ವಿಷಯಕ್ಕೆ ಹೋಗಿ

BA 1 OEC-ಕರ್ನಾಟಕದ ಸಾಂಸ್ಕೃತಿಕ ಇತಿಹಾಸ: ಕರ್ನಾಟಕದಲ್ಲಿ ಶಿಕ್ಷಣ ಮತ್ತು ಅಗ್ರಹಾರ

  1. ಪ್ರಾಚೀನ ಕರ್ನಾಟಕದಲ್ಲಿ ಶಿಕ್ಷಣ:  ಕರ್ನಾಟಕದ ಶಿಕ್ಷಣವನ್ನು ಪ್ರಾಚೀನಕಾಲ, ಮಧ್ಯಯುಗ ಹಾಗೂ ಆಧುನಿಕ ಯುಗಗಳ ಶಿಕ್ಷಣವೆಂದು ವಿಂಗಡಿಸಬಹುದು. ಪ್ರಾಚೀನಕಾಲ ಕರ್ನಾಟಕದ ರಾಜಕೀಯ ಇತಿಹಾಸ ಶಾತವಾಹನ ಅರಸರ ಕಾಲದಿಂದ ಆರಂಭವಾಗಿದ್ದರೂ ಅದಕ್ಕಿಂತ ಮೊದಲೇ ಶಿಕ್ಷಣ ಪದ್ದತಿಯಿತ್ತೆಂದು ಭಾವಿಸಲಾಗಿದೆ. ಚಂದ್ರಗುಪ್ತ ಮೌರ್ಯ ತನ್ನ ಗುರು ಭದ್ರ ಬಾಹುವಿನೊಂದಿಗೆ ಕ್ರಿ.ಪೂ. 4ನೇ ಶತಮಾನದಲ್ಲಿ ಕರ್ನಾಟಕಕ್ಕೆ ಆಗಮಿಸಿದನೆಂದು, ಅವರೊಂದಿಗೆ ಜೈನ ಸಂಪ್ರದಾಯವೂ ಆಗಮಿಸಿತು. ಆ ಜೈನ ಧರ್ಮದ ಪ್ರಸಾರಕ್ಕಾಗಿ ಜೈನಬಸದಿಗಳು ಅಸ್ತಿತ್ವಕ್ಕೆ ಬಂದವು. ಶಿಕ್ಷಣಕ್ಕೆ ನಾಂದಿ ಹಾಡಿದವು. ಹಿಂದೂ ಧರ್ಮದಲ್ಲಿರುವ ಭಕ್ತಿ, ನಂಬಿಕೆ, ಆರಾಧನೆಗಳ ಜೊತೆಗೆ ಸುಜ್ಞಾನದ ಅವಶ್ಯಕತೆಯಿದೆಯೆಂದು ಎತ್ತಿ ಹಿಡಿದವು. ಕೆಲವು ಕಂದಾಚಾರ, ಮೂಢನಂಬಿಕೆಗಳನ್ನು ತೊಡೆದು ಹಾಕಿ ಸಂಸ್ಕಾರವಂತರಾಗಲು ಸಹಾಯವಾದವು. ಇವುಗಳೆಲ್ಲ ಉದ್ದೇಶವು ಜೈನ ಧರ್ಮವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯು ವುದಾಗಿತ್ತು. ನಂತರದಲ್ಲಿ ಚಂದ್ರಗುಪ್ತ ಮೌರ್ಯ ಮೊಮ್ಮಗನಾದ ಅಶೋಕನು ಬೌದ್ಧ ಧರ್ಮವನ್ನು ಅವಲಂಬಿಸಿ ಕರ್ನಾಟಕದಲ್ಲಿ ಶಾಸನಗಳಿಂದ ಪ್ರಚಾರ ಮಾಡಿದನು. ಬ್ರಾಹ್ಮೀ ಲಿಪಿಯಲ್ಲಿ ಬರೆದ ಪ್ರಾಕೃತ ಭಾಷೆಯ ಈ ಶಾಸನಗಳು ರಾಯಚೂರು ಜಿಲ್ಲೆಯ ಕೊಪ್ಪಳ, ಮಸ್ಕಿ, ಬ್ರಹ್ಮಗಿರಿ, ಸಿದ್ದಾಪೂರ ಮುಂತಾದೆಡೆ ದೊರಕಿವೆ. ಇವೆಲ್ಲವುಗಳು ದೇಶೀಯ ಭಾಷೆಯ ಪ್ರಚಾರಕ್ಕೆ ನಾಂದಿಯಾದವು. ಈ ಶಾಸನಗಳನ್ನು ಅರಿಯಲು ಶಿಕ್ಷಣದ ಅವಶ್ಯಕತೆಯೆನಿಸಿತು. ಶಿಕ್ಷಣ ಸಂಸ್ಥೆಗಳು ಅಗತ್ಯವೆನಿಸಿದವು.

