ಯೋಗಿಗಳಂತೆ ತಪಸ್ಸನ್ನು ಮಾಡಿದ್ದಕ್ಕಾಗಿ ರಾಮನು ಕೊಲ್ಲುವನು. ಇವು ಮತ್ತು ಉಳಿದ ಅನೇಕ ಇಂಥ ರಾಮಾಯಣದಲ್ಲಿನ ಪ್ರಸಂಗಗಳು ಕಥಾನಾಯಕನಾದ ರಾಮನ ಮನುಷ್ಯ ಸಹಜ ಗುಣವನ್ನೆತ್ತಿ ತೋರಿಸಿ ಕಥೆಯ ಮೂಲನೀತಿಯಾಗಿರುವ 'ಮನುಷ್ಯನು ಸತ್ಯಮಾರ್ಗವನ್ನು ಅನುಸರಿಸಲು ಅತಿಮಾನವನಿರುವದು ಅವಶ್ಯವಿಲ್ಲ' ಎಂಬುದನ್ನು ಸಮರ್ಥಿಸುತ್ತವೆ.

ಪಠ್ಯದ ಚರಿತ್ರೆ

ಸಾಂಪ್ರದಾಯಿಕ ನಂಬುಗೆಯಂತೆ ಈ ಕಾವ್ಯವು ಹಿಂದೂ ಕಾಲಗಣನೆಯ ನಾಲ್ಕು ಯುಗಗಳಲ್ಲೊಂದಾದ ತ್ರೇತಾಯುಗಕ್ಕೆ ಸೇರಿದ್ದು , ವಾಲ್ಮೀಕಿಯು ರಚಿಸಿದ್ದು . ವಾಲ್ಮೀಕಿಯೂ ಈ ಕಥೆಯಲ್ಲಿ ಸಕ್ರಿಯ ಪಾತ್ರವಹಿಸುತ್ತಾನೆ.

ರಾಮಾಯಣದ ಭಾಷೆ ಪಾಣಿನಿಯ ಕಾಲಕ್ಕಿಂತಲೂ ಹಳೆಯದಾದ ಸಂಸ್ಕೃತ. ಮಹಾಭಾರತ ಮತ್ತು ರಾಮಾಯಣಗಳೆರಡರಲ್ಲೂ ಸಂಸ್ಕೃತದ ಈ ಪ್ರಭೇದ ಕಂಡುಬರುತ್ತದೆ. ರಾಮಾಯಣದ ಮೂಲ ಕೃತಿಯ ರಚನೆ ಕ್ರಿ.ಪೂ. ಐದನೆ ಶತಮಾನದಲ್ಲಿ ಆದದ್ದಿರಬಹುದು. ಅನೇಕ ಶತಮಾನಗಳ ಕಾಲ ಬಾಯಿಂದ ಬಾಯಿಗೆ, ಹಾಗೂ ಲಿಖಿತ ರೂಪದಲ್ಲೂ ಒಬ್ಬರಿಂದ ಇನ್ನೊಬ್ಬರಿಗೆ ವರ್ಗಾವಣೆ ಹೊಂದುತ್ತಾ, ಮಧ್ಯೆಮಧ್ಯೆ ಅನೇಕ ಮಾರ್ಪಾಟುಗಳನ್ನು ಹೊಂದುತ್ತ ಇಂದಿನ ರೂಪವನ್ನು ಪಡೆದಿದೆ. ಹೀಗಾಗಿ ರಾಮಾಯಣದ ರಚನಾಕಾಲವನ್ನು ಕೇವಲ ಭಾಷಾ ವಿಶ್ಲೇಷಣೆಯಿಂದ ಕಂಡುಹಿಡಿಯಲಾಗದು. ದೀರ್ಘವಾದ ಪ್ರಕ್ರಿಯೆಯ ಮೂಲಕ ಇಂದಿನ ರೂಪವನ್ನು ರಾಮಾಯಣ ಪಡೆದಿದ್ದು, ಈ ಪ್ರಕ್ರಿಯೆ ಸುಮಾರು ಕ್ರಿ.ಪೂ. ಐದನೆ ಶತಮಾನದಲ್ಲಿ ಆರಂಭಗೊಂಡು ಕ್ರಿ.ಶ. ನಾಲ್ಕನೆಯ ಶತಮಾನದ ಹೊತ್ತಿಗೆ ಪೂರ್ಣವಾಯಿತು ಎಂದು ಪರಿಗಣಿಸಲಾಗಿದೆ.

ರಾಮಾಯಣದ ಕಥೆಯ ಕಾಲ ಇನ್ನೂ ಹಳೆಯದಿರಬಹುದು. ರಾಮಾಯಣದಲ್ಲಿ ಬರುವ ಪಾತ್ರಗಳ ಹೆಸರುಗಳು - ರಾಮ, ಸೀತೆ, ದಶರಥ, ಜನಕ, ವಸಿಷ್ಠ, ವಿಶ್ವಾಮಿತ್ರ - ಈ ಎಲ್ಲ ಹೆಸರುಗಳೂ ವಾಲ್ಮೀಕಿ ರಾಮಾಯಣಕ್ಕಿಂತ ಹಳೆಯದಾದ ವೇದಬ್ರಾಹ್ಮಣಗಳಲ್ಲಿ ಕಂಡುಬರುತ್ತವೆ. ಆದರೆ ವೇದಗಳಲ್ಲೆಲ್ಲೂ ವಾಲ್ಮೀಕಿಯ ರಾಮಾಯಣದ ಕಥೆಯನ್ನು ಹೋಲುವ ಯಾವ ಕಥೆಯೂ ಕಂಡುಬರುವುದಿಲ್ಲ. ರಾಮಾಯಣದಲ್ಲಿ ಮುಖ್ಯ ಪಾತ್ರ ವಹಿಸುವ ಬ್ರಹ್ಮ ಮತ್ತು ವಿಷ್ಣು ವೇದೋಕ್ತ ದೇವತೆಗಳಲ್ಲ. ಮಹಾಭಾರತ-ರಾಮಾಯಣಗಳ ಮತ್ತು ಪುರಾಣಗಳ ರಚನಾನಂತರವೇ ಈ ದೇವರುಗಳ ಜನಪ್ರಿಯತೆ ಹೆಚ್ಚಿರುವುದು ಕಂಡುಬರುತ್ತದೆ.

ಸಾಮಾನ್ಯವಾಗಿ, ರಾಮಾಯಣದ ಎರಡನೆ ಕಾಂಡದಿಂದ ಆರನೆ ಕಾಂಡದವರೆಗಿನ ಭಾಗಗಳು ಈ ಕಾವ್ಯದ ಅತಿ ಪ್ರಾಚೀನ ಭಾಗಗಳೆಂದು ಪರಿಗಣಿಸಲಾಗುತ್ತದೆ. ಮೊದಲ ಕಾಂಡವಾದ ಬಾಲಕಾಂಡ ಮತ್ತು ಕೊನೆಯದಾದ ಉತ್ತರಕಾಂಡ ನಂತರ ಸೇರಿಸಲ್ಪಟ್ಟ ಭಾಗಗಳೆಂದು ಪರಿಗಣಿತವಾಗಿವೆ. ಬಾಲಕಾಂಡ ಮತ್ತು ಅಯೋಧ್ಯಾಕಾಂಡದ ಕರ್ತೃ ಅಥವಾ ಕರ್ತೃಗಳು ಗಂಗಾ ಜಲಾನಯನ ಪ್ರದೇಶ ಹಾಗೂ ಪ್ರಾಚೀನ ಭಾರತದ "ಹದಿನಾರು ಜನಪದ"ಗಳ ಕಾಲದಲ್ಲಿನ ಮಗಧ ಹಾಗೂ ಕೋಸಲ ಪ್ರದೇಶಗಳ ನಿಕಟ ಪರಿಚಯ ಪಡೆದಿದ್ದರೆನ್ನುವುದು ಕಂಡುಬರುತ್ತದೆ. ಇದಕ್ಕೆ ಕಾರಣ ರಾಮಾಯಣದ ಈ ಭಾಗಗಳಲ್ಲಿನ ರಾಜಕೀಯ ಹಾಗೂ ಭೌಗೋಳಿಕ ವರ್ಣನೆಗಳು "ಹದಿನಾರು ಜನಪದ"ಗಳ ಕಾಲದ ಸ್ಥಿತಿಗತಿಗಳನ್ನು ಬಿಂಬಿಸುತ್ತವೆ.

