ವಿಷಯಕ್ಕೆ ಹೋಗಿ

ಬೆಳಗಾವಿಯ ರಾಜಹಂಸಗಡ ಕೋಟೆ

ರಾಜಹಂಸಗಡ ಕೋಟೆ

ಬೆಳಗಾವಿ ಭಾಗ ಕೋಟೆ–ಕೊತ್ತಲಗಳಿಗೆ ಹೆಸರುವಾಸಿ. ಇವುಗಳ ಪೈಕಿ ಬೆಳಗಾವಿ ನಗರದಿಂದ 15 ಕಿ.ಮೀ. ದೂರದಲ್ಲಿರುವ ರಾಜಹಂಸಗಡ ಕೋಟೆ ಗಮನಸೆಳೆಯುತ್ತದೆ. ಎತ್ತರದ ಗುಡ್ಡದಂತಹ ಪ್ರದೇಶದಲ್ಲಿರುವುದು ಇದರ ವಿಶೇಷ.

1674ರಲ್ಲಿ ಮರಾಠರಿಂದ ನಿರ್ಮಾಣವಾದ ಕೋಟೆ ಇದು. ಅಲ್ಲಿರುವ ಬಾವಿಯಲ್ಲಿ ವರ್ಷವಿಡೀ ನೀರು ತುಂಬಿರುತ್ತದೆ. ಇದೊಂದು ವಿಶೇಷ. ವೀಕ್ಷಣಾ ಗೋಪುರ. ಗಟ್ಟಿಮುಟ್ಟಾದ ಗೋಡೆಗಳಿದ್ದು, ಹಿಂದಿನ ಕಾಲದ ವಿಶೇಷ ನಿರ್ಮಾಣ ಕೌಶಲಕ್ಕೆ ಕನ್ನಡಿ ಹಿಡಿದಿದೆ. ‘ಬೆಳಗಾವಿ ನಗರದಲ್ಲಿರುವ ಕೋಟೆ ರಕ್ಷಣೆಗಾಗಿ ಈ ಕೋಟೆಯನ್ನು ನಿರ್ಮಿಸಲಾಗಿತ್ತು. ಶತ್ರುಗಳ ಚಲನ–ವಲನದ ಮೇಲೆ ಇಲ್ಲಿಂದ ನಿಗಾ ಇಡಲಾಗುತ್ತಿತ್ತು’ ಎನ್ನುತ್ತದೆ ಇತಿಹಾಸ.

ಬೆಟ್ಟದ ತುದಿಯಲ್ಲಿರುವ ಈ ಕೋಟೆಯನ್ನು ವಿಶೇಷ ವಿನ್ಯಾಸದಲ್ಲಿ ಕಟ್ಟಲಾಗಿದೆ. ಬೇರೆ ಕೋಟೆಗಳಿಗಿಂತ ಭಿನ್ನ. ಕೋಟೆಯ ಆಕಾರ ಗೋವಿನ ಮುಖದಂತಿದೆ. ಮುಖ್ಯದ್ವಾರ ಎರಡು ಗುಮ್ಮಟಗಳ ನಡುವಿದೆ. ಇದು ಹೊರಗೆ ಕಾಣುವುದಿಲ್ಲ. ಶತ್ರುಗಳಿಗೆ ತಕ್ಷಣ ಕೋಟೆ ಕಾಣಬಾರದೆಂದೇ ಈ ರೀತಿ ನಿರ್ಮಿಸಲಾಗಿತ್ತು ಎನ್ನಲಾಗುತ್ತದೆ. ಅಲ್ಲದೆ, ಆನೆಗಳ ಸಹಾಯದಿಂದ ದ್ವಾರದ ಬಾಗಿಲನ್ನು ತೆಗೆಸುವುದಕ್ಕೆ ಆಗುವುದಿಲ್ಲ. ಕಾರಣ, ಪ್ರವೇಶದ್ವಾರದಲ್ಲಿ ಗುಮ್ಮಟಗಳ ಮಧ್ಯೆ ಆನೆ ನಿಲ್ಲುವಷ್ಟು ಸ್ಥಳಾವಕಾಶ ಇಲ್ಲ.