ಬೌದ್ಧಧರ್ಮದ ಪ್ರಚಾರಕ್ಕಾಗಿ ಬೌದ್ಧ ಬಿಕ್ಷುಗಳು ಶಿಕ್ಷಣ ಪಡೆದು ಸಜ್ಜಾದರು. ವೈದಿಕ ಧರ್ಮದ ಶಿಕ್ಷಣವು ಒಂದು ವರ್ಗಕ್ಕೆ ಸೀಮಿತವಾಗಿತ್ತು. ಬೌದ್ಧರು ಶಿಕ್ಷಣವು ಯಾರ ಸ್ವತ್ತಲ್ಲವೆಂಬ ತತ್ವವನ್ನು ಎತ್ತಿ ಹಿಡಿದು, ಕೆಳವರ್ಗದಿಂದ ಮೇಲ್ವರ್ಗದತನಕ ಎಲ್ಲರೂ ಶಿಕ್ಷಣ ಪಡೆಯಬೇಕು, ಎಲ್ಲರಿಗೂ ಶಿಕ್ಷಣವು ಸಿಗಬೇಕೆಂಬ ದೃಷ್ಟಿಯಿಂದ ವಿಹಾರಗಳನ್ನು, ಮಠಗಳನ್ನು ಸ್ಥಾಪಿಸಿ ಅಕ್ಷರ ಕ್ರಾಂತಿಗೆ ನಾಂದಿ ಹಾಡಿದರು. ರಾಜ ಮಹಾರಾಜರುಗಳು ವಿಹಾರಗಳನ್ನು, ಮಠಗಳನ್ನು ಸ್ಥಾಪಿಸಲು ಆರ್ಥಿಕವಾಗಿ ಸಹಾಯ ಮಾಡಿದರು. `ವಿದ್ಯಾದಾನಂ ಮಹಾದಾನಂ' ಎಂಬಂತೆ ಎಲ್ಲ ಸಮಾಜದ ಜನರನ್ನು ಶಿಕ್ಷಣವಂತರನ್ನಾಗಿ ಮಾಡಲು ಬೌದ್ಧಬಿಕ್ಷುಗಳು ಹಗಲಿರುಳು ಶ್ರಮಿಸಿದರು. ಕ್ರಿ.ಶ 3ನೇಯ ಶತಮಾನದ ಬನವಾಸಿಯ ಒಂದು ಶಾಸನದಂತೆ ಶಿವಸ್ಕಂದ ನಾಗಶ್ರೀ ಎಂಬ ಚುಟು ರಾಜಕುಮಾರಿ ವಿದ್ಯಾದಾನಕ್ಕಾಗಿ ಒಂದು ಬೌದ್ದವಿಹಾರವನ್ನು ನಿರ್ಮಿಸಿದ್ದಳು. ಇದು ಪ್ರಪ್ರಥಮ ಬೌದ್ದ ವಿಹಾರದ ಪರಿಚಯ. ತದನಂತರದಲ್ಲಿ 2 ನೇ ಶತಮಾನದ ಎರಡನೇ ಪುಲಿಕೇಶಿಯ ಆಳ್ವಿಕೆಯ ಹೊತ್ತಿಗೆ ನೂರಕ್ಕೆ ಏರಿತ್ತು. ಅಲ್ಲಿ ನೂರಾರು ಬೌದ್ಧಬಿಕ್ಷುಗಳಿದ್ದರೆಂದು ಯುವಾನ್ ಚಾಂಗನ ವರದಿಯಿಂದ ತಿಳಿದುಬರುತ್ತದೆ. ಜನಸಾಮಾನ್ಯರೆಲ್ಲ ಶಿಕ್ಷಣವಂತರಾಗಲು ಬೌದ್ಧ ಧರ್ಮದ ಕೊಡುಗೆ ಅಪಾರವಾದುದು. ಮೌರ್ಯ ಕಾಲದಿಂದ ರಾಷ್ಟ್ರಕೂಟರ ಕಾಲದವರೆಗೆ ಅಂದರೆ, 8-9ನೇ ಶತಮಾನಗಳ ತನಕ ವೈದಿಕ ಹಾಗೂ ಜೈನ ಶಿಕ್ಷಣಗಳೊಡನೆ ಬೌದ್ಧ ಶಿಕ್ಷಣವು ಸಾಕಷ್ಟು ಪ್ರಚಲಿತದಲ್ಲಿತ್ತು. ಆದರೆ ಬಾದಾಮಿ ಚಾಲುಕ್ಯರ ಆಳ್ವಿಕೆಯ ಕೊನೆಯ ವೇಳೆಗೆ ಬೌದ್ಧ ಶಿಕ್ಷಣ ವ್ಯವಸ್ಥೆಯು ನಿಧಾನವಾಗಿ ಅವನತಿಯತ್ತ ಸಾಗಿತು. ಕರ್ನಾಟಕದಲ್ಲಿ ಅಸ್ತಿತ್ವಕ್ಕೆ ಬಂದ ಕೊನೆಯ ಬೌದ್ಧ ವಿಹಾರಗಳಲ್ಲಿ 1095 ರ ಸುಮಾರಿನಲ್ಲಿ ಸಂಗಮದ ಶೆಟ್ಟಿ ಧಾರವಾಡ ಜಿಲ್ಲೆಯ ಡಂಬಳದಲ್ಲಿ (ಧರ್ಮವೊಳಲ್) ಕಟ್ಟಿಸಿದ್ದು ಒಂದೆಂದು ಹೇಳುತ್ತಾರೆ. ಶಿವಮೊಗ್ಗ ಜಿಲ್ಲೆಯ ಬಳ್ಳಿಗಾಮೆಯಲ್ಲಿ 12 ನೇ ಶತಮಾನದವರೆಗೂ ಬೌದ್ಧಧರ್ಮವನ್ನು ಅಧ್ಯಯನ ವಿಷಯವನ್ನಾಗಿ ಮಾಡಿಕೊಡಲಾಗಿತ್ತು.

ಒಂದು ವರ್ಗಕ್ಕೆ ಸೀಮಿತವಾಗಿದ್ದ ಪ್ರಾಥಮಿಕ ಶಿಕ್ಷಣವನ್ನು ಎಲ್ಲ ವರ್ಗದವರಿಗೂ ವಿಸ್ತರಿಸಿದ ಕೀರ್ತಿಯು ಬೌದ್ಧಧರ್ಮಕ್ಕೆ ಸಲ್ಲುತ್ತದೆ. ಉಚ್ಛ ಶಿಕ್ಷಣಕ್ಕಾಗಿ ಏರ್ಪಟ್ಟಿದ್ದ ಅಗ್ರಹಾರ, ಬ್ರಹ್ಮಪುರಿಗಳಲ್ಲೂ ಪ್ರಾಥಮಿಕ ಶಿಕ್ಷಣಕ್ಕೆ ಅವಕಾಶವಿತ್ತು. ಅಲ್ಲಿ ಉಚ್ಚ ಶಿಕ್ಷಣದ ಪಂಡಿತರಿಗೆ ಹೆಚ್ಚು ಸಂಭಾವನೆಯು, ಪ್ರಾಥಮಿಕ ಶಿಕ್ಷಣದ ಪಂಡಿತರಿಗೆ ಕಡಿಮೆ ಸಂಭಾವನೆಯು ಬರುತ್ತಿದ್ದವೆಂದು ರಾಯಲ್ ಏಷ್ಯಾಟಿಕ್ ಸೊಸೈಟಿಯ ಬೊಂಬಾಯಿ ಶಾಖೆಯ ಪತ್ರಿಕೆಯ 9 ನೇಯ ಸಂಪುಟದಲ್ಲಿ ಹೇಳಲಾಗಿದೆ. ಪ್ರಾಥಮಿಕ ಶಿಕ್ಷಣದಲ್ಲಿ ಅಕ್ಷರಾಭ್ಯಾಸ, ಕಾಗುಣಿತ, ಕನ್ನಡ ಭಾಷೆಯ ಓದು, ಬರಹ ಒಳಗೊಂಡಿತ್ತು. ಕಲಿಸುವ ಪದ್ಧತಿಯು ಈಗಿನಂತೆ ಇದ್ದಿರಬೇಕು. ಮಕ್ಕಳು ಬೆರಳಿನಿಂದ ಮರಳಿನ ಮೇಲೆ ಅಕ್ಷರ ಬರೆದು ಅದನ್ನು ಗಟ್ಟಿಯಾಗಿ ಪಠಿಸುತ್ತಾ ಕಲಿಯುತ್ತಿದ್ದರು. ಸಾಮೂಹಿಕವಾಗಿ ಮಗ್ಗಿಯನ್ನು ಕಂಠಪಾಠ ಮಾಡುತ್ತಿದ್ದರು. ಈಗಿನ ಅಧ್ಯಾಪಕರಂತೆಯೇ ಬೌದ್ಧ ಬಿಕ್ಷುಗಳು ವಿದ್ಯಾರ್ಥಿಗಳಿಗೆ ಕಂಠಪಾಠ ಹೇಳಿಕೊಡುತ್ತಿದ್ದರು. ಊರಿನ ದೇವಾಲಯ, ಚಾವಡಿಯಲ್ಲಿ, ಧನಿಕರ ಪಡಸಾಲೆಗಳಲ್ಲೂ ಮಕ್ಕಳಿಗೆ ಅಕ್ಷರಭ್ಯಾಸ ತರಗತಿಗಳು ನಡೆಯುತ್ತಿದ್ದಿರಬೇಕು.