ಆದರೆ ರಾಮಾಯಣದ ಅರಣ್ಯಕಾಂಡವನ್ನು ಗಮನಿಸಿದರೆ, ರಾಕ್ಷಸರು, ವಿಚಿತ್ರ ಪ್ರಾಣಿಗಳು, ಮೊದಲಾದವುಗಳನ್ನೊಳಗೊಂಡ ಕಲ್ಪನಾಲೋಕದತ್ತ ವರ್ಣನೆಗಳು ಸರಿಯುತ್ತವೆ. ಮಧ್ಯ ಹಾಗೂ ದಕ್ಷಿಣ ಭಾರತದ ಭೌಗೋಳಿಕ ವರ್ಣನೆಗಳು ವಾಸ್ತವದಿಂದ ಸಾಕಷ್ಟು ದೂರವಿರುವುದು ಕಂಡುಬರುತ್ತದೆ. ಶ್ರೀಲಂಕಾ ದ್ವೀಪದ ಸರಿಯಾದ ಸ್ಥಳದ ಬಗ್ಗೆ ವಿವರಗಳು ಅಸ್ಪಷ್ಟವಾಗಿರುವುದು ಸಹ ಕಂಡುಬರುತ್ತದೆ. ಈ ಅಂಶಗಳ ಆಧಾರದ ಮೇಲೆ, ಚರಿತ್ರಜ್ಞ ಎಚ್.ಡಿ.ಸಂಕಾಲಿಯಾ ಅವರು ರಾಮಾಯಣದ ಕಾಲ ಸುಮಾರು ಕ್ರಿ.ಪೂ. ನಾಲ್ಕನೆಯ ಶತಮಾನ ಇದ್ದಿರಬಹುದೆಂದು ಪ್ರತಿಪಾದಿಸಿದ್ದಾರೆ. ಆದರೆ ಇನ್ನೊಬ್ಬ ಚರಿತ್ರಕಾರರಾದ ಎ.ಎಲ್.ಬಾಷಮ್ ಅವರು ರಾಮನು ಕ್ರಿ.ಪೂ. ೭ ನೆಯ ಅಥವಾ ೮ ನೆಯ ಶತಮಾನದಲ್ಲಿ ಇದ್ದಿರಬಹುದಾದ ಸಣ್ಣ ರಾಜ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಕೆಲವರು ರಾಮಾಯಣದ ಕಥೆಯ ಕಾಲ ಕ್ರಿ.ಪೂ. ೬೦೦೦ ದಷ್ಟು ಹಳೆಯದಿರಬಹುದೆಂದು ಪ್ರತಿಪಾದಿಸಿದ್ದಾರೆ.

ವಿಭಿನ್ನ ರೂಪಾಂತರಗಳು

ಅನೇಕ ಜಾನಪದ ಕಥೆಗಳಂತೆ, ರಾಮಾಯಣದ ಕಥೆಯ ವಿವಿಧ ರೂಪಾಂತರಗಳು ಅಸ್ತಿತ್ವದಲ್ಲಿವೆ. ಮುಖ್ಯವಾಗಿ, ಉತ್ತರ ಭಾರತದಲ್ಲಿ ಪ್ರಚಲಿತವಾಗಿರುವ ರಾಮಾಯಣದ ಕಥೆ ದಕ್ಷಿಣ ಭಾರತ ಮತ್ತು ದಕ್ಷಿಣಪೂರ್ವ ಏಷ್ಯಾದಲ್ಲಿ ಪ್ರಚಲಿತವಾಗಿರುವ ರೂಪಾಂತರಕ್ಕಿಂತ ಕೆಲವು ಅಂಶಗಳಲ್ಲಿ ಭಿನ್ನವಾಗಿದೆ. ರಾಮಾಯಣದ ಕಥಾಸಂಪ್ರದಾಯ ಥೈಲೆಂಡ್, ಕಾಂಬೋಡಿಯ, ಮಲೇಷಿಯ, ಲಾಓಸ್, ವಿಯೆಟ್ನಾಮ್ ಮತ್ತು ಇಂಡೊನೇಷ್ಯಾ ದೇಶಗಳಲ್ಲೂ ಪ್ರಚಲಿತವಾಗಿದೆ.

ಮಲೇಷಿಯಾದ ಕೆಲವು ರೂಪಾಂತರಗಳಲ್ಲಿ ಲಕ್ಷ್ಮಣನಿಗೆ ರಾಮನ ಪಾತ್ರಕ್ಕಿಂತ ಹೆಚ್ಚು ಪ್ರಾಮುಖ್ಯತೆ ಕೊಟ್ಟಿದ್ದು, ರಾಮನ ಪಾತ್ರವನ್ನು ದುರ್ಬಲ ಎಂದು ಪರಿಗಣಿಸಲಾಗುತ್ತದೆ.

ಭಾರತೀಯ ರೂಪಾಂತರಗಳು

ಭಾರತದಲ್ಲಿ ವಿವಿಧ ಕಾಲಗಳಲ್ಲಿ ಅನೇಕ ಬರಹಗಾರರು ಬರೆದ ರಾಮಾಯಣದ ರೂಪಾಂತರಗಳಿವೆ. ಈ ವಿವಿಧ ರೂಪಾಂತರಗಳು ಒಂದರಿಂದ ಇನ್ನೊಂದು ಸಾಕಷ್ಟು ಭಿನ್ನವಾಗಿಯೂ ಇವೆ. ೧೪-೧೫ ನೆಯ ಶತಮಾನಗಳಲ್ಲಿ, ಕುಮಾರ ವಾಲ್ಮೀಕಿ ಕನ್ನಡಲ್ಲಿ ತೊರವೆ ರಾಮಾಯಣ ಎಂಬ ರೂಪಾಂತರದ ಕರ್ತೃ. ಕನ್ನಡದ ಇತರ ಮುಖ್ಯ ರಾಮಾಯಣಗಳೆಂದರೆ ರಾಷ್ಟ್ರಕವಿ ಕುವೆಂಪು ಅವರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕೃತಿ "ಶ್ರೀ ರಾಮಾಯಣ ದರ್ಶನಂ" ಮತ್ತು ರಂಗನಾಥ ಶರ್ಮಾ ಅವರ "ಕನ್ನಡ ವಾಲ್ಮೀಕಿ ರಾಮಾಯಣ."