‘ಛತ್ರ‍ಪತಿ ಶಿವಾಜಿ ಮಹಾರಾಜರು ನಿರ್ಮಿಸಿದ ಪ್ರತಿ ಕೋಟೆಗಳಿಗೆ ಮುಖ್ಯದ್ವಾರ ಮಾತ್ರವಲ್ಲದೇ, 1ರಿಂದ 3 ರಹಸ್ಯ ಮಾರ್ಗಗಳಿರುತ್ತವೆ. ಇವು ಅಷ್ಟು ಸುಲಭವಾಗಿ ಕಾಣಿಸದಂತೆ ಮುಚ್ಚಿರುತ್ತಿದ್ದವಂತೆ. ಶತ್ರುಗಳ ಆಕ್ರಮಣದಿಂದ ತಪ್ಪಿಸಿಕೊಳ್ಳಲು, ದವಸ–ಧಾನ್ಯಗಳನ್ನು ತರಲು ಇವುಗಳನ್ನು ಉಪಯೋಗಿಸುತ್ತಿದ್ದರು’ ಎಂದು ಫಲಕ ಹಾಕಲಾಗಿದೆ. ಒಂದು ಬದಿಯ ರಹಸ್ಯ ದಾರಿ ಬೆಳಗಾವಿಯ ಕೋಟೆ ಆವರಣದಲ್ಲಿರುವ ದುರ್ಗಾದೇವಸ್ಥಾನ ಸಂಪರ್ಕಿಸುತ್ತಿತ್ತು ಎಂದು ಹಿರಿಯರು ಹೇಳುತ್ತಾರೆ. ಆದರೆ, ಈಗ ಅದನ್ನು ಮುಚ್ಚಲಾಗಿದೆ.

ಈ ಮೊದಲು ಕೋಟೆಗೆ ಹೋಗಲು ಸರಿಯಾದ ರಸ್ತೆ ಇರಲಿಲ್ಲ. ಈಗ ಡಾಂಬರು ರಸ್ತೆಯಾಗಿದೆ. ಅಲ್ಲಿವರೆಗೂ ಬಸ್‌ ವ್ಯವಸ್ಥೆ ಇಲ್ಲ. ಸ್ವಂತ ವಾಹನದಲ್ಲಿ ಹೋಗುವುದು ಒಳ್ಳೆಯದು. 2017ರಲ್ಲಿ ಸಂಜಯ ಪಾಟೀಲ ಶಾಸಕರಾಗಿದ್ದಾಗ ಶಾಸಕರ ಅನುದಾನದಲ್ಲಿ ಕೋಟೆ ಆವರಣದಲ್ಲಿ ಸಿದ್ದೇಶ್ವರ ದೇವಸ್ಥಾನ ನಿರ್ಮಿಸಿ, ಧಾರ್ಮಿಕ ಸ್ಪರ್ಶ ನೀಡಲಾಗಿದೆ.

ಕೋಟೆಯೊಂದಿಗೆ ದೇವಸ್ಥಾನ ವೀಕ್ಷಣೆ ಬೋನಸ್. ಇಲ್ಲಿಗೆ ಬಂದರೆ ದೇವರ ಪೂಜೆ; ಸ್ವಕಾರ್ಯ ಎರಡೂ ಆಗುತ್ತದೆ.

‌ನಿತ್ಯ ಇಲ್ಲಿಗೆ ನೂರಾರು ಮಂದಿ ಬರುತ್ತಾರೆ. ವಿಶೇಷವಾಗಿ ಕಾಲೇಜು ಯುವಕ, ಯುವತಿಯರ, ಪ್ರೇಮಿಗಳ ಅಚ್ಚುಮೆಚ್ಚಿನ ತಾಣವಾಗಿದೆ. ಅವರು ಸೆಲ್ಫಿ ತೆಗೆದುಕೊಳ್ಳುತ್ತಾ, ಹರಟುತ್ತಾ ಕಾಲ ಕಳೆಯುತ್ತಾರೆ. ವಿಶೇಷವಾಗಿ ಛಾಯಾಗ್ರಾಹಕರಿಗೆ ಇದೊಂದು ರೀತಿ ಬಯಲು ಸ್ಟುಡಿಯೋ ಇದ್ದಂತೆ.