ಇನ್ನೂ ಹೆಚ್ಚಿನ ಶಿಕ್ಷಣಕ್ಕಾಗಿ, ವಿಹಾರಗಳಲ್ಲದೇ ಘಟಕಗಳು, ಅಗ್ರಹಾರಗಳು, ಬ್ರಹ್ಮಪುರಿಗಳು, ಮಠಗಳು ಹಾಗೂ ದೇಗುಲದ ವಿದ್ಯಾಲಯಗಳು ಬಳಕೆಯಾಗುತ್ತಿದ್ದವು. ಈ ಘಟಕಗಳು ಸಂಖ್ಯೆಯಲ್ಲಿ ವಿರಳವಾಗಿದ್ದರೂ ಕೂಡ ಕದಂಬರ ಕಾಲದಿಂದಲೂ ಇವುಗಳ ಉಲ್ಲೇಖವುಂಟು. ಕದಂಬ ವಂಶದ ಮೂಲ ಪುರುಷನಾದ ಮಯೂರವರ್ಮನು ಕಂಚಿಯ ಒಂದು ಘಟಕದಲ್ಲಿ ಶಿಕ್ಷಣ ಪಡೆಯಲು ಯತ್ನಿಸಿದ್ದ. ಈ ಕಂಚಿಯ ಘಟಕವು ಉತ್ತರದಲ್ಲಿದ್ದ ನಲಂದಾ ವಿಶ್ವವಿದ್ಯಾಲಯದಂತಿರಬಹುದು. ಅದು ವೇದ ಶಿಕ್ಷಣ ವ್ಯವಸ್ಥೆಯಲ್ಲಿ ಅಗ್ರಸ್ಥಾನ ಪಡೆದಿತ್ತು. ಮಹಾಜನರೆಂಬ ಸಂರಕ್ಷರ ಮಂಡಲಿ ಅದರ ಕಾರ್ಯ ನಿರ್ವಹಿಸುತ್ತಿತ್ತು. ಕರ್ನಾಟಕದ ಘಟಕಗಳಲ್ಲಿ ಪ್ರಸಿದ್ಧವಾದದ್ದು ಕಲಬುರ್ಗಿ ಬಳಿಯ ನಾಗೈಯಲ್ಲಿತ್ತು. ಅಲ್ಲಿ ಒಂದು ಆವರಣದಲ್ಲಿ 257 ವಿದ್ಯಾರ್ಥಿಗಳು, ಮತ್ತೊಂದು ಆವರಣದಲ್ಲಿ 400 ವಿದ್ಯಾರ್ಥಿಗಳೂ ಇದ್ದರು. ಅಲ್ಲಿ ವೇಳಾ ನಿಗದಿಕಾರರೂ, ಕಾವಲುಗಾರರೂ ಇದ್ದರು. 200 ಮಂದಿ ವೇದಗಳನ್ನು, 52 ಮಂದಿ ಶಾಸ್ತ್ರಗಳನ್ನು ಅಧ್ಯಯನ ಮಾಡುತ್ತಿದ್ದರು. ವೇದಪಾಠಕ್ಕೆ ಮೂವರೂ, ಶಾಸ್ತ್ರಪಾಠಕ್ಕೆ ಮೂವರೂ ಪಂಡಿತರಿದ್ದರು. ಅವರು ಭಟ್ಟದರ್ಶನ, ವ್ಯಾಕರಣ ಹಾಗೂ ಪ್ರಭಾಕರಗಳನ್ನು ಬೋಧಿಸುತ್ತಿದ್ದರು. ಅಲ್ಲಿ ಒಂದು ದೊಡ್ಡ ಗ್ರಂಥಾಲಯವೂ, ಅದನ್ನು ನೋಡಿಕೊಳ್ಳಲು ಆರು ಜನ ಅಧಿಕಾರಿಗಳೂ (ಸರಸ್ವತಿ ಭಂಡಾರಿ) ಇದ್ದರು. ಆ ಘಟಕಕ್ಕೆ ಸಂಬಂಧಿಸಿದ ದೇವಾಲಯವೊಂದನ್ನು ನೋಡಿಕೊಳ್ಳುವುದಕ್ಕೂ ಅಧ್ಯಾಪಕರು ಮತ್ತು ಇತರರೆ ರಕ್ಷಣೆಗೂ ಪ್ರತ್ಯೇಕವಾಗಿ ಭೂ ಕೊಡುಗೆಯಿತ್ತು. ಹೀಗೆಯೇ ಇತರ ಕಡೆಗಳಲ್ಲೂ ಘಟಕಗಳಿದ್ದವು. ಅವುಗಳಲ್ಲಿ ಕಡ್ಡಿಯೂರ, ಕುಕ್ಕೂರ್, ಹೆಂಜೇರು (ತುಮಕೂರು ಜಿಲ್ಲೆ), ಮೊರಿಗೆರೆ, ರಾಯಬಾಗ್ – ಇವು ಮುಖ್ಯವಾದವು. ಘಟಕದಲ್ಲಿ ಶಿಕ್ಷಣವನ್ನು ಮುಗಿಸಿದವರಿಗೆ “ಘಟಕ ಸಾಹಸ" ಎಂಬ ಪದವಿ ಸಿಗುತ್ತಿತ್ತು. ಇದನ್ನು ಘನವಿದ್ವಾಂಸರಿಗೆ ಒಂದು ಗೌರವ  ಪದವಿಯಾಗಿಯೂ ಕೊಡಲಾಗುತ್ತಿತ್ತು.

ಶಿವಮೊಗ್ಗದ ತಾಳಗುಂದದ ಅಗ್ರಹಾರವು ಅತ್ಯಂತ ಪ್ರಾಚೀನವಾದದ್ದು. ಇದನ್ನು ಮಯೂರ ವರ್ಮನ ಪೂರ್ವಿಕನಾದ ಮುಕ್ಕಣ್ಣ ಕದಂಬ ಸ್ಥಾಪಿಸಿದ. ಅವನು ಉತ್ತರದ ಅಹಿಚ್ಛತ್ರ ಎಂಬ ಸ್ಥಳದಿಂದ 29 ಬ್ರಾಹ್ಮಣ ಕುಟುಂಬಗಳನ್ನು ಕರೆತಂದು ಅಲ್ಲಿ ನೆಲೆಸುವಂತೆ ಮಾಡಿದನು. ಅವರು ವೇದ, ವೇದಾಂಗ ಉಪಾಂಗ, ಮೀಮಾಂಸೆ, ತರ್ಕಪದ್ದತಿ, ಸ್ಮೃತಿ, ಪುರಾಣ, ನಾಟಕ ಇತ್ಯಾದಿಗಳಲ್ಲಿ ಪರಿಣತರಾಗಿದ್ದರು. (1091 ರ ಶಾಸನ) ಮೊದಲ ಕದಂಬರು ತಾಳಗುಂದದ ಸ್ಥಾಪನೆಗೆ ಹೆಸರಾಗಿದ್ದಂತೆ, ಬಾದಾಮಿ ಚಾಲುಕ್ಯರು ಬಾದಾಮಿಯ ಅಗ್ರಹಾರಗಳನ್ನು ಸ್ಥಾಪಿಸಿದರು. 966 ಒಂದು ಆನದಂತೆ ವಾತಾಪಿ ಅಥವಾ ಬಾದಾಮಿಯ ಒಂದು ಅಧಿಷ್ಠಾನವೆಂದು ಹೆಸರಿಸಿದ್ದರೂ ಅದರ ವರ್ಣನೆಯಿಂದ ಅದೊಂದು ಅಗ್ರಹಾರವಾಗಿತ್ತೆಂಬುದು ದೃಢಪಟ್ಟಿದೆ. ಅಲ್ಲಿ ಚತುರ್ದಶಶಾಸ್ತ್ರ ವಿದ್ಯೆಗಳಲ್ಲಿ ಪರಿಣತರಿದ್ದರು. 2000 ಮಂದಿ ವಿದ್ವಾಂಸರಿದ್ದರು. ಅದು ಧಾರ್ಮಿಕ ಹಾಗೂ ವೈದಿಕ ಶಿಕ್ಷಣದ ಕೇಂದ್ರವಾಗಿತ್ತೆಂದು ಅದರ ಹೆಸರು ಸೂಚಿಸುವುದಾದರೂ ಅಲ್ಲಿ ಲೌಕಿಕ ವಿದ್ಯೆಗೂ ಪ್ರಾಶಸ್ತ್ಯವಿತ್ತು.