೧೨ ನೆಯ ಶತಮಾನದಲ್ಲಿ ತಮಿಳು ಕವಿ ಕಂಬ "ರಾಮಾವತಾರಮ್" ಅಥವಾ ಕಂಬರಾಮಾಯಣ ರಚಿಸಿದ. ಹಿಂದಿ ಭಾಷೆಯ ಪ್ರಸಿದ್ಧ ರಾಮಾಯಣ ೧೫೭೬ ರಲ್ಲಿ ತುಲಸೀದಾಸರು ರಚಿಸಿದ ಶ್ರೀ ರಾಮಚರಿತ ಮಾನಸ. ಇದಲ್ಲದೆ ಗುಜರಾತಿ ಕವಿ ಪ್ರೇಮಾನಂದರು ೧೭ ನೆಯ ಶತಮಾನದಲ್ಲಿ, ಬಂಗಾಲಿ ಕವಿ ಕೃತ್ತಿವಾಸರು ೧೪ ನೆಯ ಶತಮಾನದಲ್ಲಿ, ಒರಿಯಾ ಕವಿ ಬಲರಾಮದಾಸರು ೧೬ ನೆಯ ಶತಮಾನದಲ್ಲಿ, ಮರಾಠಿ ಕವಿ ಶ್ರೀಧರ ೧೮ ನೆಯ ಶತಮಾನದಲ್ಲಿ, ತೆಲುಗು ಕವಿ ರಂಗನಾಥರು ೧೫ ನೆಯ ಶತಮಾನದಲ್ಲಿ ರಾಮಾಯಣದ ಆವೃತ್ತಿಗಳನ್ನು ರಚಿಸಿದ್ದಾರೆ.

ರಾಮಾಯಣದ ಉಪ-ರೂಪಾಂತರಗಳಲ್ಲಿ ಒಂದು ರಾವಣನ ಕೇಡಿಗ ತಮ್ಮಂದಿರಾದ ಅಹಿ ರಾವಣ ಮತ್ತು ಮಹಿ ರಾವಣರನ್ನು ಕುರಿತದ್ದು. ಈ ಕಥೆಯಂತೆ ಅಹಿ-ಮಹಿ ರಾವಣರು ರಾಮ ಮತ್ತು ಲಕ್ಷ್ಮಣರನ್ನು ಕಾಳಿಗೆ ಬಲಿ ಕೊಡಲು ಹೊತ್ತೊಯ್ಯುತ್ತಾರೆ. ಈ ಕಥೆಯಲ್ಲಿ ಹನುಮಂತನ ಪಾತ್ರ ಬಹಳ ಮುಖ್ಯವಾಗಿದ್ದು ಅವನೇ ರಾಮ-ಲಕ್ಷ್ಮಣರನ್ನು ಕಾಪಾಡುತ್ತಾನೆ.

ಕೇರಳದ ಮಾಪಿಳ್ಳೆಗಳಲ್ಲಿ ಪ್ರಚಲಿತವಾಗಿರುವ ರಾಮಾಯಣದ ಒಂದು ರೂಪಾಂತರದ ಬಗ್ಗೆಯೂ ವರದಿಗಳಿವೆ.

"ಮಾಪಿಳ್ಳೆ ರಾಮಾಯಣ" ಎಂದು ಕರೆಯಲ್ಪಡುವ ಈ ರೂಪಾಂತರ ಮಾಪಿಳ್ಳೆಗಳ ಜಾನಪದ ಹಾಡುಗಳ ಗುಂಪಿನಲ್ಲಿ ಸೇರಿದೆ. ಮುಸಲ್ಮಾನ ಸಂಪ್ರದಾಯದಲ್ಲಿ ಸೇರಿರುವ ಈ ರೂಪಾಂತರದಲ್ಲಿ ರಾಮಾಯಣದ ನಾಯಕ ಒಬ್ಬ ಮುಸ್ಲಿಮ್ ಸುಲ್ತಾನ. ರಾಮನ ಹೆಸರನ್ನು "ಲಾಮನ್" ಎಂದು ಬದಲಾಯಿಸಿರುವುದನ್ನು ಬಿಟ್ಟರೆ ಬೇರೆಲ್ಲ ಪಾತ್ರಗಳೂ ರಾಮಾಯಣದಲ್ಲಿ ಇರುವಂತೆಯೇ ಇವೆ. ಮುಸ್ಲಿಮ್ ಸಾಮಾಜಿಕ ರೀತಿನೀತಿಗಳಿಗೆ ಹೊಂದಿಕೊಳ್ಳುವಂತೆ ಕಥೆಯಲ್ಲಿ ಕೆಲವು ಮಾರ್ಪಾಟುಗಳನ್ನು ಮಾಡಲಾಗಿದೆ.

ದಕ್ಷಿಣಪೂರ್ವ ಏಷ್ಯಾದ ರೂಪಾಂತರಗಳು

ಏಷ್ಯಾದ ಇನ್ನೂ ಅನೇಕ ಸಂಸ್ಕೃತಿಗಳು ರಾಮಾಯಣವನ್ನು ಆಮದು ಪಡೆದಿದ್ದು, ಕೆಲವು ದೇಶಗಳ ರಾಷ್ಟ್ರೀಯ ಮಹಾಕಾವ್ಯಗಳು ರಾಮಾಯಣದಿಂದಲೇ ಸ್ಫೂರ್ತಿ ಪಡೆದಿವೆ. ಚೀನಾ ದೇಶದ ಮಹಾಕಾವ್ಯ "ಪಶ್ಚಿಮದತ್ತ ಪಯಣ" ದ ಕೆಲವು ಭಾಗಗಳು ರಾಮಾಯಣವನ್ನು ಆಧರಿಸಿದವು. ಪ್ರಮುಖವಾಗಿ ಈ ಕಾವ್ಯದ "ಸುನ್ ವುಕಾಂಗ್" ಪಾತ್ರ ಹನುಮಂತನನ್ನು ಆಧರಿಸಿದ ಪಾತ್ರ ಎಂದು ನಂಬಲಾಗಿದೆ. ಇಂಡೊನೇಷ್ಯಾದ ಜಾವಾ ಪ್ರದೇಶದಲ್ಲಿ ಒಂಬತ್ತನೆ ಶತಮಾನದ ಸುಮಾರಿನಲ್ಲಿ ರಾಮಾಯಣದ ಒಂದು ರೂಪಾಂತರವಾದ "ಕಾಕಾವಿನ್ ರಾಮಾಯಣ" ಜನ್ಮತಾಳಿತು. ಇದು ಸಂಸ್ಕೃತ ರಾಮಾಯಣವನ್ನು ಹೆಚ್ಚು ಬದಲಿಸದೆ ಮಾಡಿದ ಭಾಷಾಂತರವಾಗಿದೆ. ಲಾಓಸ್ ದೇಶದ ಕಾವ್ಯ "ಫ್ರಾ ಲಕ್ ಫ್ರಾ ಲಾಮ್" ರಾಮಾಯಣದ ರೂಪಾಂತರ; ಇದರ ಹೆಸರಿನಲ್ಲಿರುವ "ಲಕ್" ಮತ್ತು "ಲಾಮ್" ಲಕ್ಷ್ಮಣ ಮತ್ತು ರಾಮರ ಹೆಸರಿನ ಲಾಓ ರೂಪಾಂತರಗಳು. ಇದರಲ್ಲಿ ರಾಮನ ಜೀವನವನ್ನು ಬುದ್ಧನ ಹಿಂದಿನ ಅವತಾರಗಳಲ್ಲಿ ಒಂದೆಂದು ಚಿತ್ರಿಸಲಾಗಿದೆ. ಮಲೇಷ್ಯಾದ "ಹಿಕಾಯತ್ ಸೆರಿ ರಾಮ" ಕಾವ್ಯದಲ್ಲಿ ದಶರಥ ಪ್ರವಾದಿ ಆದಮನ ಮೊಮ್ಮಗ ಎಂದು ಚಿತ್ರಿಸಲಾಗಿದೆಯಲ್ಲದೆ, ರಾವಣ ಬ್ರಹ್ಮನಿಂದ ವರ ಪಡೆಯುವುದರ ಬದಲು ಅಲ್ಲಾನಿಂದ ವರ ಪಡೆಯುತ್ತಾನೆ.