ಯುವಜನರಷ್ಟೇ ಅಲ್ಲ, ಕುಟುಂಬ ಸಮೇತ ಇಲ್ಲಿಗೆ ಬರುವವರೂ ಉಂಟು. ಬುತ್ತಿ ತಂದು ಅಲ್ಲಿಯೇ ಉಂಡು ಹೋಗುತ್ತಾರೆ. ಸುತ್ತಮುತ್ತಲಿನ ಕೆಲವರು ಅಲ್ಲಿಗೆ ಬೆಳಗಿನ ವಾಯುವಿಹಾರ (ಜಾಗಿಂಗ್‌) ಮಾಡಲು ಬರುತ್ತಾರೆ.

ಪ್ರತಿ ದಿನ 300 ರಿಂದ 400 ಪ್ರವಾಸಿಗರು ಭೇಟಿ ನೀಡುತ್ತಾರೆ. ವಾರಾಂತ್ಯದ ದಿನಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚು. ಸೋಮವಾರ ಬರುವವರು ಸಿದ್ದೇಶ್ವರ ದೇವಸ್ಥಾನದ ಭಕ್ತರು ಹೆಚ್ಚು.ಕರ್ನಾಟಕವಲ್ಲದೇ, ಮಹಾರಾಷ್ಟ್ರ, ಗೋವಾದಿಂದಲೂ ಪ್ರವಾಸಿಗರೂ ಇಲ್ಲಿಗೆ ಬರುತ್ತಾರೆ. ಕೋಟೆ ಏರಿ ಸಂಭ್ರಮಿಸುತ್ತಾರೆ.

ವಡಗಾವಿಯ ಛತ್ರಪತಿ ಸಂಭಾಜಿ ಮಹಾರಾಜ ಸೇವಾ ಸಂಘದದವರು ಅಗಾಗ ಸ್ವಚ್ಛತಾ ಕಾರ್ಯ ಕೈಗೊಳ್ಳುತ್ತಾರೆ. ನಿರ್ಲಕ್ಷಕ್ಕೆ ಒಳಗಾಗಿದ್ದ ಈ ಪಾರಂಪರಿಕ ತಾಣವನ್ನು ಇತ್ತೀಚೆಗೆ ಕೊಂಚ ಅಭಿವೃದ್ಧಿಪಡಿಸಲಾಗಿದೆ.‌ ಮತ್ತಷ್ಟು ಆಕರ್ಷಕಗೊಳಿಸುವುದಕ್ಕೂ ಅವಕಾಶವಿದೆ. ಪ್ರವಾಸೋದ್ಯಮ ಅಥವಾ ಪಾರಂಪರಿಕ ಇಲಾಖೆಯವರು ಇತ್ತ ಗಮನಹರಿಸಿದರೆ ಹೆಚ್ಚಿನ ಪ್ರವಾಸಿಗರನ್ನು ಸೆಳೆಯಲು ಬಹಳಷ್ಟು ಅವಕಾಶವಿದೆ.
ಕೋಟೆಯನ್ನು ಯಾವಾಗ, ಯಾರು ನಿರ್ಮಿಸಿದರು ಎನ್ನುವ ನಿಖರ ಮಾಹಿತಿ ಇಲ್ಲ. ಆದರೆ, ಶಿವಾಜಿ ಮಹಾರಾಜರು ಆಗಾಗ ಕೋಟೆಗೆ ಬಂದು ರಹಸ್ಯ ಸಭೆ ನಡೆಸುತ್ತಿದ್ದರು ಎನ್ನುತ್ತಾರೆ ಹಿರಿಯರು.

ಕೃಪೆ: ಪ್ರಜಾವಾಣಿ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಭಾರತದ ರಾಷ್ಟ್ರೀಯ ಹಬ್ಬಗಳು