ಚಾಲುಕ್ಯರ ಮತ್ತೊಂದು ಅಗ್ರಹಾರ ಐಹೊಳೆಯಲ್ಲಿತ್ತು. ಸೋಮಯಾಜಿ ಎಂಬುವನು ಐಹೊಳೆಯ (ಆರ್ಯಪುರ) 500ಮಂದಿ ಚತುರ್ವೇದಿಗಳ ತಂಡಕ್ಕೆ ದತ್ತಿ ನೀಡಿರುವುದು 8-9 ನೇಯ ಶತಮಾನದ ಶಾಸನವೊಂದರಲ್ಲಿ ಉಲ್ಲೇಖವಾಗಿದೆ. ಆ ಅಗ್ರಹಾರ ಅನಂತರವೂ 2-3 ಶತಮಾನಗಳ ತನಕ ಪ್ರಸಿದ್ದಿ ಉಳಿಸಿಕೊಂಡು ಬಂತೆಂದು 1191 ರ ಶಾಸನದಿಂದ ತಿಳಿದುಬರುತ್ತಿದೆ. ರಾಷ್ಟ್ರಕೂಟರ ಕಾಲದಲ್ಲಿ ವಿಜಯಪುರ ಜಿಲ್ಲೆಯ ಸಾಲೊಟಗಿ ಒಂದು ಪ್ರಮುಖ ಅಗ್ರಹಾರವಾಗಿತ್ತು. ಇದನ್ನು ಕೆಲವು ಇತಿಹಾಸಕಾರರು, “ದೇಗುಲ ವಿದ್ಯಾಲಯ” ಎಂದೂ ಪರಿಗಣಿಸುತ್ತಾರೆ. ಇದರ ಹಿಂದಿನ ಹೆಸರು “ಪಾವಿಟ್ಟಿಗೆ" ಇದರೊಡನೆ “ಶಾಲೆ" ಏರಿ “ಸಾಲೊಟಿಗೆ" ಎಂದಾಯಿತು. 3 ನೇಯ ಕೃಷ್ಣರಾಜನ ಮುಖ್ಯಮಂತ್ರಿ ನಾರಾಯಣ ಅಲ್ಲಿ 945 ರಲ್ಲಿ ಭವ್ಯ ಮಂದಿರವೊಂದನ್ನು ಕಟ್ಟಿಸಿದನು. ಅಲ್ಲಿ ವಿವಿಧ ಭಾಗಗಳಿಂದ ಅಗಮಿಸಿದ್ದ ವಿದ್ವಾಂಸರಿದ್ದರು. ಅವರ ರಕ್ಷಣೆಗಾಗಿ ಸಾಕಷ್ಟು ಭೂಮಿಕಾಣಿಕೆಗಳನ್ನು ಒದಗಿಸಲಾಗಿತ್ತು. ಅವರ ವಾಸಕ್ಕೆ ಗೃಹವನ್ನು,ಅಗ್ರಹಾರದ ಕಾರ್ಯಕ್ರಮಗಳ  ನಿರ್ವಹಣೆಗಾಗಿ ಭೂಮಿಯನ್ನು, ಕೊಡುಗೆಯಾಗಿ ಅಲ್ಲಿನ ಅಧಿಕಾರಿಗಳು ಕೊಟ್ಟರು. ಈ ದಾನಗಳ ಮೇಲೆ ತೆರಿಗೆ ಎತ್ತುತ್ತಿರಲಿಲ್ಲ. ಗ್ರಾಮಸ್ಥರು ವಿದ್ವಾಂಸರಿಗೆ ಮದುವೆ,ಮುಂಜಿ,ಚೌಲ ಮುಂತಾದ ದಿನಗಳಲ್ಲಿ ಕಾಣಿಕೆ ಕೊಟ್ಟು ಗೌರವಿಸುತ್ತಿದ್ದರು.

ಕಲ್ಯಾಣಿ ಚಾಲುಕ್ಯರ ಕಾಲದಲ್ಲಿ ಗದಗಿನ ಬಳಿಯ ಉಮ್ಮಜಿಗೆಯಲ್ಲಿ ಒಂದು ಉನ್ನತ ಶಿಕ್ಷಣ ಕೇಂದ್ರವನ್ನು ಸ್ಥಾಪಿಸಲಾಗಿತ್ತು. ಅಲ್ಲಿ ಒಂದು ಮಹಾವಿದ್ಯಾಲಯವೂ, ಛಾತ್ರಾಲಯವೂ ಇದ್ದವು. ಅಲ್ಲಿ ಅಧ್ಯಾಪಕರಿಗೆ ವಾಸದ ಮನೆಯನ್ನೂ, ಜೀವನೋಪಾಯಕ್ಕಾಗಿ ಭೂಮಿಯ ಕೊಡುಗೆಯನ್ನೂ ನೀಡಲಾಗಿತ್ತು. ಅಲ್ಲಿ ಶಿಕ್ಷಣ ನೀಡುತ್ತಿದ್ದವರು ಅಕ್ಕರಿಗರು (ಅಕ್ಷರ ಭೋಧಕ). ಇವರು ಗಣಿತ, ಖಗೋಳ ವಿe್ಞÁನ, ಛಂದಸ್ಸು ವ್ಯಾಕರಣ, ಕಾವ್ಯಶಾಸ್ತ್ರ ಮುಂತಾದವುಗಳ ರಚನಕಾರರೂ, ಬೋಧಕರೂ ಆಗಿದ್ದರು. ಇವರಿಗೆ ಬೇಕಾದ ಹಾಗೆ ಭೂಮಿಯನ್ನು ದಾನವಾಗಿ ಕೊಡಲಾಗಿತ್ತು. ಅದರಿಂದ ಬಂದ ಆದಾಯದಲ್ಲಿ ತಾವು ಜೀವಿಸುವುದಲ್ಲದೆ, ತಮ್ಮ  ಶಿಷ್ಯರಿಗೆ ದಿನಕ್ಕೆ ಒಂದು ಊಟವನ್ನೂ, ವರ್ಷಕ್ಕೊಮ್ಮೆ ಬಟ್ಟೆಯನ್ನೂ ಒದಗಿಸಬೇಕಾಗಿತ್ತು.

ಈ ಅಗ್ರಹಾರಗಳ ಜೊತೆಗೆ ಇನ್ನೂ ಅನೇಕ ಅಗ್ರಹಾರಗಳು ಕರ್ನಾಟಕದ ಬೇರೆ ಬೇರೆ ಭಾಗಗಳಲ್ಲಿದ್ದುದು ತಿಳಿದು ಬಂದಿದೆ. ಕದಂಬ ರಾಜ್ಯದ ಅರಸನಾದ ಶಿವಚಿತ್ತನ ರಾಣಿ ಕಮಲಾದೇವಿ ಬೆಳಗಾವಿ ಜಿಲ್ಲೆಯ ವಡಗಾಂವಿಯಲ್ಲಿ ಒಂದು ಅಗ್ರಹಾರವನ್ನು ಸ್ಥಾಪಿಸಿದ್ದಳು. ಅದಕ್ಕಾಗಿ ಭಾರತದ ಬೇರೆ ಬೇರೆ ಭಾಗಗಳಲ್ಲಿ ವಿದ್ವಾಂಸರನ್ನು ಕರೆಸಿ ಅವರ ಸಂರಕ್ಷಣೆಗಾಗಿ ದತ್ತಿಯನ್ನು ಹಾಕಿಸಿಕೊಟ್ಟಳು. ಅಲ್ಲಿ ವೇದ, ವೇದಾಂಗ, ನ್ಯಾಯ, ಮೀಮಾಂಸೆ, ಸಾಂಖ್ಯ, ಯೋಗ, ವೇದಾಂತ, ಸ್ಮೃತಿ, ಇತಿಹಾಸ, ಪುರಾಣ, ಖಗೋಳಶಾಸ್ತ್ರ ಇವುಗಳ ಬೋಧನೆಗೆ ಅವಕಾಶ ಕಲ್ಪಿಸಲಾಗಿತ್ತು. ಆಯಾ ಅಧ್ಯಾಪಕರ ವಿಷಯ ಪಾಂಡಿತ್ಯಕ್ಕೂ ಕಾರ್ಯ ಮಹತ್ವಕ್ಕೂ ಅನುಗುಣವಾಗಿ ದಾನಗಳನ್ನು ನೀಡಲಾಗಿತ್ತು. ಹೀಗೆಯೇ ಕರ್ನಾಟಕದ ಇತರೆಡೆಗಳಲ್ಲೂ ಅಗ್ರಹಾರಗಳು ಸ್ಥಾಪನೆಯಾಗಿದ್ದವು.