ಥೈಲೆಂಡಿನ ಕಾವ್ಯವಾದ "ರಾಮಕಿಯೆನ್" ಸಹ ರಾಮಾಯಣವನ್ನು ಆಧರಿಸಿದೆ. ಇದರಲ್ಲಿ ಸೀತೆಯನ್ನು ರಾವಣ ಮತ್ತು ಮಂಡೋದರಿಯರ ಮಗಳೆಂದು ಚಿತ್ರಿಸಲಾಗಿದೆ. ಜ್ಯೋತಿಷಿಯಾದ ವಿಭೀಷಣನು ಸೀತೆಯ ಜಾತಕವನ್ನು ನೋಡಿ ಅಪಶಕುನವನ್ನು ಮುನ್ನುಡಿಯುತ್ತಾನೆ. ಹಾಗಾಗಿ ರಾವಣ ಅವಳನ್ನು ನೀರಿಗೆ ಎಸೆಯಿಸುತ್ತಾನೆ, ಮತ್ತು ನಂತರ ಜನಕ ಸೀತೆಯನ್ನು ಪಡೆಯುತ್ತಾನೆ. ಮುಖ್ಯ ಕಥೆ ರಾಮಾಯಣದ ಕಥೆಯಂತಿದ್ದರೂ ಸಾಮಾಜಿಕ ಸಂಪ್ರದಾಯಗಳನ್ನು ಥಾಯಿ ಸಮಾಜದ ಸಂಪ್ರದಾಯಗಳಿಗೆ ಅಳವಡಿಸಿಕೊಳ್ಳಲಾಗಿದೆ. ಇದರಲ್ಲಿ ಹನುಮಂತನ ಪಾತ್ರ ಬಹಳ ಮುಖ್ಯವಾಗಿದೆ. ಈ ಕಾವ್ಯದ ವರ್ಣಚಿತ್ರಗಳು ಬ್ಯಾ೦ಗ್‍ಕಾಕ್ ನಲ್ಲಿರುವ "ವಾತ್ ಫ್ರಾ ಕಯೆವ್" ದೇವಸ್ಥಾನದಲ್ಲಿ ಕಂಡುಬರುತ್ತವೆ.

ಇತರ ದಕ್ಷಿಣಪೂರ್ವ ಏಷ್ಯಾದ ರೂಪಾಂತರಗಳಲ್ಲಿ ಬಾಲಿಯ "ರಾಮಕವಚ", ಫಿಲಿಪ್ಪೀನ್ಸ್ ನ "ಮರಡಿಯ ಲಾವಣ", ಕಾಂಬೋಡಿಯದ "ರೀಮ್‍ಕರ್" ಮತ್ತು ಮ್ಯಾನ್‍ಮಾರ್ ನ "ಯಾಮ ಜಾತ್‍ದವ್" ಗಳನ್ನು ಹೆಸರಿಸಬಹುದು.

ವರ್ತಮಾನದಲ್ಲಿ ರಾಮಾಯಣ

ಕನ್ನಡದ ರಾಷ್ಟ್ರಕವಿಯಾಗಿದ್ದ ಕುವೆಂಪು ರಾಮಾಯಣವನ್ನು ಆಧಾರವಾಗಿಟ್ಟುಕೊಂಡು ರಾಮಾಯಣ ದರ್ಶನಂ ಎಂಬ ಕೃತಿಯನ್ನು ರಚಿಸಿದ್ದಾರೆ. ತೆಲುಗು ಕವಿಯಾದ ವಿಶ್ವನಾಥ ಸತ್ಯನಾರಾಯಣ ಎಂಬುವವರು ರಾಮಾಯಣ ಕಲ್ಪವೃಕ್ಷಮು ಎಂಬ ಕೃತಿಯನ್ನು ರಚಿಸಿದ್ದಾರೆ. ಈ ಇಬ್ಬರು ಕವಿಗಳಿಗೂ ಜ್ಞಾನಪೀಠ ಪ್ರಶಸ್ತಿ ಲಭಿಸಿತ್ತು. ಅಶೋಕ್ ಬ್ಯಾಂಕರ್ ಎಂಬ ಆಂಗ್ಲ ಲೇಖಕರು ರಾಮಾಯಣವನ್ನು ಆಧರಿಸಿ ಆರು ಸರಣಿ ಕಾದಂಬರಿಗಳನ್ನು ಹೊರತಂದಿದ್ದಾರೆ.

ಕಂಚೀಪುರಂನ ಗೇಟಿ ರೈಲ್ವೇ ಥಿಯೇಟರ್ ಕಂಪನಿಯು ದ್ರವಿಡರ ಸ್ವಾಭಿಮಾನವನ್ನು ಪುನರ್ಸ್ಥಾಪಿಸುವ ಉದ್ದೇಶದಿಂದ ಈ ಕಾವ್ಯದ ಪರಿಷ್ಕೃತ ದೃಷ್ಟಿಕೋನವನ್ನು ಪ್ರಸ್ತುತಪಡಿಸುತ್ತದೆ. ರಾವಣನನ್ನು ವಿದ್ವಾಂಸನೆಂದೂ, ರಾಜನೀತಿಜ್ಞನೆಂದೂ, ಸೀತೆ ಅವನಿಗೆ ಮರುಳಾದಳೆಂದೂ , ರಾಮನು ನೀತಿನಿಯಮ, ನಯನಾಜೂಕುಗಳಿಲ್ಲದ ಲಂಪಟ ರಾಜಕುಮಾರನೆಂದೂ, ಕುಡಿದು ಉನ್ಮತ್ತಸ್ಥಿತಿಯಲ್ಲಿ ಭಾರೀ ಮಾರಣಹೋಮಕ್ಕೆ ಆಜ್ನೆ ನೀಡಿದನೆಂದೂ ಚಿತ್ರಿಸುವ ರಾಮಾಯಣದ ಈ ಆವೃತ್ತಿಗಳು ಸಾಂಪ್ರದಾಯಿಕ ಪ್ರಸ್ತುತಿಗಳಿಂದ ಬಹಳಷ್ಟು ದೂರ ಇವೆ. ಈ ರೀತಿಯ ಪಾತ್ರಚಿತ್ರಣಗಳು ತನ್ನ ಸಂಸ್ಕೃತಿ ಮತ್ತು ಸ್ವಾತಂತ್ರ್ಯವನ್ನು ಪುನರ್ ಸ್ಥಾಪಿಸುವ ದ್ರಾವಿಡ ಚಳುವಳಿಯ ಹೆಚ್ಚುತ್ತಿರುವ ಗುಪ್ತಪ್ರಯತ್ನದ ಅಂಗಗಳಾಗಿವೆ.