ಭಾರತದ ರಾಷ್ಟ್ರೀಯ ಹಬ್ಬಗಳು.Indian National Festivals ಭಾರತದ ರಾಷ್ಟ್ರೀಯ ಹಬ್ಬಗಳು ನಮ್ಮ ಭಾರತ ದೇಶವು ಜಾತ್ಯತೀತ ದೇಶವಾಗಿದೆ, ಇಲ್ಲಿ ಎಲ್ಲಾ ಜಾತಿ ಧರ್ಮದ ಜನರು ಎಲ್ಲಾ ಟೀಜ್ ಹಬ್ಬವನ್ನು ಬಹಳ ಆಡಂಬರದಿಂದ ಆಚರಿಸುತ್ತಾರೆ. ರಾಖಿ, ದೀಪಾವಳಿ, ದಸರಾ, ಈದ್, ಕ್ರಿಸ್‌ಮಸ್ ಮತ್ತು ಅನೇಕ ಜನರು ಒಟ್ಟಾಗಿ ಹಬ್ಬವನ್ನು ಆಚರಿಸುತ್ತಾರೆ. ಭಾರತದ ದೇಶದಲ್ಲಿ ಹಬ್ಬಗಳಿಗೆ ಕೊರತೆಯಿಲ್ಲ, ಧರ್ಮದ ಪ್ರಕಾರ ವಿಭಿನ್ನ ಹಬ್ಬಗಳಿವೆ. ಆದರೆ ಅಂತಹ ಕೆಲವು ಹಬ್ಬಗಳಿವೆ, ಅವು ಯಾವುದೇ ಜಾತಿಯವರಲ್ಲ, ಆದರೆ ನಮ್ಮ ರಾಷ್ಟ್ರವನ್ನು ನಾವು ರಾಷ್ಟ್ರೀಯ ಹಬ್ಬ ಎಂದು ಕರೆಯುತ್ತೇವೆ. ಭಾರತದ ರಾಷ್ಟ್ರೀಯ ಹಬ್ಬ. (Indian national festivals in Kannada ). 1947 ರಿಂದ ದೇಶದ ಸ್ವಾತಂತ್ರ್ಯದ ನಂತರ, ಈ ರಾಷ್ಟ್ರೀಯ ಹಬ್ಬಗಳು ನಮ್ಮ ಜೀವನದ ಭಾಗವಾದವು, ಅಂದಿನಿಂದ ನಾವು ಅವರನ್ನು ಬಹಳ ಉತ್ಸಾಹದಿಂದ ಆಚರಿಸುತ್ತೇವೆ. ಈ ಹಬ್ಬವು ನಮ್ಮ ರಾಷ್ಟ್ರೀಯ ಏಕತೆಯನ್ನು ತೋರಿಸುತ್ತದೆ. ಭಾರತದ ಪ್ರಮುಖ ರಾಷ್ಟ್ರೀಯ ಹಬ್ಬಗಳು – 1. ಸ್ವಾತಂತ್ರ್ಯ ದಿನ15 ಆಗಸ್ಟ್ 2. ಗಣರಾಜ್ಯೋತ್ಸವ 26 ಜನವರಿ 3. ಗಾಂಧಿ ಜಯಂತಿ 2 ಅಕ್ಟೋಬರ್ ಇದು ರಾಷ್ಟ್ರೀಯ ಹಬ್ಬ, ಇದು ರಾಷ್ಟ್ರೀಯ ರಜಾದಿನವೂ ಆಗಿದೆ. ಇದಲ್ಲದೆ, ಶಿಕ್ಷಕರ ದಿನ, ಮಕ್ಕಳ ದಿನವೂ ರಾಷ್ಟ್ರೀಯ ರಜಾದಿನವಾಗಿದೆ, ಇವುಗಳನ್ನು ನಮ್ಮ ದೇಶದ ಮಹಾನ್ ಸ್ವಾತಂತ್ರ್ಯ ಹೋರಾಟದ ನೆನಪಿಗಾಗಿ ಆಚರಿಸಲಾಗುತ್ತದೆ. ಇದಲ

ಭಾರತೀಯ ಸಂಸ್ಕೃತಿಯ ಲಕ್ಷಣಗಳು (Characteristics of Indian Culture)