ಅಗ್ರಹಾರಗಳಂತೆ ಬ್ರಹ್ಮಪುರಿಗಳೂ ಕರ್ನಾಟಕದಲ್ಲಿ ಪ್ರಾಚೀನ ಕಾಲದಿಂದಲೂ ಅಸ್ತಿತ್ವದಲ್ಲಿದ್ದ ಉನ್ನತ ಶಿಕ್ಷಣ ಸಂಸ್ಥೆಗಳು. ಅಗ್ರಹಾರ ಶಿಕ್ಷಣಕ್ಕಾಗಿ ಏರ್ಪಟ್ಟ ವಿಶಿಷ್ಟ ಗ್ರಾಮವಾಗಿದ್ದರೆ, ಬ್ರಹ್ಮಪುರಿ ನಗರದ ಒಂದು ಭಾಗ ಮಾತ್ರವಾಗಿತ್ತು. ಬೆಳಗಾಂವಿಯಲ್ಲಿ ಬನವಾಸಿಯ ಪ್ರಾಂತ್ಯ ಅಧಿಕಾರಿಯಾದ ಕೇಶವದೇವ ಬ್ರಹ್ಮಪುರಿಯೊಂದನ್ನು ಸ್ಥಾಪಿಸಿದ್ದ. ಅಲ್ಲಿ 38 ಮಂದಿ ಕೀರ್ತಿವೆತ್ತ ವಿದ್ವಾಂಸರಿದ್ದರು. ಅವರು ಪುರಾಣ, ಸ್ಮೃತಿ, ಭಾಷ್ಯ, ಕಾವ್ಯ, ನಾಟಕ ಇತ್ಯಾದಿ e್ಞÁನಕ್ಷೇತ್ರಗಳಲ್ಲಿ ಪಂಡಿತರೆನಿಸಿದ್ದರು. ಆಯಾ e್ಞÁನವನ್ನು ಬೋಧಿಸುತ್ತಿದ್ದರು. ಆ ನಗರದ ದಕ್ಷಿಣದ ಫಲವತ್ತಾದ ನೆಲವನ್ನು ಅವರ ವಸತಿಗೂ, ಜೀವನೋಪಾಯಕ್ಕೂ ಕೇಶವದೇವ ದಾನವಾಗಿ ಕೊಟ್ಟಿದ್ದ. ಅಲ್ಲಿ ಒಂದು ಸುಂದರವಾದ ದೇಗುಲ ಕಟ್ಟಿಸಿ, ಅದರ ಮುಂದೆ ವೀರಕೇಶವಪುರ ಎಂಬ ನಗರವನ್ನು ನಿರ್ಮಿಸಿದ್ದ. ಅನೇಕ ವಸತಿಗಳನ್ನು ಕಟ್ಟಿಸಿ ಅವುಗಳನ್ನು ಪೀಠೋಪಕರಣಾದಿಗಳಿಂದ ಸಜ್ಜುಗೊಳಿಸಿ, ಶೈಕ್ಷಣಿಕ ಕಾರ್ಯಕ್ರಮಗಳಿಗೆ ಅನುಕೂಲ ಮಾಡಿಕೊಟ್ಟಿದ್ದ. ಅಧ್ಯಾಪಕರ ವಸತಿಗೃಹಗಳನ್ನು ಕಟ್ಟಿಸಿ ವಾಸಕ್ಕೆ ಸಜ್ಜುಗೊಳಿಸಿ ಕೊಡಲಾಗಿತ್ತು. ಬ್ರಹ್ಮಪುರಿಗಳು ಸೂಡಿ, ಅರಸೀಬೀದಿ (ವಿಕ್ರಮಪುರ), ತಲಕಾಡು ಮುಂತಾದ ಕರ್ನಾಟಕದ ಇತರ ಕೆಲವು ನಗರಗಳಲ್ಲೂ ಇದ್ದವು. 

ಅಗ್ರಹಾರಗಳೂ ಬ್ರಹ್ಮಪುರಿಗಳೂ ಕರ್ನಾಟಕದ ವಿಶಿಷ್ಟ ಉನ್ನತ ಶಿಕ್ಷಣ ಕೇಂದ್ರಗಳೆನಿಸಿದ್ದರೂ ಇವು ಆ ಕಾಲದಲ್ಲಿ ಉತ್ತರ ಭಾರತದಲ್ಲಿ ಪ್ರಚಾರದಲ್ಲಿದ್ದ ಟೋಲ್ ಎಂಬ ಶಿಕ್ಷಣ ಸಂಸ್ಥೆಗಳನ್ನು ಹೋಲುತ್ತಿದ್ದುವು. ಇವನ್ನೇ ಕೆಲವು ದೇವಾಲಯದ ವಿದ್ಯಾಲಯಗಳೆಂದು ಕರೆದಿರುವರು. ದೇವಾಲಯ ವಿದ್ಯಾಲಯಗಳಲ್ಲಿ ಕೆಲವು ಪ್ರಾಥಮಿಕ ಶಿಕ್ಷಣವನ್ನು ಬೋಧಿಸುತ್ತಿದ್ದರು. ಮತೆ ಕೆಲವು ಉನ್ನತ ಶಿಕ್ಷಣಕ್ಕೂ ಅವಕಾಶ ಕಲ್ಪಿಸಿದ್ದವು. ಹರಿಹರದ ಹರಿಹರೇಶ್ವರ ದೇವಾಲಯವೂ ತಾಳಗುಂದದ ಪ್ರಣವೇಶ್ವರ ದೇವಾಲಯವೂ ಅಂಥ ಉನ್ನತ ಶಿಕ್ಷಣ ಕೇಂದ್ರಗಳಾಗಿ ಕೆಲಸ ಮಾಡುತ್ತಿದ್ದವು. ಹರಿಹರೇಶ್ವರ ದೇವಾಲಯದ ಶಿಕ್ಷಣ ಕೇಂದ್ರದಲ್ಲಿ ಋಗ್ವೇದ, ಯಜುರ್ವೇದ, ವ್ಯಾಕರಣ, ಮೀಮಾಂಸೆ ಇತ್ಯಾದಿ ವಿಷಯಗಳ ಬೋಧನೆಗೆ ಪಂಡಿತರಿದ್ದುದಲ್ಲದೆ. ಪ್ರಾಥಮಿಕ ಶಿಕ್ಷಣದ ಅಧ್ಯಾಪಕರೂ ಇದ್ದರು. ತಾಳಗುಂದದ ಪ್ರಾಣವೇಶ್ವರ ದೇವಾಲಯ ಕೇಂದ್ರದಲ್ಲಿ ಋಗ್ವೇದ, ಯಜುರ್ವೇದ, ಸಾಮವೇದ, ಪದಪಾಠ, ಕಲ್ಪ, ವ್ಯಾಕರಣ, ವ್ಯಾಸ, ಪ್ರಭಾಕರ, ಕಲ್ಪವತಾರ ಮತ್ತು ವೇದಾಂತಗಳನ್ನು ಹೇಳಿಕೊಡುತ್ತಿದ್ದರಲ್ಲದೆ, ಪ್ರಾಥಮಿಕ ಶಿಕ್ಷಣಕ್ಕೂ ವ್ಯವಸ್ಥೆಗೊಳಿಸಲಾಗಿತ್ತು. ಒಬ್ಬೊಬ್ಬ ಪಂಡಿತರೂ ಎಂಟು ಮಂದಿ ವಿದ್ಯಾರ್ಥಿಗಳಿಗೆ ಬೋಧಿಸುತ್ತಿದ್ದರೆಂದು ತಿಳಿದು ಬರುತ್ತದೆ.