ಕೃಪೆ. web.archive.org

ಪಂಚತಂತ್ರ

"ಪಂಚತಂತ್ರ ಕಥೆಗಳ ಮೂಲ ಭಾರತ".ಕವಿತೆ ಹಾಗೂ ಗದ್ಯದಲ್ಲಿ ಮೂಲತಃ ಭಾರತೀಯ ಪ್ರಾಣಿಗಳ ಕಥೆಗಳ ಮೇಲೆ ಆಧಾರಿತ ಒಂದು ಸಂಗ್ರಹವೇ, ಪಂಚತಂತ್ರ( ಸಂಸ್ಕೃತ:पञ्चतन्त्र' )ಐದು ಮೂಲತತ್ವಗಳು'ಕ್ರಿಸ್ತ ಪೂರ್ವ 3ನೇ ಶತಮಾನದಲ್ಲಿ [೧] ರಚಿಸಲ್ಪಟ್ಟಿದೆಯೆಂದು ಕೆಲವು ವಿದ್ವಾಂಸರು ನಂಬುವ, ಮೂಲ ಸಂಸ್ಕೃತ ಗ್ರಂಥ, ವಿಷ್ಣು ಶರ್ಮರಿಗೆ ಆ ಕೀರ್ತಿಯು ಸಲ್ಲುತ್ತದೆ. ಆದಾಗ್ಯೂ, "ನಾವು ಊಹಿಸಲೂ ಸಾಧ್ಯವಾದಷ್ಟು ಹಳೆಯದಾದ ಪ್ರಾಣಿಗಳ ಸಣ್ಣ ನೀತಿಯ ಕಥೆಗಳನ್ನು" ಒಳಗೊಂಡಿರುವ, ಪುರಾತನ ಮೌಖಿಕ ಪರಂಪರೆಗಳ ಮೇಲೆ ಅದು ಆಧರಿಸಲ್ಪಟ್ಟಿದೆ.[೨] ಅದು "ಖಂಡಿತವಾಗಿಯೂ ಭಾರತದ ಅತ್ಯಂತ ಹೆಚ್ಚು ಬಾರಿ ಮತ್ತೆ ಮತ್ತೆ ಭಾಷಾಂತರಿಸಲ್ಪಟ್ಟಿರುವ ಸಾಹಿತ್ಯಿಕ ಉತ್ಪನ್ನ" [೩] ಹಾಗೂ ಹೇಳಬೇಕೆಂದರೆ ಇವುಗಳು ವಿಶ್ವದಲ್ಲೇ ಅತ್ಯಂತ ಹೆಚ್ಚು ವಿಶಾಲವಾಗಿ ತಿಳಿದಿರುವ ಕಥೆಯ ಸಂಗ್ರಹಗಳಲ್ಲೊಂದು.

ಅದು ಹೀಗೆ ಅನೇಕ ಸಂಸ್ಕೃತಿಗಳಲ್ಲಿ ಹಲವಾರು ಹೆಸರುಗಳನ್ನು ಹೊಂದಿದೆ. ಭಾರತದಲ್ಲಿಯೇ, ಸಂಸ್ಕೃತದ ತಂತ್ರಖ್ಯಾಯಿಕ [೬] ಸಂಸ್ಕೃತ:{{{1}}}ವನ್ನು ಒಳಗೊಂಡಂತೆ, ಅದು ಕಡೇಪಕ್ಷ 25 ಪರಿಷ್ಕೃತ ಗ್ರಂಥಗಳನ್ನು ಹೊಂದಿದೆ ಹಾಗೂ ಹಿತೋಪದೇಶಕ್ಕೆ ಸ್ಪೂರ್ತಿಯಾಯಿತು. ಅದು ಕ್ರಿಸ್ತ ಶಕ 570 ರಲ್ಲಿ ಬೋರ್ಜುಯಾ ರಿಂದ ಪಹಲ್ವಿ ಗೆ ಬಾಷಾಂತರಿಸಲ್ಪಟ್ಟಿತು. ಇದು ಸಿರಿಯಾಕ್ ಭಾಷೆಯ ಅನುವಾದಕ್ಕೆ ಕಲಿಲಾಗ್ ಮತ್ತು ದಮ್ನಾಗ್ [೭] ಎಂದು ಮೂಲವಾಯಿತು ಹಾಗೂ ಕ್ರಿಸ್ತ ಶಕ 750 ರಲ್ಲಿ ಪರ್ಷಿಯಾದ ವಿದ್ವಾಂಸ ಅಬ್ದುಲ್ಲಾ ಇಬ್ನ್ ಅಲ್-ಮುಕ್ವಫಾ ರಿಂದ ಕಲಿಲಾಹ್ ವ ದಿಮ್ನಾಹ್ [೮]ಅರೇಬಿಕ್: {{{1}}}ಎಂದು ಅರಬ್ಬೀ ಭಾಷೆಗೆ ತರ್ಜುಮೆಗೊಂಡಿತು. ಒಂದು ಪರ್ಷಿಯನ್ ಆವೃತ್ತಿಯು 12 ನೇ ಶತಮಾನದಿಂದ ಕಲಿಲ ಮತ್ತು ದಿಮ್ನ [೯] ಎಂದು ಹೆಸರಾಗಿದೆಪರ್ಷಿಯನ್:{{{1}}}. ಕಲಿಲೆಹ್ ಒ ದೆನ್ಮೆಹ್ ಅಥವಾ ಅನ್ವರ್-ಇ ಸೊಹೆಯ್ಲಿ [೧೦]ಪರ್ಷಿಯನ್:ಎಂಬ ಇತರ ಹೆಸರುಗಳೂ ಸೇರಿವೆ, ('ದಿ ಲೈಟ್ಸ್ ಆಫ್ ಕ್ಯನೊಪಸ್') ಅಥವಾ ದಿ ಫೇಬಲ್ಸ್ ಆಫ್ ಬಿದ್ಪಯ್ [೧೧][೧೨](ಅಥವಾ ವಿವಿಧ ಯುರೋಪಿಯನ್ ಭಾಷೆಗಳಲ್ಲಿ ಪಿಲ್ಪಯ್) ಅಥವಾ ದಿ ಮಾರಲ್ ಫಿಲಾಸೊಫಿ ಆಫ್ ದೊನಿ (ಇಂಗ್ಲೀಷ್ 1570).

ಪಂಚತಂತ್ರವು ಬಣ್ಣಬಣ್ಣದ ಸಣ್ಣ ನೀತಿ ಕಥೆಗಳ ಒಂದು ಅನ್ಯೊನ್ಯವಾಗಿ ಹೆಣೆಯಲ್ಪಟ್ಟ ಸರಣಿಯಾಗಿದೆ, ಅವುಗಳಲ್ಲಿ ಅನೇಕ ಕಥೆಗಳು ಪ್ರಾಣಿಗಳು ಪ್ರದರ್ಶಿಸುತ್ತಿರುವ ಒಂದೇ ಪಡಿಯಚ್ಚಿನ ಪ್ರಾಣಿಗಳನ್ನು ಒಳಗೊಂಡಿವೆ.[೧೩] ಅದರದ್ದೇ ಮೂಲ ವೃತ್ತಾಂತದ ಪ್ರಕಾರ, ಮೂರು ಮುಗ್ಧ ರಾಜಕುಮಾರರ ಪ್ರಯೋಜನಕ್ಕಾಗಿ, ನೀತಿಯ ಕೇಂದ್ರ ಹಿಂದೂ ಮೂಲ ತತ್ವವನ್ನು ಅದು ವಿವರಿಸುತ್ತದೆ.[೧೪] ಯಾವಾಗಲೂ ನೀತಿ ಯನ್ನು ಅನುವಾದಿಸಲು ಕಠಿಣವಾದರೆ, ಅದು ಹೆಚ್ಚು ಕಡಿಮೆ ದೂರದೃಷ್ಟಿಯ ಪ್ರಾಪಂಚಿಕ ನಡವಳಿಕೆ, ಅಥವಾ "ಜೀವನದ ಪರಿಜ್ಞಾನದ ವರ್ತನೆ" ಎಂದಾಗುತ್ತದೆ.