1.1 ಭಾರತೀಯ ಸಂಸ್ಕೃತಿಯ ಲಕ್ಷಣಗಳು (Characteristics of Indian Culture) ಭಾರತದ ಸಾಂಸ್ಕೃತಿಕ ಪರಂಪರೆಯು ವಿಶಾಲವಾದ ವ್ಯಾಪ್ತಿಯನ್ನು ಹೊಂದಿದೆ. ಮಾನವನ ಉಗಮದೊಂದಿಗೆ ಉಗಮವಾಗಿ ಬೆಳೆದು ಸಾಗಿ ಬಂದ ಪರಂಪರೆಯು ಅವನ ಜೀವನ ಮೌಲ್ಯಗಳು, ವಸತಿ ರಕ್ಷಣೆ, ಆಹಾರ, ವಿಹಾರ, ಉಡುಗೆ-ತೊಡುಗೆ, ಮನರಂಜನೆ, ವ್ಯಾಪಾರ, ವಾಣಿಜ್ಯ, ಸಂಗೀತ, ಕಲೆ, ವಾಸ್ತುಶಿಲ್ಪ, ಚಿತ್ರಕಲೆ, ಶಿಕ್ಷಣ, ಧರ್ಮಗಳು, ರೂಢಿ-ಸಂಪ್ರದಾಯಗಳು, ಭಾಷೆ, ನಟನೆ, ನಂಬಿಕೆ, ನೃತ್ಯ, ಆಚರಣೆ, ಹವ್ಯಾಸ, ಸಾಹಿತ್ಯ, ವಿಧಿ-ವಿಧಾನಗಳನ್ನು ಒಳಗೊಂಡಿದೆ. ಈ ಅಂಶಗಳಲ್ಲಿ ಕೆಲವು ಕಾಲಕ್ಕೆ ತಕ್ಕಂತೆ ಮತ್ತು ಪ್ರಾದೇಶಿಕವಾಗಿ ಭಿನ್ನತೆ ಹಾಗೂ ಬದಲಾವಣೆಗೊಂಡಿದ್ದರೂ ನಿರಂತರವಾಗಿ ಸಾಗಿ ಬಂದಿವೆ. ಅವುಗಳ ಗುಣ ಲಕ್ಷಣಗಳು ಈ ಕೆಳಗಿನಂತಿವೆ: 1. ಸಾಂಪ್ರದಾಯಕ ಜೀವನ ವಿಧಾನ: ಭಾರತೀಯರ ಜೀವನ ವಿಧಾನ ಪಾರಂಪರಗತವಾಗಿ ಪೂರ್ವಜರಿಂದ ಸಾಗಿ ಬಂದಿದೆ. ಪಾರಂಪರಗತವಾಗಿ ಭಾರತೀಯರದು ಕೃಷಿ ಪ್ರಧಾನವಾದ ಜೀವನ ವಿಧಾನವಾಗಿದ್ದು, ಭೂಮಿಯನ್ನು 'ಭೂದೇವಿ' ಎಂದು ಆರಾಧಿಸುತ್ತಾರೆ. ಭೂಮಿಯನ್ನು ಹಸನಗೊಳಿಸಿ, ಹದ ಮಾಡಿ, ಉತ್ತಿ-ಬಿತ್ತುವ ಪೂರ್ವದಲ್ಲಿ ಭೂದೇವಿಗೆ ಪೂಜೆ ಸಲ್ಲಿಸುವ ಮೂಲಕ ಕೃಷಿ ಕಾಯಕವನ್ನು ಪ್ರಾರಂಭಿಸುತ್ತಾರೆ. ಕಾಲಕಾಲಕ್ಕೆ ಮಳೆಯಾಗಿ, ಸಮೃದ್ಧವಾದ ಬೆಳೆಯನ್ನು ಕೊಡುವ ಮೂಲಕ ನಿನ್ನ ಮಕ್ಕಳನ್ನು ಸಲಹು ತಾಯಿ ಎಂದು ಬೇಡಿಕೊಳ್ಳುತ್ತಾರೆ. ಕೃಷಿ ಸಲಕರಣಗಳಲ್ಲಿ, ಬಿತ್ತುವ ಬೀಜಗಳಲ್