ಅಗ್ರಹಾರ:

ಬ್ರಾಹ್ಮಣರಿಗೆ ದಾನವಾಗಿ ಕೊಡಲಾದ ಹಳ್ಳಿ ಅಥವಾ ಹಳ್ಳಿಯ ಭಾಗ. ಅದರ ಸಕಲಸ್ವಾಮ್ಯವೂ ಅಲ್ಲಿ ವಾಸಿಸುವ ಬ್ರಾಹ್ಮಣರಿಗೇ ಸೇರಿದುದು. ಅಗ್ರಹಾರಗಳಲ್ಲಿ ಬ್ರಾಹ್ಮಣರ ಜೊತೆಗೆ ಇತರ ಜಾತಿಯವರೂ ಇರುತ್ತಿದ್ದರೆಂದು ಕೆಲವು ವಿದ್ವಾಂಸರ ಅಭಿಪ್ರಾಯ. ಅಗ್ರಹಾರಗಳಲ್ಲಿ ವಾಸ ಮಾಡುವ ಜನಗಳಿಗೆ ಮಹಾಜನಗಳೆಂದು ಹೆಸರು. ಇವರೆಲ್ಲರೂ ಅಗ್ರಹಾರದ ಆಡಳಿತದ ವಿಷಯವನ್ನು ನೋಡಿಕೊಳ್ಳುತ್ತಿದ್ದರು. ಅಗ್ರಹಾರಗಳು ಸಾಮಾನ್ಯವಾಗಿ ಆಂಧ್ರ ಮತ್ತು ಕರ್ಣಾಟಕಗಳಲ್ಲಿ ವಿಶೇಷವಾಗಿದ್ದುವೆಂದು ಶಾಸನಗಳಿಂದ ತಿಳಿದುಬರುತ್ತದೆ. ಕರ್ನಾಟಕದಲ್ಲಿ ಅಗ್ರಹಾರಗಳು 5ನೆಯ ಶತಮಾನದಿಂದಲೇ ಕಂಡುಬಂದು ಹತ್ತೊಂಬತ್ತನೆಯ ಶತಮಾನದವರೆಗೂ ಕರ್ನಾಟಕ ಸಂಸ್ಕøತಿಯ ಬೆಳವಣಿಗೆಯಲ್ಲಿ ಸಹಾಯಕವಾಗಿದ್ದುವು. ಮುಖ್ಯವಾಗಿ ಇವು ವಿದ್ಯಾಭ್ಯಾಸದ ಬೆಳವಣಿಗೆಗೆ ಮಹತ್ತರವಾದ ಸಹಾಯ ಮಾಡಿವೆ. ಅಗ್ರಹಾರದ ಮಹಾಜನಗಳು ಯಮ, ನಿಯಮ, ಸ್ವಾಧ್ಯಾಯ, ಧ್ಯಾನ, ಧಾರಣ, ಮೌನ, ಅನುಷ್ಠಾನ, ಜಪ, ಸಮಾಧಿ ಮುಂತಾದುವುಗಳಲ್ಲಿ ನಿಷ್ಣಾತರಾಗಿ, ವಿದ್ಯಾರ್ಥಿಗಳಿಗೆ ಪಾಠಗಳನ್ನು ಬೋಧಿಸುತ್ತಿದ್ದರು. ತಿಳಿವಳ್ಳಿ ಅಗ್ರಹಾರದ ಮಹಾಜನಗಳು ನಾಲ್ಕು ವೇದಗಳು, ವೈಶೇಷಿಕೆ, ನ್ಯಾಯ, ಸಾಂಖ್ಯ, ಲೋಕಾಯತ, ಮೀಮಾಂಸ, ಬೌದ್ಧ, ಮತ್ತು ಜೈನಶಾಸ್ತ್ರಗಳನ್ನು ಬಲ್ಲವರಾಗಿಯೂ ತರ್ಕ, ವ್ಯಾಕರಣ, ಇತಿಹಾಸ, ಮಹಾಭಾರತ[೨], ಕಾಮಶಾಸ್ತ್ರ, ನಾಟಕ, ಗಣಿತ, ಮುಂತಾದ ವಿಷಯಗಳಲ್ಲಿ ಪರಿಣತರಾಗಿಯೂ ಇದ್ದರೆಂದು ತಿಳಿಯುತ್ತದೆ. ಪ್ರಾಚೀನ ಕರ್ನಾಟಕದಲ್ಲಿ ಬಳ್ಳಿಗಾವೆ, ತಿಳಿವಳ್ಳಿ, ಸಾಲೋತ್ತಗಿ, ಕಲಶ ಮುಂತಾದ ನೂರಾರು ಅಗ್ರಹಾರಗಳು ವಿದ್ಯಾಕೇಂದ್ರಗಳಾಗಿ ವಿಶ್ವವಿದ್ಯಾನಿಲಯಗಳ ಸ್ಥಾನಗಳಾಗಿದ್ದುವು. ಅಗ್ರಹಾರಗಳ ಮಹಾಜನಗಳು ಧಾರ್ಮಿಕ ಮತ್ತು ಜನೋಪಯೋಗಿ ಕಾರ್ಯಗಳಲ್ಲಿಯೂ ಸಾಕಷ್ಟು ಆಸಕ್ತಿಯನ್ನು ವಹಿಸುತ್ತಿದ್ದರು. ದೇವಾಲಯಗಳ ಆಡಳಿತ, ಕೆರೆಕಟ್ಟೆಗಳ ನಿರ್ಮಾಣ, ವಿಶೇಷ ಸಂದರ್ಭಗಳಲ್ಲಿ ನ್ಯಾಯನಿರ್ಣಯ ಮುಂತಾದ ಕೆಲಸಗಳನ್ನು ನೋಡಿಕೊಳ್ಳುತ್ತಿದ್ದರು. ಒಟ್ಟಿನಲ್ಲಿ ಅಗ್ರಹಾರಗಳು ಪ್ರಾಚೀನ ಕರ್ನಾಟಕದಲ್ಲಿ ಬಹು ಉಪಯುಕ್ತವಾದ ಮತ್ತು ಮಹತ್ತರವಾದ ಪಾತ್ರವನ್ನು ವಹಿಸಿದ್ದವೆಂದು ಹೇಳಬಹುದು.

ಕಣ್ಣೂರ ಅಗ್ರಹಾರ

ಪ್ರಾಚೀನ ಕಾಲದಲ್ಲಿ ಸಾಗರ ತಾಲೂಕಿನ ಕಣ್ಣೂರು ಶ್ರೀಮಂತ ಅಗ್ರಹಾರವಾಗಿತ್ತು. ಇಲ್ಲಿ ಸುಮಾರು ೨೫೦ ಕ್ಕೂ ಅಧಿಕ ಬ್ರಾಹ್ಮಣ ಕುಟುಬಂಗಳಿದ್ದು ಸುಮಾರು ೨೮೦೦ ಜನ ಸಂಖ್ಯೆ ಹೊಂದಿತ್ತು ಎನ್ನಲಾಗಿದೆ. ಶ್ರೀಕಣ್ವೇಶ್ವರ ಮತ್ತು ಶ್ರೀಬನಶಂಕರಿ ದೇವಾಲಯಕ್ಕೆ ೮೦ ಎಕರೆ ವಿಸ್ತೀರ್ಣದ ಸಾಗುವಳಿ ಜಮೀನನ್ನು ದಾನ ನೀಡಲಾಗಿತ್ತು. ಪ್ರತಿ ವರ್ಷ ೩೦೦ ಚೀಲ ಭತ್ತ ದಾನವಾಗಿ ಬರುತ್ತಿತ್ತು.