ಒಂದು ಚಿಕ್ಕ ಪರಿಚಯವೂ ಅಲ್ಲದೆ ಜೊತೆಗೆ, ರಾಜಕುಮಾರರಿಗೆ ಗ್ರಂಥದ ಉಳಿದ ಕಥನಗಳನ್ನು ವಿವರಿಸಿ ತಿಳಿಸುತ್ತಿರುವಂತೆ, ಲೇಖಕರಾದ, ವಿಷ್ಣು ಶರ್ಮರನ್ನು ಪರಿಚಯಿಸಲಾಗಿದೆ - ಅದು ಐದು ಭಾಗಗಳನ್ನು ಒಳಗೊಂಡಿದೆ. ಪ್ರತಿ ಭಾಗವು ಕಥೆಯ ಚೌಕಟ್ಟೆಂದು ಕರೆಯಲ್ಪಡುವ, ಮುಖ್ಯ ಕಥೆಯನ್ನು ಹೊಂದಿದೆ, ಒಂದು ಪಾತ್ರವು ಮತ್ತೊಂದಕ್ಕೆ ಕಥನವನ್ನು ತಿಳಿಸುತ್ತಿರುವಂತೆ, ಅದರಲ್ಲಿ ಮುಂದುವರಿಯುವ ಬೇರೆ ಅನೇಕ ಕಥೆಗಳನ್ನು ಕ್ರಮೇಣವಾಗಿ ಹೊಂದಿದೆ. ಸಾಮಾನ್ಯವಾಗಿ ಈ ಕಥನಗಳು ಮುಂದುವರಿದು ಒಳಗೊಂಡಂತಹ ಕಥೆಗಳನ್ನು ಹೊಂದಿವೆ. ಈ ರೀತಿಯಾಗಿ ವೃತ್ತಾಂತಗಳು, ಕೆಲವು ವೇಳೆ ಆಳವಾದ ಮೂರು ಅಥವಾ ನಾಲ್ಕು ಕಥನಗಳು, ಒಂದು ವೃತ್ತಾಂತವು ಮತ್ತೊಂದರಲ್ಲಿ ಪ್ರಾರಂಭವಾಗುತ್ತಾ, ಅನುಕ್ರಮವಾದ ರಷಿಯಾದ ಗೊಂಬೆಗಳಂತೆ ಕಾರ್ಯನಿರ್ವಹಿಸುತ್ತವೆ. ಈ ಕಥೆಗಳೂ ಅಲ್ಲದೆ, ತಮ್ಮ ಉದ್ದೇಶವನ್ನು ಮನದಟ್ಟು ಮಾಡಿಸಲು ಪಾತ್ರಗಳೂ ಸಹ ವಿವಿಧ ಸಂಕ್ಷೇಪೋಕ್ತಿಯ ಪದ್ಯಗಳನ್ನು ಉದ್ಧರಿಸುತ್ತವೆ. 

ಆ ಐದು ಪುಸ್ತಕಗಳನ್ನು ಈ ರೀತಿ ಕರೆಯಲಾಗಿದೆ:

ಮಿತ್ರ-ಭೇದ : ಮಿತ್ರರ ಅಗಲಿಕೆ (ಸಿಂಹ ಹಾಗೂ ಕೋಣ)

ಮಿತ್ರ-ಲಾಭ ಅಥವಾ ಮಿತ್ರ-ಸಂಪ್ರಾಪ್ತಿ : ಮಿತ್ರರನ್ನು ಸಂಪಾದಿಸುವುದು (ಪಾರಿವಾಳ, ಕಾಗೆ, ಇಲಿ, ಆಮೆ ಮತ್ತು ಜಿಂಕೆ)

ಕಾಕೊಲುಕೀಯಮ್ : ಕಾಗೆಗಳ ಹಾಗೂ ಗೂಬೆಗಳ (ಯುದ್ಧ ಹಾಗೂ ಶಾಂತಿ)

ಲಬ್ಧಪ್ರಣಾಶನಮ್ : ಲಾಭದ ನಷ್ಟ (ಕೋತಿ ಮತ್ತು ಮೊಸಳೆ)

ಅಪರೀಕ್ಷಿತಕಾರಕಮ್ : ಸರಿಯಾಗಿ-ಆಲೋಚಿಸದ ಕೆಲಸ / ದುಡುಕಿನ ಕೃತ್ಯಗಳು (ಬ್ರಾಹ್ಮಣ ಹಾಗೂ ಮುಂಗಸಿ)

ಭಾರತೀಯ ಆವೃತ್ತಿ

೧. ಮಿತ್ರ-ಭೇದ:-ಮಿತ್ರರ ಅಗಲಿಕೆ. ಮೊದಲನೆಯ ಪುಸ್ತಕದಲ್ಲಿ, ಕಾಡಿನ ರಾಜನಾದ- ಸಿಂಹ (ಪಿಂಗಳಕ) ಹಾಗೂ ಒಂದು ಎತ್ತು (ಸಂಜೀವಕ)ಗಳ ಮಧ್ಯೆ ಗೆಳೆತನವು ಬೆಳೆಯುತ್ತದೆ. ಸಿಂಹ ರಾಜನನ್ನು ಹಿಂಬಾಲಿಸಿಕೊಂಡಿರುವಂತಹ ಎರಡು ನರಿಗಳು ಕರಟಕ ('ಭಯಂಕರವಾಗಿ ಕೂಗುವ') ಮತ್ತು ದಮನಕ ('ವಿಜೇತ')ರು. ದಮನಕನು ಹೊಟ್ಟೆಕಿಚ್ಚಿನಿಂದ, ಕರಟಕನ ಬುದ್ಧಿವಾದದ ವಿರುದ್ಧವಾಗಿ, ಸಿಂಹ ಹಾಗೂ ಎತ್ತುಗಳ ಮಧ್ಯದ ಗೆಳೆತನವನ್ನು ಮುರಿಯುತ್ತದೆ. ಅದು ಸುಮಾರು ಮೂವತ್ತು ಕಥೆಗಳನ್ನು ಹೊಂದಿದ್ದು, ಸಾಮಾನ್ಯವಾಗಿ ಎಲ್ಲವೂ ಎರಡು ನರಿಗಳಿಂದ ಹೇಳಲ್ಪಟ್ಟಿವೆ ಮತ್ತು ಗ್ರಂಥದ ಗಾತ್ರದ ಹೆಚ್ಚು ಕಡಿಮೆ ಶೇಕಡಾ 45 ರಷ್ಟು ಭಾಗವನ್ನು ಹೊಂದಿದ್ದು, ಐದು ಪುಸ್ತಕಗಳಲ್ಲಿ ಅತ್ಯಂತ ದೊಡ್ಡದಾಗಿದೆ.

