ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಏಪ್ರಿಲ್, 2024 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ನೊಳಂಬರ ಇತಿಹಾಸ

ನೊಳಂಬ ಕರ್ನಾಟಕದ ಈಗಿನ ಚಿತ್ರದುರ್ಗ ಜಿಲ್ಲೆ ಮತ್ತು ಅದರ ಸುತ್ತ ಮುತ್ತಣ ಪ್ರದೇಶವನ್ನೊಳಗೊಂಡಿದ್ದ ನೊಳಂಬಳಿಗೆ ಸಾಸಿರ ಎಂಬ ಪ್ರಾಂತ್ಯದ ಅಧಿಪತಿಗಳಾಗಿ 8ನೆಯ ಶತಮಾನದಲ್ಲಿ ಆಳ್ವಿಕೆಯನ್ನಾರಂಭಿಸಿ, ಮುಂದಿನ ಎರಡು ಶತಮಾನಗಳಲ್ಲಿ ಪ್ರಾಬಲ್ಯಗಳಿಸಿ, ಈಗಿನ ಚಿತ್ರದುರ್ಗ, ತುಮಕೂರು, ಕೋಲಾರ, ಬೆಂಗಳೂರು, ಜಿಲ್ಲೆಗಳನ್ನೂ ನೆರೆಯ ಅನಂತಪುರ, ಚಿತ್ತೂರು, ಧರ್ಮಪುರಿ ಜಿಲ್ಲೆಗಳನ್ನೂ ಒಳಗೊಂಡಿದ್ದ ನೊಳಂಬವಾಡಿ 32000 ಪ್ರಾಂತ್ಯದ ಪ್ರಭುಗಳಾಗಿ 11ನೆಯ ಶತಮಾನದ ಮಧ್ಯದವರೆಗೆ ಆಳ್ವಿಕೆ ನಡೆಸಿದ ಸಾಮಂತ ರಾಜರ ಮನೆತನ. ತಲಕಾಡಿನ ಗಂಗರೂ ರಾಷ್ಟ್ರಕೂಟರೂ ಕಲ್ಯಾಣ ಚಾಳುಕ್ಯರೂನೊಳಂಬರಿಗೆ ಸ್ವಲ್ಪಕಾಲ ಅಧೀನರಾಗಿದ್ದರು. ಕದಂಬ, ಗಂಗ ಮತ್ತು ಕಲ್ಯಾಣ ಚಾಳುಕ್ಯರೊಂದಿಗೆ ಇವರು ವಿವಾಹ ಸಂಬಂಧ ಬೆಳೆಸಿದ್ದರು. ಬಾಣರು, ವೈದುಂಬರು, ಚೋಳರು ಮುಂತಾದವರಿಗೂ ಇವರಿಗೂ ರಾಜಕೀಯ ಸಂಬಂಧವಿತ್ತು. ನದಿಯ ಲಾಂಛನ ಹೊಂದಿದ್ದ ಇವರ ರಾಜಧಾನಿ ಪೆಂಜೀರು ಅಥವಾ ಹೆಂಜೇರು. ಆಂಧ್ರ ಪದೇಶದ ಅನಂತಪುರ ಜಿಲ್ಲೆಯ ಹೇಮಾವತಿಯೇ ಇದೆಂದು ಗುರುತಿಸಲಾಗಿದೆ. ನೊಳಂಬ ಎಂಬ ಹೆಸರು ಹೇಗೆ ಬಂತೆಂಬುದು ಸ್ಪಷ್ಟವಾಗಿಲ್ಲ. ಈಶ್ವರ ವಂಶಜನಾದ ಕಂಚೀಪತಿ ಎಂದು ಶಾಸನವೊಂದರಲ್ಲಿ ವರ್ಣಿತನಾಗಿರುವ ತ್ರಿಣಯನ ಪಲ್ಲವ ಎಂಬುವನು ನೊಳಂಬರ ಮೂಲಪುರುಷ. ಇವನ ವಂಶದಲಿ ಹುಟ್ಟಿದವನು ಮಂಗಳ ನೊಳಂಬಾಧಿ ರಾಜ (ಸು. 730-ಸು. 775). ಹೇಮಾವತಿ ಶಾಸನದ ಪ್ರಕಾರ ಇವನು ಕಿರಾತ ನೃಪತಿಯನ್ನು ಜಯಿಸಿದ; ಕರ್ಣಾಟರಿಂ