ತಾಳಗುಂದ

ತಾಳಗುಂದ ಗ್ರಾಮವು ಕರ್ನಾಟಕದ ಅತ್ಯಂತ ಪ್ರಾಚೀನ ಅಗ್ರಹಾರವಾಗಿದ್ದು, ಈ ಅಗ್ರಹಾರದಲ್ಲಿಯೇ ಕನ್ನಡದ ಮೊದಲ ರಾಜವಂಶ ಎಂದು ಹೇಳಲ್ಪಡುವ ಕದಂಬ ವಂಶಸ್ಥನಾದ ಮಯೂರವರ್ಮನು ಜನಿಸಿ ಇಲ್ಲಿಯೇ ಬೆಳೆಯುತ್ತಾನೆ. ಇತ್ತೀಚಿಗೆ ಇಲ್ಲಿ ದೊರೆತಿರುವ ಸಿಂಹತಟಾಂಜನ ಶಾಸನವು ಕನ್ನಡದ ಹಲ್ಮಿಡಿ ಶಾಸನಕ್ಕಿಂತ ಹಿಂದಿನ ಅವಧಿಯ ಶಾಸನ ಎಂದು ಕೇಂದ್ರ ಪುರಾತತ್ವ ಇಲಾಖೆ ತಿಳಿಸಿದೆ. ಹಾಗೆಯೇ ಕರ್ನಾಟಕದಲ್ಲಿ ದೊರೆತ ಮೊದಲ ಸಂಸ್ಕೃತ ಶಾಸನ ಇಲ್ಲಿಯೇ ಸಿಕ್ಕಿರುವುದು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಭಾರತದ ರಾಷ್ಟ್ರೀಯ ಹಬ್ಬಗಳು

ಭಾರತದ ರಾಷ್ಟ್ರೀಯ ಹಬ್ಬಗಳು.Indian National Festivals ಭಾರತದ ರಾಷ್ಟ್ರೀಯ ಹಬ್ಬಗಳು ನಮ್ಮ ಭಾರತ ದೇಶವು ಜಾತ್ಯತೀತ ದೇಶವಾಗಿದೆ, ಇಲ್ಲಿ ಎಲ್ಲಾ ಜಾತಿ ಧರ್ಮದ ಜನರು ಎಲ್ಲಾ ಟೀಜ್ ಹಬ್ಬವನ್ನು ಬಹಳ ಆಡಂಬರದಿಂದ ಆಚರಿಸುತ್ತಾರೆ. ರಾಖಿ, ದೀಪಾವಳಿ, ದಸರಾ, ಈದ್, ಕ್ರಿಸ್‌ಮಸ್ ಮತ್ತು ಅನೇಕ ಜನರು ಒಟ್ಟಾಗಿ ಹಬ್ಬವನ್ನು ಆಚರಿಸುತ್ತಾರೆ. ಭಾರತದ ದೇಶದಲ್ಲಿ ಹಬ್ಬಗಳಿಗೆ ಕೊರತೆಯಿಲ್ಲ, ಧರ್ಮದ ಪ್ರಕಾರ ವಿಭಿನ್ನ ಹಬ್ಬಗಳಿವೆ. ಆದರೆ ಅಂತಹ ಕೆಲವು ಹಬ್ಬಗಳಿವೆ, ಅವು ಯಾವುದೇ ಜಾತಿಯವರಲ್ಲ, ಆದರೆ ನಮ್ಮ ರಾಷ್ಟ್ರವನ್ನು ನಾವು ರಾಷ್ಟ್ರೀಯ ಹಬ್ಬ ಎಂದು ಕರೆಯುತ್ತೇವೆ. ಭಾರತದ ರಾಷ್ಟ್ರೀಯ ಹಬ್ಬ. (Indian national festivals in Kannada ). 1947 ರಿಂದ ದೇಶದ ಸ್ವಾತಂತ್ರ್ಯದ ನಂತರ, ಈ ರಾಷ್ಟ್ರೀಯ ಹಬ್ಬಗಳು ನಮ್ಮ ಜೀವನದ ಭಾಗವಾದವು, ಅಂದಿನಿಂದ ನಾವು ಅವರನ್ನು ಬಹಳ ಉತ್ಸಾಹದಿಂದ ಆಚರಿಸುತ್ತೇವೆ. ಈ ಹಬ್ಬವು ನಮ್ಮ ರಾಷ್ಟ್ರೀಯ ಏಕತೆಯನ್ನು ತೋರಿಸುತ್ತದೆ. ಭಾರತದ ಪ್ರಮುಖ ರಾಷ್ಟ್ರೀಯ ಹಬ್ಬಗಳು – 1. ಸ್ವಾತಂತ್ರ್ಯ ದಿನ15 ಆಗಸ್ಟ್ 2. ಗಣರಾಜ್ಯೋತ್ಸವ 26 ಜನವರಿ 3. ಗಾಂಧಿ ಜಯಂತಿ 2 ಅಕ್ಟೋಬರ್ ಇದು ರಾಷ್ಟ್ರೀಯ ಹಬ್ಬ, ಇದು ರಾಷ್ಟ್ರೀಯ ರಜಾದಿನವೂ ಆಗಿದೆ. ಇದಲ್ಲದೆ, ಶಿಕ್ಷಕರ ದಿನ, ಮಕ್ಕಳ ದಿನವೂ ರಾಷ್ಟ್ರೀಯ ರಜಾದಿನವಾಗಿದೆ, ಇವುಗಳನ್ನು ನಮ್ಮ ದೇಶದ ಮಹಾನ್ ಸ್ವಾತಂತ್ರ್ಯ ಹೋರಾಟದ ನೆನಪಿಗಾಗಿ ಆಚರಿಸಲಾಗುತ್ತದೆ. ಇದಲ

ಭಾರತೀಯ ಸಂಸ್ಕೃತಿಯ ಲಕ್ಷಣಗಳು (Characteristics of Indian Culture)