೨."ಮಿತ್ರ-ಸಂಪ್ರಾಪ್ತಿ":- ಮಿತ್ರರ ಸಂಪಾದನೆ. ಕಪೋತ (ಅಥವಾ ಪಾರಿವಾಳ) ಮತ್ತು ಅದರ ಸ್ನೇಹಿತರನ್ನು ಮುಕ್ತಗೊಳಿಸಲು ಇಲಿಯು ಮಾಡಿದ ಉಪಕಾರವನ್ನು ನೋಡಿದ ಮೇಲೆ, ಅದರ ಮೂಲ ಆಕ್ಷೇಪಣೆಗಳಿದ್ದಾಗ್ಯೂ ಇಲಿಯ ಸ್ನೇಹ ಬೆಳೆಸಲು ನಿರ್ಧರಿಸಿದ ಕಾಗೆಯ ಕಥೆಯನ್ನು ಇದು ತಿಳಿಸುತ್ತದೆ. ಆಮೆ ಹಾಗೂ ಜಿಂಕೆಯ ಮರಿಯನ್ನು ಸೇರಿಸಿಕೊಳ್ಳಲು ಈ ಸ್ನೇಹತನವು ಬೆಳೆಯುತ್ತಾ ಹೋದಂತೆ ಕಥಾವಸ್ತುವು ವಿಸ್ತರಿಸುತ್ತದೆ. ಅವುಗಳು ಅದು ಬಲೆಗೆ ಬಿದ್ದಾಗ ಜಿಂಕೆಯ ಮರಿಯನ್ನು ಉಳಿಸಲು ಎಲ್ಲರೂ ಸೇರಿ ಕೆಲಸ ಮಾಡುತ್ತವೆ ಹಾಗೂ ನಂತರ ತನಗೆ ತಾನೇ ಬಲೆಯಲ್ಲಿ ಬಿದ್ದ ಆಮೆಯನ್ನು ಉಳಿಸಲು ಅವು ಒಟ್ಟಾಗಿ ಕೆಲಸ ಮಾಡುತ್ತವೆ. ಇದು ಒಟ್ಟು ಪೂರ್ಣ ಗಾತ್ರದ ಸುಮಾರು ಶೇಕಡಾ 22 ರಷ್ಟು ಆಗುತ್ತದೆ.

೩."ಕಾಕೋಲುಕಿಯಮ್":- ಕಾಗೆಗಳು ಮತ್ತು ಗೂಬೆಗಳ ಕಾಗೆಗಳು ಮತ್ತು ಗೂಬೆಗಳ ನಡುವಿನ ಒಂದು ಕದನವನ್ನು ತಿಳಿಸುತ್ತದೆ. ಶತೃಗಳಾದ ಗೂಬೆಯ ಗುಂಪಿಗೆ ಪ್ರವೇಶ ಪಡೆಯಲು ತನ್ನ ಸ್ವಂತ ತಂಡದಿಂದಲೇ ಬಹಿಷ್ಕೃತನಾದಂತೆ ಕಾಗೆಗಳಲ್ಲೊಂದು ಸೋಗುಹಾಕುತ್ತದೆ ಮತ್ತು ಆ ರೀತಿ ಮಾಡಿ ಪ್ರವೇಶ ಪಡೆದು ಅವರ ಗುಟ್ಟುಗಳು ಹಾಗೂ ಅವರ ಭೇದ್ಯತೆಗಳನ್ನು ಕಲಿಯುತ್ತದೆ ಗೂಬೆಗಳು ವಾಸವಾಗಿದ್ದ ಗುಹೆಗೆ ಎಲ್ಲಾ ಒಳಹೋಗುವ ಮಾರ್ಗಗಳಲ್ಲಿ ಬೆಂಕಿಹಚ್ಚುವಂತೆ ತನ್ನ ಕಾಗೆಗಳ ಗುಂಪಿಗೆ ಅದು ನಂತರ ಆಜ್ಞಾಪಿಸಿ ಅವುಗಳು ಉಸಿರುಕಟ್ಟಿ ಸಾಯುವಂತೆ ಮಾಡುತ್ತದೆ. ಇದು ಒಟ್ಟು ಗಾತ್ರದ ಸುಮಾರು ಶೇಕಡಾ 26 ರಷ್ಟಿದೆ.

೪."ಲಬ್ಧಪ್ರಣಾಶಮ್":- ಲಾಭಗಳ ನಷ್ಟ. ಈ ಕಥೆಯು ಕೋತಿ ಹಾಗೂ ಮೊಸಳೆಯ ಮಧ್ಯದ ಕೃತ್ರಿಮವಾಗಿ ರಚಿಸಿದ ಒಟ್ಟಿಗೆ ಜೀವಿಸುವ ಸಂಬಂಧದ ಜೊತೆ ನಡೆಯುತ್ತದೆ. ತನ್ನ ಪತ್ನಿಯನ್ನು ಗುಣಪಡಿಸಲು ಕೋತಿಯ ಹೃದಯವನ್ನು ಪಡೆಯಲು ಪಿತೂರಿ ಮಾಡಿ ಮೊಸಳೆಯು ಆ ಸಂಬಂಧವನ್ನು ಅಪಾಯಕ್ಕೆ ಗುರಿಮಾಡುತ್ತದೆ; ಕೋತಿಯು ಇದರ ಬಗ್ಗೆ ತಿಳಿದು ಆ ಕಠೋರ ಅದೃಷ್ಟವನ್ನು ನಿವಾರಿಸಿಕೊಳ್ಳುತ್ತದೆ.

೫."ಅಪರೀಕ್ಷಿತಕಾರಕಮ್":- ದುಡುಕಿನ ಕೆಲಸ. ಒಬ್ಬ ಬ್ರಾಹ್ಮಣನು ತನ್ನ ಸ್ನೇಹಿತನಾದ ಒಂದು ಮುಂಗುಸಿಯ ಹತ್ತಿರ ತನ್ನ ಮಗುವನ್ನು ಬಿಟ್ಟು ಹೋಗುತ್ತಾನೆ, ಮತ್ತು ಹಿಂದಿರುಗಿದ ಮೇಲೆ ಮುಂಗುಸಿಯ ಬಾಯಿಯಲ್ಲಿ ರಕ್ತವನ್ನು ನೋಡಿದವನೇ, ಅದನ್ನು ಕೊಲ್ಲುತ್ತಾನೆ. ಅವನು ನಂತರ ನಿಜವಾಗಿಯೂ ಒಂದು ಹಾವಿನಿಂದ ತನ್ನ ಮಗುವನ್ನು ಮುಂಗುಸಿಯು ರಕ್ಷಿಸಿರುವುದನ್ನು ನೋಡುತ್ತಾನೆ.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಭಾರತದ ರಾಷ್ಟ್ರೀಯ ಹಬ್ಬಗಳು