DSC-2 ಭಾರತದ ಸಾಂಸ್ಕೃತಿಕ ಪರಂಪರೆ::ಪೌರಾಣಿಕ ಐತಿಹ್ಯಗಳು: ಮಹಾಭಾರತ ಮತ್ತು ರಾಮಾಯಣ, ಪಂಚತಂತ್ರ

ಐತಿಹ್ಯ ಗಳು: ಇಂಗ್ಲೀಷಿನ Legend ಎಂಬ ಪದಕ್ಕೆ ಸಮನಾಗಿ ಇಂದು ನಾವು ‘ಐತಿಹ್ಯ’ ಎಂಬುದನ್ನು ಪ್ರಯೋಗಿಸುತ್ತಿದ್ದೇವೆ. ಜಾನಪದ ಶಾಸ್ತ್ರವಾಗಿ ಬೆಳೆಯುವುದಕ್ಕಿಂತ ಹಿಂದಿನಿಂದಲೇ ‘ಐತಿಹ್ಯ’ ಎಂಬ ಶಬ್ದಪ್ರಯೋಗ ನಮ್ಮಲ್ಲಿ ತಕ್ಕಷ್ಟು ರೂಢವಾಗಿದೆ. ಸಾಮಾನ್ಯರು ಇತಿಹಾಸವೆಂದು ನಂಬಿಕೊಂಡು ಬಂದ ಘಟನೆ ಅಥವಾ ಕಥನವೆಂಬ ಅರ್ಥದಲ್ಲಿ ಅದು ಪ್ರಯೋಗಗೊಳ್ಳುತ್ತಿದ್ದುದನ್ನು ನಾವು ಆಗೀಗ ಕಾಣುತ್ತೇವೆ. ಜಾನಪದ ಶಾಸ್ತ್ರವಾಗಿ ಬೆಳೆಯುತ್ತ ಬಂದದ್ದರಿಂದ ಅದೊಂದು ನಿಶ್ಚಿತ ಪರಿಕಲ್ಪನೆಯಾಯಿತೆಂದು ಹೇಳಬೇಕಾಗುತ್ತದೆ. ಐತಿಹ್ಯದ ಮೂಲವಾದ `Legend’ ಎಂಬ ಪದ ಮಧ್ಯಕಾಲೀನ ಲ್ಯಾಟಿನ್ನಿನ ಲೆಜಂಡಾ (Legenda) ಎಂಬ ರೂಪದಿಂದ ನಿಷ್ಪನ್ನವಾದುದು. ಇದರರ್ಥ ಪಠಿಸಬಹುದಾದದ್ದು, ಎಂದು”.ಇದಕ್ಕೆ ಯುರೋಪಿನಲ್ಲಿ ಸಾಧುಸಂತರ ಕಥೆಗಳು ಎಂಬಂಥ ಅರ್ಥಗಳು ಮೊದಲಲ್ಲಿ ಪ್ರಚಲಿತವಿದ್ದುದಾಗಿ ತಿಳಿದು ಬರುತ್ತದೆ.“ಲೆಜೆಂಡಾ” ಅಥವಾ “ಐತಿಹ್ಯ” ವೆಂಬುದು ಈ ಅರ್ಥಗಳಿಂದ ಸಾಕಷ್ಟು ದೂರ ಸರಿದಿದೆಯೆಂದು ಬೇರೆ ಹೇಳಬೇಕಾಗಿಲ್ಲ. ಐತಿಹ್ಯವೆಂದರೆ ಈಗ ವ್ಯಕ್ತಿ, ಸ್ಥಳ ಅಥವಾ ಘಟನೆಯೊಂದರ ಸುತ್ತ ಸಾಂಪ್ರದಾಯಿಕವಾಗಿ ಮತ್ತು ಯಾವುಯಾವುವೋ ಮೂಲ ಸಂಗತಿಗಳ ಮೇಲೆ ಆಧರಿತವಾಗಿ ಬಂದ ಕಥನ ಎಂದು ಸಾಮಾನ್ಯವಾದ ಅರ್ಥ ಪಡೆದುಕೊಂಡಿದೆ. “ಐತಿಹ್ಯ” ಕೆಲವು ವೇಳೆ ಸತ್ಯ ಘಟನೆಯೊಂದರಿಂದಲೇ ಹುಟ್ಟಿಕೊಂಡಿರಬಹುದು; ಎಂದರೆ, ಅದು ನಿಜವಾದ ಚರಿತ್ರೆಯನ್ನೊಳಗೊಂಡಿರಬಹುದು. ಆದರೆ ಯಾವತ್ತೂ ಅದರಲ್ಲಿ ಚರಿತ್ರೆಯೇ ಇರುತ