1.1 ಭಾರತೀಯ ಸಂಸ್ಕೃತಿಯ ಲಕ್ಷಣಗಳು (Characteristics of Indian Culture) ಭಾರತದ ಸಾಂಸ್ಕೃತಿಕ ಪರಂಪರೆಯು ವಿಶಾಲವಾದ ವ್ಯಾಪ್ತಿಯನ್ನು ಹೊಂದಿದೆ. ಮಾನವನ ಉಗಮದೊಂದಿಗೆ ಉಗಮವಾಗಿ ಬೆಳೆದು ಸಾಗಿ ಬಂದ ಪರಂಪರೆಯು ಅವನ ಜೀವನ ಮೌಲ್ಯಗಳು, ವಸತಿ ರಕ್ಷಣೆ, ಆಹಾರ, ವಿಹಾರ, ಉಡುಗೆ-ತೊಡುಗೆ, ಮನರಂಜನೆ, ವ್ಯಾಪಾರ, ವಾಣಿಜ್ಯ, ಸಂಗೀತ, ಕಲೆ, ವಾಸ್ತುಶಿಲ್ಪ, ಚಿತ್ರಕಲೆ, ಶಿಕ್ಷಣ, ಧರ್ಮಗಳು, ರೂಢಿ-ಸಂಪ್ರದಾಯಗಳು, ಭಾಷೆ, ನಟನೆ, ನಂಬಿಕೆ, ನೃತ್ಯ, ಆಚರಣೆ, ಹವ್ಯಾಸ, ಸಾಹಿತ್ಯ, ವಿಧಿ-ವಿಧಾನಗಳನ್ನು ಒಳಗೊಂಡಿದೆ. ಈ ಅಂಶಗಳಲ್ಲಿ ಕೆಲವು ಕಾಲಕ್ಕೆ ತಕ್ಕಂತೆ ಮತ್ತು ಪ್ರಾದೇಶಿಕವಾಗಿ ಭಿನ್ನತೆ ಹಾಗೂ ಬದಲಾವಣೆಗೊಂಡಿದ್ದರೂ ನಿರಂತರವಾಗಿ ಸಾಗಿ ಬಂದಿವೆ. ಅವುಗಳ ಗುಣ ಲಕ್ಷಣಗಳು ಈ ಕೆಳಗಿನಂತಿವೆ: 1. ಸಾಂಪ್ರದಾಯಕ ಜೀವನ ವಿಧಾನ: ಭಾರತೀಯರ ಜೀವನ ವಿಧಾನ ಪಾರಂಪರಗತವಾಗಿ ಪೂರ್ವಜರಿಂದ ಸಾಗಿ ಬಂದಿದೆ. ಪಾರಂಪರಗತವಾಗಿ ಭಾರತೀಯರದು ಕೃಷಿ ಪ್ರಧಾನವಾದ ಜೀವನ ವಿಧಾನವಾಗಿದ್ದು, ಭೂಮಿಯನ್ನು 'ಭೂದೇವಿ' ಎಂದು ಆರಾಧಿಸುತ್ತಾರೆ. ಭೂಮಿಯನ್ನು ಹಸನಗೊಳಿಸಿ, ಹದ ಮಾಡಿ, ಉತ್ತಿ-ಬಿತ್ತುವ ಪೂರ್ವದಲ್ಲಿ ಭೂದೇವಿಗೆ ಪೂಜೆ ಸಲ್ಲಿಸುವ ಮೂಲಕ ಕೃಷಿ ಕಾಯಕವನ್ನು ಪ್ರಾರಂಭಿಸುತ್ತಾರೆ. ಕಾಲಕಾಲಕ್ಕೆ ಮಳೆಯಾಗಿ, ಸಮೃದ್ಧವಾದ ಬೆಳೆಯನ್ನು ಕೊಡುವ ಮೂಲಕ ನಿನ್ನ ಮಕ್ಕಳನ್ನು ಸಲಹು ತಾಯಿ ಎಂದು ಬೇಡಿಕೊಳ್ಳುತ್ತಾರೆ. ಕೃಷಿ ಸಲಕರಣಗಳಲ್ಲಿ, ಬಿತ್ತುವ ಬೀಜಗಳಲ್

DSC-2 ಭಾರತದ ಸಾಂಸ್ಕೃತಿಕ ಪರಂಪರೆ::ಪೌರಾಣಿಕ ಐತಿಹ್ಯಗಳು: ಮಹಾಭಾರತ ಮತ್ತು ರಾಮಾಯಣ, ಪಂಚತಂತ್ರ

ಐತಿಹ್ಯ ಗಳು: ಇಂಗ್ಲೀಷಿನ Legend ಎಂಬ ಪದಕ್ಕೆ ಸಮನಾಗಿ ಇಂದು ನಾವು ‘ಐತಿಹ್ಯ’ ಎಂಬುದನ್ನು ಪ್ರಯೋಗಿಸುತ್ತಿದ್ದೇವೆ. ಜಾನಪದ ಶಾಸ್ತ್ರವಾಗಿ ಬೆಳೆಯುವುದಕ್ಕಿಂತ ಹಿಂದಿನಿಂದಲೇ ‘ಐತಿಹ್ಯ’ ಎಂಬ ಶಬ್ದಪ್ರಯೋಗ ನಮ್ಮಲ್ಲಿ ತಕ್ಕಷ್ಟು ರೂಢವಾಗಿದೆ. ಸಾಮಾನ್ಯರು ಇತಿಹಾಸವೆಂದು ನಂಬಿಕೊಂಡು ಬಂದ ಘಟನೆ ಅಥವಾ ಕಥನವೆಂಬ ಅರ್ಥದಲ್ಲಿ ಅದು ಪ್ರಯೋಗಗೊಳ್ಳುತ್ತಿದ್ದುದನ್ನು ನಾವು ಆಗೀಗ ಕಾಣುತ್ತೇವೆ. ಜಾನಪದ ಶಾಸ್ತ್ರವಾಗಿ ಬೆಳೆಯುತ್ತ ಬಂದದ್ದರಿಂದ ಅದೊಂದು ನಿಶ್ಚಿತ ಪರಿಕಲ್ಪನೆಯಾಯಿತೆಂದು ಹೇಳಬೇಕಾಗುತ್ತದೆ. ಐತಿಹ್ಯದ ಮೂಲವಾದ `Legend’ ಎಂಬ ಪದ ಮಧ್ಯಕಾಲೀನ ಲ್ಯಾಟಿನ್ನಿನ ಲೆಜಂಡಾ (Legenda) ಎಂಬ ರೂಪದಿಂದ ನಿಷ್ಪನ್ನವಾದುದು. ಇದರರ್ಥ ಪಠಿಸಬಹುದಾದದ್ದು, ಎಂದು”.ಇದಕ್ಕೆ ಯುರೋಪಿನಲ್ಲಿ ಸಾಧುಸಂತರ ಕಥೆಗಳು ಎಂಬಂಥ ಅರ್ಥಗಳು ಮೊದಲಲ್ಲಿ ಪ್ರಚಲಿತವಿದ್ದುದಾಗಿ ತಿಳಿದು ಬರುತ್ತದೆ.“ಲೆಜೆಂಡಾ” ಅಥವಾ “ಐತಿಹ್ಯ” ವೆಂಬುದು ಈ ಅರ್ಥಗಳಿಂದ ಸಾಕಷ್ಟು ದೂರ ಸರಿದಿದೆಯೆಂದು ಬೇರೆ ಹೇಳಬೇಕಾಗಿಲ್ಲ. ಐತಿಹ್ಯವೆಂದರೆ ಈಗ ವ್ಯಕ್ತಿ, ಸ್ಥಳ ಅಥವಾ ಘಟನೆಯೊಂದರ ಸುತ್ತ ಸಾಂಪ್ರದಾಯಿಕವಾಗಿ ಮತ್ತು ಯಾವುಯಾವುವೋ ಮೂಲ ಸಂಗತಿಗಳ ಮೇಲೆ ಆಧರಿತವಾಗಿ ಬಂದ ಕಥನ ಎಂದು ಸಾಮಾನ್ಯವಾದ ಅರ್ಥ ಪಡೆದುಕೊಂಡಿದೆ. “ಐತಿಹ್ಯ” ಕೆಲವು ವೇಳೆ ಸತ್ಯ ಘಟನೆಯೊಂದರಿಂದಲೇ ಹುಟ್ಟಿಕೊಂಡಿರಬಹುದು; ಎಂದರೆ, ಅದು ನಿಜವಾದ ಚರಿತ್ರೆಯನ್ನೊಳಗೊಂಡಿರಬಹುದು. ಆದರೆ ಯಾವತ್ತೂ ಅದರಲ್ಲಿ ಚರಿತ್ರೆಯೇ ಇರುತ