ಭಾರತದ ರಾಷ್ಟ್ರೀಯ ಹಬ್ಬಗಳು.Indian National Festivals ಭಾರತದ ರಾಷ್ಟ್ರೀಯ ಹಬ್ಬಗಳು ನಮ್ಮ ಭಾರತ ದೇಶವು ಜಾತ್ಯತೀತ ದೇಶವಾಗಿದೆ, ಇಲ್ಲಿ ಎಲ್ಲಾ ಜಾತಿ ಧರ್ಮದ ಜನರು ಎಲ್ಲಾ ಟೀಜ್ ಹಬ್ಬವನ್ನು ಬಹಳ ಆಡಂಬರದಿಂದ ಆಚರಿಸುತ್ತಾರೆ. ರಾಖಿ, ದೀಪಾವಳಿ, ದಸರಾ, ಈದ್, ಕ್ರಿಸ್‌ಮಸ್ ಮತ್ತು ಅನೇಕ ಜನರು ಒಟ್ಟಾಗಿ ಹಬ್ಬವನ್ನು ಆಚರಿಸುತ್ತಾರೆ. ಭಾರತದ ದೇಶದಲ್ಲಿ ಹಬ್ಬಗಳಿಗೆ ಕೊರತೆಯಿಲ್ಲ, ಧರ್ಮದ ಪ್ರಕಾರ ವಿಭಿನ್ನ ಹಬ್ಬಗಳಿವೆ. ಆದರೆ ಅಂತಹ ಕೆಲವು ಹಬ್ಬಗಳಿವೆ, ಅವು ಯಾವುದೇ ಜಾತಿಯವರಲ್ಲ, ಆದರೆ ನಮ್ಮ ರಾಷ್ಟ್ರವನ್ನು ನಾವು ರಾಷ್ಟ್ರೀಯ ಹಬ್ಬ ಎಂದು ಕರೆಯುತ್ತೇವೆ. ಭಾರತದ ರಾಷ್ಟ್ರೀಯ ಹಬ್ಬ. (Indian national festivals in Kannada ). 1947 ರಿಂದ ದೇಶದ ಸ್ವಾತಂತ್ರ್ಯದ ನಂತರ, ಈ ರಾಷ್ಟ್ರೀಯ ಹಬ್ಬಗಳು ನಮ್ಮ ಜೀವನದ ಭಾಗವಾದವು, ಅಂದಿನಿಂದ ನಾವು ಅವರನ್ನು ಬಹಳ ಉತ್ಸಾಹದಿಂದ ಆಚರಿಸುತ್ತೇವೆ. ಈ ಹಬ್ಬವು ನಮ್ಮ ರಾಷ್ಟ್ರೀಯ ಏಕತೆಯನ್ನು ತೋರಿಸುತ್ತದೆ. ಭಾರತದ ಪ್ರಮುಖ ರಾಷ್ಟ್ರೀಯ ಹಬ್ಬಗಳು – 1. ಸ್ವಾತಂತ್ರ್ಯ ದಿನ15 ಆಗಸ್ಟ್ 2. ಗಣರಾಜ್ಯೋತ್ಸವ 26 ಜನವರಿ 3. ಗಾಂಧಿ ಜಯಂತಿ 2 ಅಕ್ಟೋಬರ್ ಇದು ರಾಷ್ಟ್ರೀಯ ಹಬ್ಬ, ಇದು ರಾಷ್ಟ್ರೀಯ ರಜಾದಿನವೂ ಆಗಿದೆ. ಇದಲ್ಲದೆ, ಶಿಕ್ಷಕರ ದಿನ, ಮಕ್ಕಳ ದಿನವೂ ರಾಷ್ಟ್ರೀಯ ರಜಾದಿನವಾಗಿದೆ, ಇವುಗಳನ್ನು ನಮ್ಮ ದೇಶದ ಮಹಾನ್ ಸ್ವಾತಂತ್ರ್ಯ ಹೋರಾಟದ ನೆನಪಿಗಾಗಿ ಆಚರಿಸಲಾಗುತ್ತದೆ. ಇದಲ

ಭಾರತೀಯ ಸಂಸ್ಕೃತಿಯ ಲಕ್ಷಣಗಳು (Characteristics of Indian Culture)

1.1 ಭಾರತೀಯ ಸಂಸ್ಕೃತಿಯ ಲಕ್ಷಣಗಳು (Characteristics of Indian Culture) ಭಾರತದ ಸಾಂಸ್ಕೃತಿಕ ಪರಂಪರೆಯು ವಿಶಾಲವಾದ ವ್ಯಾಪ್ತಿಯನ್ನು ಹೊಂದಿದೆ. ಮಾನವನ ಉಗಮದೊಂದಿಗೆ ಉಗಮವಾಗಿ ಬೆಳೆದು ಸಾಗಿ ಬಂದ ಪರಂಪರೆಯು ಅವನ ಜೀವನ ಮೌಲ್ಯಗಳು, ವಸತಿ ರಕ್ಷಣೆ, ಆಹಾರ, ವಿಹಾರ, ಉಡುಗೆ-ತೊಡುಗೆ, ಮನರಂಜನೆ, ವ್ಯಾಪಾರ, ವಾಣಿಜ್ಯ, ಸಂಗೀತ, ಕಲೆ, ವಾಸ್ತುಶಿಲ್ಪ, ಚಿತ್ರಕಲೆ, ಶಿಕ್ಷಣ, ಧರ್ಮಗಳು, ರೂಢಿ-ಸಂಪ್ರದಾಯಗಳು, ಭಾಷೆ, ನಟನೆ, ನಂಬಿಕೆ, ನೃತ್ಯ, ಆಚರಣೆ, ಹವ್ಯಾಸ, ಸಾಹಿತ್ಯ, ವಿಧಿ-ವಿಧಾನಗಳನ್ನು ಒಳಗೊಂಡಿದೆ. ಈ ಅಂಶಗಳಲ್ಲಿ ಕೆಲವು ಕಾಲಕ್ಕೆ ತಕ್ಕಂತೆ ಮತ್ತು ಪ್ರಾದೇಶಿಕವಾಗಿ ಭಿನ್ನತೆ ಹಾಗೂ ಬದಲಾವಣೆಗೊಂಡಿದ್ದರೂ ನಿರಂತರವಾಗಿ ಸಾಗಿ ಬಂದಿವೆ. ಅವುಗಳ ಗುಣ ಲಕ್ಷಣಗಳು ಈ ಕೆಳಗಿನಂತಿವೆ: 1. ಸಾಂಪ್ರದಾಯಕ ಜೀವನ ವಿಧಾನ: ಭಾರತೀಯರ ಜೀವನ ವಿಧಾನ ಪಾರಂಪರಗತವಾಗಿ ಪೂರ್ವಜರಿಂದ ಸಾಗಿ ಬಂದಿದೆ. ಪಾರಂಪರಗತವಾಗಿ ಭಾರತೀಯರದು ಕೃಷಿ ಪ್ರಧಾನವಾದ ಜೀವನ ವಿಧಾನವಾಗಿದ್ದು, ಭೂಮಿಯನ್ನು 'ಭೂದೇವಿ' ಎಂದು ಆರಾಧಿಸುತ್ತಾರೆ. ಭೂಮಿಯನ್ನು ಹಸನಗೊಳಿಸಿ, ಹದ ಮಾಡಿ, ಉತ್ತಿ-ಬಿತ್ತುವ ಪೂರ್ವದಲ್ಲಿ ಭೂದೇವಿಗೆ ಪೂಜೆ ಸಲ್ಲಿಸುವ ಮೂಲಕ ಕೃಷಿ ಕಾಯಕವನ್ನು ಪ್ರಾರಂಭಿಸುತ್ತಾರೆ. ಕಾಲಕಾಲಕ್ಕೆ ಮಳೆಯಾಗಿ, ಸಮೃದ್ಧವಾದ ಬೆಳೆಯನ್ನು ಕೊಡುವ ಮೂಲಕ ನಿನ್ನ ಮಕ್ಕಳನ್ನು ಸಲಹು ತಾಯಿ ಎಂದು ಬೇಡಿಕೊಳ್ಳುತ್ತಾರೆ. ಕೃಷಿ ಸಲಕರಣಗಳಲ್ಲಿ, ಬಿತ್ತುವ ಬೀಜಗಳಲ್